ದೇವಸ್ಥಾನಗಳ ಸ್ಥಳ ಒತ್ತುವರಿ ಪ್ರಕರಣಗಳು ಕಡಿಮೆ

ಕರಾವಳಿಯ ಮುಜರಾಯಿ ದೇವಸ್ಥಾನಗಳಲ್ಲಿ 700 ಎಕ್ರೆಗೂ ಅಧಿಕ ಜಮೀನು!

Team Udayavani, Jan 15, 2023, 7:32 AM IST

Udayavani Kannada Newspaper

ಉಡುಪಿ: ರಾಜ್ಯ ಮುಜರಾಯಿ ಇಲಾಖೆಯ ನಿರ್ದೇಶನದಂತೆ ಅಧಿಸೂಚಿತ ದೇವಸ್ಥಾನಗಳ ಜಮೀನು ಸರ್ವೆ ಕಾರ್ಯ ನಡೆಯುತ್ತಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎ ದರ್ಜೆಯ ದೇವಸ್ಥಾನಗಳಲ್ಲಿ 700 ಎಕ್ರೆಗೂ ಅಧಿಕ ಜಮೀನು ಹಾಗೂ ಬಿ- ದರ್ಜೆಯ ದೇವಸ್ಥಾನಗಳಲ್ಲಿ 170 ಎಕ್ರೆಗೂ ಅಧಿಕ ಜಮೀನು ಇರುವುದು ತಿಳಿದು ಬಂದಿದೆ.

ಭೂ ಮಾಪನ ಇಲಾಖೆಯಿಂದ ದೇವಸ್ಥಾನಗಳ ಜಮೀನು ಸರ್ವೆ ನಡೆಯಬೇಕಿದೆ. ಆದರೆ ಸಿಬಂದಿ ಕೊರತೆಯಿಂದ ಸರ್ವೆ ವಿಳಂಬವಾಗುತ್ತಿದ್ದು, ಪರವಾನಿಗೆ ಹೊಂದಿರುವ ಭೂ ಮಾಪಕರನ್ನು ಬಳಸಿಕೊಂಡು ಅಧಿಸೂಚಿತ ಧಾರ್ಮಿಕ ಸಂಸ್ಥೆಗಳ ಜಮೀನು ಅಳತೆ ಪ್ರಕ್ರಿಯೆ ಆದಷ್ಟು ಬೇಗ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ಇಲಾಖೆಯಿಂದ ಈಗಾಗಲೇ ಸೂಚನೆಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ 26 ಎ ದರ್ಜೆಯ ದೇವಸ್ಥಾನಗಳ ಸ್ವಾಧೀನದಲ್ಲಿ 237.4 ಎಕ್ರೆಗೂ ಅಧಿಕ ಭೂಮಿಯಿದೆ. 7 ಬಿ-ದರ್ಜೆಯ ದೇವಸ್ಥಾನದ ವ್ಯಾಪ್ತಿಯಲ್ಲಿ 71.99 ಎಕ್ರೆ ಜಮೀನಿದೆ. ದ.ಕ. ಜಿಲ್ಲೆಯಲ್ಲಿ 43 ಎ ದರ್ಜೆಯ ದೇವಸ್ಥಾನಗಳಿದ್ದು, 467.99 ಎಕ್ರೆ ಜಮೀನು ಹೊಂದಿವೆ. ಬಿ- ದರ್ಜೆಯ 37 ದೇವಸ್ಥಾನಗಳಲ್ಲಿ 77 ಎಕ್ರೆ ಭೂಮಿಯಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ಬಹುತೇಕ ದೇವಸ್ಥಾನಗಳು ತಮ್ಮದೇ ಜಮೀನು ಹೊಂದಿದ್ದರೂ ಸರಿಯಾದ ದಾಖಲೆಗಳು ಇಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಸರ್ವೆ ಆಗಿಲ್ಲ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಪ್ರಸ್ತುತ 205 ಎ- ದರ್ಜೆಯ ಹಾಗೂ 193 ಬಿ ದರ್ಜೆಯ ದೇವಸ್ಥಾನಗಳು ಹೊಂದಿರುವ ಆಸ್ತಿಯ ಪಟ್ಟಿಯನ್ನು ಇಲಾಖೆಯಿಂದಲೇ ಸಿದ್ಧಪಡಿಸಲಾಗಿದೆ ಮತ್ತು ಸರ್ವೆ ಕಾರ್ಯವೂ ನಡೆಯುತ್ತಿದೆ.

ಒತ್ತುವರಿ ಆರೋಪ
ದೇವಸ್ಥಾನದ ಜಮೀನನ್ನು ಸಂಘ ಸಂಸ್ಥೆಗಳು ತಮ್ಮ ಅಧೀನಕ್ಕೆ ಪಡೆದುಕೊಳ್ಳುತ್ತಿರುವುದು ಈಗಾಗಲೇ ಇಲಾಖೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನಗಳ ಒತ್ತುವರಿಯಾಗಿರುವ ಜಮೀನು, ಸ್ಥಿರಾಸ್ತಿಗಳ ತೆರವಿಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ 5,720 ದೇವಸ್ಥಾನಗಳ ಬಾಬ್ತು¤ ಅಳತೆ ಮಾಡಲಾಗಿದೆ. 302. 26 ಎಕ್ರೆ ಜಮೀನು ಒತ್ತುವರಿಯಾಗಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿಗಳಿಗೆ ಸೂಚನೆ
ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ದೇವಸ್ಥಾನದ ಜಮೀನು ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅದರಂತೆ ಸರ್ವೆಕಾರ್ಯ ಪೂರ್ಣಗೊಂಡಿರುವ ಅಥವಾ ಒತ್ತುವರಿ ಸಾಬೀತಾಗಿರುವ ಕಡೆಗಳಲ್ಲಿ ತೆರವು ಪ್ರಕ್ರಿಯೆ ನಡೆಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಕರಣ ತೀರ ಕಡಿಮೆಯಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.