ವಿದೇಶದಲ್ಲೂ ಬದಿ ಕುಟುಂಬದ “ಕೊಳಲು’ ನಾದ
Team Udayavani, Jan 3, 2022, 12:22 PM IST
ಸಿಂಧನೂರು: ಸಂಗೀತವೇ ಉಸಿರಾದರೆ ಒಂದಿಲ್ಲೊಂದು ರೀತಿಯಲ್ಲಿ ಕೊಡುಗೆ ನೀಡಲು ಹಂಬಿಸಲುತ್ತಾರೆನ್ನುವುದಕ್ಕೆ ರಾಘವೇಂದ್ರ ಸಾ. ಬದಿ ಕುಟುಂಬ ಸಾಕ್ಷಿಯಾಗಿದೆ.
ಸಿಂಧನೂರಿನಲ್ಲಿ ನೆಲೆಸಿರುವ ಬದಿ ಕುಟುಂಬ ಕಳೆದ 60 ವರ್ಷಗಳಿಂದ ಕೊಳಲು ನಾದಕ್ಕೆ ಮಿಡಿಯುತ್ತಿದೆ. ಇದರ ಫಲವಾಗಿ ಕುಟುಂಬಸ್ಥರು ತಯಾರಿಸುತ್ತಿರುವ ಕೊಳಲುಗಳು ವಿದೇಶದಲ್ಲೂ ಸದ್ದು ಮಾಡುತ್ತಿವೆ. ಬದುಕಿಗಾಗಿ ಬೇರೆ ವೃತ್ತಿಗಳನ್ನು ಅವಲಂಬಿಸಿದ್ದರೂ ಇವರ ಕುಟುಂಬಸ್ಥರು ಅಜ್ಜನ ಕಾಲದಿಂದಲೂ ಕೊಳಲು ನುಡಿಸುವುದನ್ನು ಹವ್ಯಾಸವಾಗಿಸಿಕೊಂಡಿದ್ದಾರೆ. ಇದರ ಪ್ರಭಾವ ಯಾವ ಮಟ್ಟಿಗೆ ಎಂದರೆ ಇವರ ಮನೆಯಲ್ಲಿನ ನಾಲ್ಕು ವರ್ಷದ ಪೋರ ಆಯುಷ್ ಕೂಡ ಕೊಳಲು ನುಡಿಸಿ ಗಮನ ಸೆಳೆಯಲಾರಂಭಿಸಿದ್ದಾನೆ.
ಏನಿದು ಕೊಳಲು ಕುಟುಂಬ?
ರಾಘವ್ ಬದಿ ಅವರ ದೊಡ್ಡಪ್ಪ ವಿಠ್ಠಲ್ ಸಾ. ಬದಿ ಹವ್ಯಾಸಕ್ಕಾಗಿ ಕೊಳಲು ನುಡಿಸುತ್ತಿದ್ದರು. ಆ ರೀತಿ ಹವ್ಯಾಸ ಮಾಡಿಕೊಂಡಿದ್ದ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದರು. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಂಗೀತ ಕ್ಷೇತ್ರಕ್ಕೆ ನೀಡಿದ ಸೇವೆಗೆ ಅವರ ಮನೆ ಬಾಗಿಲಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿತ್ತು. ಅವರ ಬಳಿಕವೂ ಪ್ರೇಮ್ನಾಥ್ ಬದಿ ಕೂಡ ಕೊಳಲು ನುಡಿಸುತ್ತಿದ್ದರು. ಆ ಬಳಿಕ ಪುತ್ರರು ಕೂಡ ಆ ಹವ್ಯಾಸ ಮುಂದುವರಿಸಿಕೊಂಡು ಸಾಗಿದ್ದು, ಇಡೀ ಕುಟುಂಬವೇ ಕೊಳಲಿಗೆ ಧ್ವನಿಯಾಗಿದೆ. ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮ ಇದ್ದಾಗ ಇವರನ್ನು ಆಹ್ವಾನಿಸಲು ದುಂಬಾಲು ಬೀಳಲಾಗುತ್ತದೆ.
ವಿದೇಶಕ್ಕೂ ಕೊಳಲು
ಸುಕಾಲಪೇಟೆ ಮಾರ್ಗದಲ್ಲಿನ ಕಚೇರಿಯೊಂದನ್ನು ಈ ಕುಟುಂಬ ಕೊಳಲು ತಯಾರಿಕೆಗೆ ಮೀಸಲಿಟ್ಟಿದೆ. ಇಲ್ಲಿ ಸಿದ್ಧವಾಗುತ್ತಿರುವ ಕೊಳಲು ವಿದೇಶಕ್ಕೂ ರಫ್ತಾಗುತ್ತಿವೆ. ಡೆನ್ಮಾರ್ಕ್, ನೇಪಾಳ, ಲಂಡನ್, ಅಮೆರಿಕ, ಬಾಂಗ್ಲಾ, ಫ್ರಾನ್ಸ್ಗೂ ಇಲ್ಲಿನ ಕೊಳಲು ಹೋಗಿವೆ. ಆನ್ಲೈನ್ ಮಾರ್ಕೆಂಟಿಂಗ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಅವರಿಗೆ ಸೇವೆ ಒದಗಿಸಲಾರಂಭಿಸಿದ್ದಾರೆ. ಮಹಾರಾಷ್ಟ್ರ, ಬೆಂಗಳೂರಿನಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಇಲ್ಲಿಂದಲೇ ಕೊಳಲು ಕಳುಹಿಸಲಾಗುತ್ತಿದೆ. ವಿಜಯಕುಮಾರ್ ಬದಿ ತಂಡ ಕೊಳಲು ತಯಾರಿಕೆಗೆ ಹೆಚ್ಚಿನ ಒತ್ತು ನೀಡಲಾರಂಭಿಸಿದ್ದಾರೆ. ಸಿಂಧನೂರಿನ ಕುಟುಂಬವೊಂದು ಕೊಳಲಿನ ಮೂಲಕವೇ ತಾಲೂಕಿನಲ್ಲಿ ಪ್ರಖ್ಯಾತಿ ಗಳಿಸಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಇದನ್ನೂ ಓದಿ:ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೋವಿಡ್ ವಿಸ್ತಾರ ಮಾಡಲು ನೋಡುತ್ತಿದೆ: ನಳಿನ್ ಕುಮಾರ್ ಕಟೀಲ್
ಬೆರಳು ಕಟ್ ಆದ್ರೂ ಬಿಡಲಿಲ್ಲ
ಸ್ಟಿಲ್ ಬ್ಯುಸಿನೆಸ್ ಮಾಡುತ್ತಿರುವ ರಾಘವ್ ಬದಿ ಅವರ ಬೆರಳು ಕಟ್ ಆಗಿತ್ತು. ಆಗ ಐದಾರು ವರ್ಷಗಳ ಕಾಲ ಅವರು ಕೊಳಲು ನುಡಿಸಲು ಸಾಧ್ಯವಾಗಿರಲಿಲ್ಲ. ಆದರೆ, ಕೊಳಲಿನ ಮೇಲಿನ ಮೋಹ ಅವರನ್ನು ಕೈ ಬಿಡಲಿಲ್ಲ. ನಿಧಾನವಾಗಿ ನುಡಿಸಲು ಆರಂಭಿಸುತ್ತಲೇ ಮತ್ತೆ ಹಾದಿಗೆ ಮರಳಿದ್ದಾರೆ. ಇಂದು ಸರಾಗವಾಗಿ ಅವರು ಕೊಳಲು ನುಡಿಸಲು ಆರಂಭಿಸಿದರೆ, ಇಡೀ ಸಭೆಗಳೇ ನಿಶ್ಯಬ್ದಗೊಳ್ಳುತ್ತವೆ.
ಪುಟ್ಟ ಪೋರರೂ ಆಕರ್ಷಣೆ
ಬದಿ ಕುಟುಂಬದ ಸದಸ್ಯ 14 ವರ್ಷದ ವಿರಾಟ್ ಕೂಡ ಕೊಳಲು ನುಡಿಸುವುದಷ್ಟೇ ಅಲ್ಲ; ಯಾವುದೇ ಕಾರ್ಯಕ್ರಮ ಇದ್ದರೆ ಇಡೀ ಜನರನ್ನು ಆಕರ್ಷಿಸಿ ಇಡುವಷ್ಟರ ಮಟ್ಟಿಗೆ ಬೆಳೆದಿದ್ದಾರೆ. 4 ವರ್ಷದ ಪೋರ ಆಯುಷ್ ಕೂಡ ಸಾಥ್ ನೀಡುತ್ತಿದ್ದು, ಮಕ್ಕಳು, ಮೊಮ್ಮಕ್ಕಳಿಗೂ ಅದೇ ವಿದ್ಯೆಯನ್ನು ಧಾರೆ ಎರೆಯುತ್ತಿರುವ ಕುಟುಂಬದ ನಡೆ ಶ್ಲಾಘನೆಗೆ ಪಾತ್ರವಾಗಿದೆ.
-ಯಮನಪ್ಪ ಪವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ