ಬಿಜೆಪಿಯವರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ: ಸಿದ್ದರಾಮಯ್ಯ

ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ

Team Udayavani, Apr 29, 2022, 9:44 AM IST

1siddaramaih

ಬೆಂಗಳೂರು: ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಷೆ, ಪ್ರದೇಶಗಳು ನಮ್ಮ ನೀತಿ-ನಿಲುವು. “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು. ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ. ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರಭಾಷೆ. ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಗೆ ನೀಡಿದ ನಾಯಕತ್ವ ಸೂತ್ರದಲ್ಲಿ ರಾಹುಲ್-ಪ್ರಿಯಾಂಕಾ ಹೆಸರಿಲ್ಲ:ಪ್ರಶಾಂತ್ ಕಿಶೋರ್

ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ ಎಂದರು.

ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ ಎಂದು ಹೇಳಿದರು.

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಎಂದೆಂದಿಗೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ. ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ ಎಂದರು.

ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.