ಕನ್ನಡ ಕಟ್ಟಾಳು ಪಾಟೀಲ ಪುಟ್ಟಪ್ಪಗೆ ಕಂಬನಿ
Team Udayavani, Mar 18, 2020, 2:05 PM IST
ಗದಗ: ಹಿರಿಯ ಪತ್ರಕರ್ತ, ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಗಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಪಾಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಎಂ. ಶರೀಫನವರ ಮಾತನಾಡಿ, ಪಾಪು ಅವರು ಕೇವಲ ಪತ್ರಕರ್ತರಾಗಿರದೇ, ಕೆಚ್ಚೆದೆಯ ಹೋರಾಟಗಾರರೂ ಆಗಿದ್ದರು. ನಾಡಿನ ನೆಲ, ಜಲ ಹಾಗೂ ಭಾಷೆಯ ವಿಷಯಕ್ಕೆ ಧಕ್ಕೆ ಬಂದಾಗಲೆಲ್ಲ ಗಟ್ಟಿ ಧ್ವನಿಯಲ್ಲಿ ಧ್ವನಿ ಎತ್ತಿ ನಾಡಿನ ಸಾಕ್ಷಿ ಪ್ರಜ್ಞೆಯಾಗಿದ್ದರು ಎಂದು ನುಡಿನಮನ ಸಲ್ಲಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕುಷ್ಟಗಿ, ಪ್ರಜಾಪಥಸಂಪಾದಕ ರಾಜು ಹೆಬ್ಬಳ್ಳಿ, ಪತ್ರಕರ್ತ ಆನಂದಯ್ಯ ವಿರಕ್ತಮಠ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಜಿತಕುಮಾರ ಹೊಂಬಾಳಿ, ಹಿರಿಯ ಪತ್ರಕರ್ತ ಗಣೇಶ ಪೈ, ರಾಮಣ್ಣ ವಗ್ಗಿ, ಅನಿಲ್ ತೆಂಬದಮನಿ, ಮಂಜುನಾಥ ಶಿರಸಂಗಿ, ವೀರೇಂದ್ರ ನಾಗಲದಿನ್ನಿ, ಮಹಾಲಿಂಗಯ್ಯ ಹಿರೇಮಠ, ಚಮನ್ ಹೊಸಮನಿ, ಶಂಕರ ಗುರಿಕಾರ, ಮಂಜುನಾಥ ರಾಠೊಡ, ಎಸ್.ಎಂ. ಸೈಯದ್, ಅಪ್ಪಾಸಾಬ ಚಿನಗುಂಡಿ, ಖಲೀಲ್ ಅಹಮ್ಮದ್ ಶೇಖ್, ನಾಗರಾಜ ಕಟ್ಟಿಮನಿ, ನಾಗರಾಜ ಬೆಳವಡಿ, ಪರಶುರಾಮ ಹಳ್ಳದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ