ಕೆಳ ಹಂತದಲ್ಲಿ ಹಾರಿದ ಕಾಪ್ಟರ್: ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ
Team Udayavani, Jan 27, 2020, 6:55 AM IST
ಬೆಂಗಳೂರು: ಗಣರಾಜ್ಯ ದಿನ ಪ್ರಯುಕ್ತ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಪುಷ್ಪವೃಷ್ಟಿಗೆ ನಿಯೋಜಿಸಿದ್ದ ಹೆಲಿಕಾಪ್ಟರ್ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದು, ಆತಂಕಕ್ಕೆ ಕಾರಣವಾಯಿತು.
ವೇದಿಕೆ ಮುಂಭಾಗದಲ್ಲಿ ಎದ್ದ ಧೂಳು ವೇದಿಕೆಯನ್ನಾವರಿಸಿದ್ದು, ಈ ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆೆ.
ಪುಷ್ಪ ವೃಷ್ಟಿಗೆ ಐಎಎಫ್ ಕಾಪ್ಟರ್ ನಿಯೋಜಿಸ ಲಾಗಿತ್ತು. ಅದು ಸಾಕಷ್ಟು ಕೆಳಭಾಗದಲ್ಲಿ ಹಾರಾಟ ನಡೆಸಿ, ಧೂಳೆಬ್ಬಿಸಿತು. ಪುಷ್ಪವೃಷ್ಟಿಗೂ ಮುಂಚೆ ಅಲ್ಲಿ ನೆರೆದಿದ್ದವರ ಮೇಲೆ ಧೂಳು ಹಾರಿತ್ತು. ವೇದಿಕೆ ಮೇಲೆ ಧ್ವಜಾರೋಹಣ ನಡೆಸಿ ಧ್ವಜಕ್ಕೆ ಗೌರವ ಸಲ್ಲಿಸುತ್ತಿದ್ದ ರಾಜ್ಯಪಾಲ ವಿ.ಆರ್. ವಾಲಾ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಇತರ ಗಣ್ಯರ ಮೇಲೆಯೂ ಧೂಳು ಬಿತ್ತು. ಅವರು ಇದರಿಂದ ತಪ್ಪಿಸಿಕೊಳ್ಳಲು ಹಿಂದೆ ಸರಿದು ಕಣ್ಣು ಮುಚ್ಚಿಕೊಂಡ ಘಟನೆ ನಡೆಯಿತು.
ಹದ್ದುಗಳು ಹಾರಾಡುತ್ತಿದ್ದುದರಿಂದ ಅನಿ ವಾರ್ಯವಾಗಿ ಹೆಲಿಕಾಪ್ಟ್ರ್ನ ಹಾರಾಟದ ಎತ್ತರವನ್ನು ಕಡಿಮೆ ಮಾಡಬೇಕಾಯಿತು ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ವರದಿ ಕೇಳಲಾಗುವುದು. ಇದುವರೆಗೂ ಈ ರೀತಿಯ ಘಟನೆ ನಡೆದಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ
– ಭಾಸ್ಕರ್ರಾವ್, ನಗರ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ