ಶಿಕ್ಷಕರಿಗೆ ಇಂದಿನಿಂದ ಬಿಸಿಯೂಟ ಸವಾಲು!

ಆಹಾರಧಾನ್ಯ ಖರೀದಿ ಶಾಲೆಯ ಹೆಗಲಿಗೆ ; ಪಾಠದ ಜತೆಗೆ ಖರೀದಿ ಹೊರೆ

Team Udayavani, Oct 21, 2021, 6:50 AM IST

ಶಿಕ್ಷಕರಿಗೆ ಇಂದಿನಿಂದ ಬಿಸಿಯೂಟ ಸವಾಲು!

ಸಾಂದರ್ಭಿಕ ಚಿತ್ರ

ಮಂಗಳೂರು: ದಸರಾ ರಜೆ ಮುಗಿದು ಗುರುವಾರದಿಂದ‌ “ಬಿಸಿಯೂಟ ಸಹಿತ ಶಾಲೆ’ ಆರಂಭಿಸುವುದಾಗಿ ಸರಕಾರ ಘೋಷಿಸಿದೆ.ಆದರೆ ಬಹುತೇಕ ಶಾಲೆಗಳಿಗೆ ಅಕ್ಕಿ ಹೊರತುಪಡಿಸಿ ಬೇಳೆ ಕಾಳು, ಎಣ್ಣೆ, ತರಕಾರಿ ಈ ಬಾರಿ ಆಹಾರ ನಿಗಮದಿಂದ ಬಂದೇ ಇಲ್ಲ!

ದಸರಾ ರಜೆಯ ವೇಳೆಯಲ್ಲಿಯೇ ಬಿಸಿಯೂಟ ಬಗ್ಗೆ ಸರಕಾರ ದಿಢೀರ್‌ ಘೋಷಿಸಿದ್ದರಿಂದ ಆಹಾರ ನಿಗಮದಿಂದ ಅಕ್ಕಿ ಹೊರತುಪಡಿಸಿ ಇತರ ವಸ್ತುಗಳನ್ನು ಒಟ್ಟುಗೂಡಿಸುವುದು ಕಷ್ಟ ಎಂಬ ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ. ಆದರೆ ರಜೆ ಮುಗಿಸಿ ಹಲವು ಶಿಕ್ಷಕರು ಇವತ್ತೇ ಶಾಲೆಗೆ ಬರುವ ಕಾರಣ ಪಠ್ಯ ಚಟುವಟಿಕೆಯ ಜತೆಗೆ ತರಕಾರಿ, ಬೇಳೆ ಸಾಮಗ್ರಿಗಳನ್ನು ಅವರು ಹೊಂದಿಸಬೇಕಾಗಿದೆ.

ಪ್ರತೀ ಬಾರಿ ಆಹಾರ ಧಾನ್ಯಗಳನ್ನು ಎರಡು ತಿಂಗಳಿಗೊಮ್ಮೆ ರಾಜ್ಯದಿಂದ ಜಿಲ್ಲಾ ವ್ಯಾಪ್ತಿಗೆ ಕಳುಹಿಸಲಾಗುತ್ತಿತ್ತು. ಇದಕ್ಕೂ ಮೊದಲು ಟೆಂಡರ್‌ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆಯಬೇಕಾಗುತ್ತದೆ. ಆದರೆ ಈ ಬಾರಿ ಟೆಂಡರ್‌ ಪ್ರಕ್ರಿಯೆ ತತ್‌ಕ್ಷಣಕ್ಕೆ ಕಷ್ಟ. ಆದ್ದರಿಂದ ಆಹಾರಧಾನ್ಯಗಳ ನಿಭಾವಣೆಯನ್ನು ಶಾಲೆಗಳ ಹೆಗಲಿಗೆ “ತಾತ್ಕಾಲಿಕ’ ನೆಲೆಯಲ್ಲಿ ನೀಡಲಾಗಿದೆ.

ಕರಾವಳಿಯ 2.40 ಲಕ್ಷ ಮಕ್ಕಳಿಗೆ ಬಿಸಿಯೂಟ
ಸರಕಾರಿ ಅನುದಾನಿತ ಶಾಲೆಗಳ 6ರಿಂದ 10ನೇ ತರಗತಿಗೆ ಬಿಸಿಯೂಟ ಅ. 21ರಿಂದ ಆರಂಭವಾಗಲಿದೆ. ಅ. 25ರಿಂದ 1ರಿಂದ 5ನೇ ತರಗತಿ ಆರಂಭ ವಾದರೂ ಅವರಿಗೆ ನ. 2ರಿಂದ ಬಿಸಿಯೂಟ ಆರಂಭವಾಗಲಿದೆ. ದ.ಕ. ಜಿಲ್ಲೆಯಲ್ಲಿ 1ರಿಂದ 10ರ ವರೆಗೆ ಒಟ್ಟು 1.59 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 81 ಸಾವಿರ ವಿದ್ಯಾರ್ಥಿಗಳು ಬಿಸಿಯೂಟ ಪಡೆಯಲಿದ್ದಾರೆ. ಇದಕ್ಕಾಗಿ ದ.ಕ. ಜಿಲ್ಲೆ ಯಲ್ಲಿ 3,213 ಹಾಗೂ ಉಡುಪಿ ಯಲ್ಲಿ 1,940 ಅಡುಗೆ ಸಿಬಂದಿ ಇದ್ದಾರೆ. ಮಂಗಳೂರು ನಗರ ವ್ಯಾಪ್ತಿಯ ಬಹುತೇಕ ಸರಕಾರಿ ಶಾಲೆಗಳಿಗೆ ಇಸ್ಕಾನ್‌ ವತಿಯಿಂದಲೇ ಬಿಸಿಯೂಟ ಸರಬರಾಜಾಗಲಿದೆ.

ಇದನ್ನೂ ಓದಿ:ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಖರೀದಿ ಸಂಕಷ್ಟ
ಬೇಳೆಕಾಳುಗಳು, ಎಣ್ಣೆ, ತರಕಾರಿ, ಉಪ್ಪು, ಸಕ್ಕರೆ, ಅಡುಗೆ ಅನಿಲ ಇತ್ಯಾದಿಗಳನ್ನು ಶಾಲೆ ಯಿಂದಲೇ ಖರೀದಿ ಮಾಡ ಬೇಕಾಗಿದೆ. ಅನುದಾನ ಕೊರತೆಯ ಶಾಲೆಗೆ ಇದು ದೊಡ್ಡ ಸವಾಲು. ಜತೆಗೆ ಏಕೋಪಾಧ್ಯಾಯ, ಶಿಕ್ಷಕರ ಕೊರತೆಯ ಶಾಲೆಯಲ್ಲಿ ಇದನ್ನು ನಿಭಾಯಿಸುವುದು ಕಷ್ಟ. ಹೆಚ್ಚಿನ ಶಾಲೆಗಳಲ್ಲಿ ಶಿಕ್ಷಕಿಯರಷ್ಟೇ ಇದ್ದು ಈ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ.

ಸ್ಥಳೀಯವಾಗಿ ಆಹಾರ ಖರೀದಿ
6ರಿಂದ 10ರ ವರೆಗಿನ ಮಕ್ಕಳಿಗೆ ಬಿಸಿಯೂಟ ಗುರುವಾರದಿಂದ ಆರಂಭವಾಗಲಿದೆ. ಆಹಾರ ನಿಗಮದಿಂದ ಆಹಾರ ಧಾನ್ಯ ಸೇರಿದಂತೆ ಸಾಮಗ್ರಿಗಳು ಸರಬರಾಜಾಗುವವರೆಗೆ ಸ್ಥಳೀಯವಾಗಿ ಖರೀದಿಗೆ ಸರಕಾರ ಸೂಚಿಸಿದೆ. ಇದು ಕೇವಲ ತಾತ್ಕಾಲಿಕ ಕ್ರಮ. ನವೆಂಬರ್‌ 1ರಿಂದ ಈ ಪ್ರಕ್ರಿಯೆ ಸರಿಯಾಗಲಿದೆ. ಅನುದಾನ ಬಳಕೆಗೆ ಅನುಮತಿ ನೀಡಲಾಗಿದೆ.
– ಮಲ್ಲೇಸ್ವಾಮಿ, ಎನ್‌.ಎಚ್‌. ನಾಗೂರ,
ದ.ಕ., ಉಡುಪಿ, ಡಿಡಿಪಿಐಗಳು

- ದಿನೇಶ್‌ ಇರಾ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.