ಚುಷುಲ್‌ ವಲಯದ ಆಕ್ರಮಣಕ್ಕೆ ಒಪ್ಪಿದ್ದ ಸರಕಾರ


Team Udayavani, Dec 9, 2020, 7:27 AM IST

ಚುಷುಲ್‌ ವಲಯದ ಆಕ್ರಮಣಕ್ಕೆ ಒಪ್ಪಿದ್ದ ಸರಕಾರ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕಳೆದ ಮೇ ತಿಂಗಳಲ್ಲಿ ಕೇಂದ್ರ ಸರಕಾರದ ಒಪ್ಪಿಗೆ ದೊರೆತ ಬಳಿಕವೇ ಭಾರತೀಯ ಸೇನೆಯು ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯುದ್ದಕ್ಕೂ 6 ರಿಂದ 7 ಪ್ರಮುಖ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿ ಚೀನಗೆ ಸಡ್ಡು ಹೊಡೆಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜಕೀಯ ಮಟ್ಟದಿಂದ ಅನುಮತಿ ದೊರೆತ ಕೂಡಲೇ ಸೇನೆಯು ಅದಕ್ಕೆ ತಕ್ಕುದಾದ ಕಾರ್ಯತಂತ್ರ ರೂಪಿಸಿತು. ಬಳಿಕ ಆಗಸ್ಟ್‌ ಅಂತ್ಯದಲ್ಲಿ ಮುಖ್‌ಪರಿ, ರೆಜಾಂಗ್‌ ಲಾ, ರೆಚಿನ್‌ ಲಾ, ಗುರುಂಗ್‌ ಹಿಲ್‌, ಪ್ಯಾಂಗಾಂಗ್‌ ಸೋ ಸರೋವರದ ದಕ್ಷಿಣ ತಟ ಪ್ರದೇಶವನ್ನು ಆಕ್ರಮಿಸಿಕೊಳ್ಳುವಲ್ಲಿ ಸೇನೆಯು ಯಶಸ್ವಿಯಾಯಿತು.

ನಾವು ಯಾವ ಪ್ರದೇಶದಲ್ಲಿ ಮುನ್ನುಗ್ಗಬಹುದು ಎಂಬುದನ್ನು ಮೊದಲು ನಿರ್ಧರಿಸಿ. ನಂತರ ಚುಶುಲ್‌ ಉಪವಲಯದಲ್ಲಿನ ಪ್ರಮುಖ ಪ್ರದೇಶಗಳಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ಚೀನ ಸೇನೆಗೆ ಶಾಕ್‌ ನೀಡಿ ಎಂದು ಮೇ ತಿಂಗ ಳಲ್ಲಿ ರಾಜಕೀಯ ನಾಯಕತ್ವವು ಸೇನಾ ಪಡೆಗಳಿಗೆ ನಿರ್ದೇಶನ ನೀಡಿತ್ತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ನ.6ರವರೆಗೆ ಭಾರತ ಮತ್ತು ಚೀನ ನಡುವೆ 8 ಸುತ್ತುಗಳ ಮಾತುಕತೆ ನಡೆದಿದೆ. ಆರಂಭದಲ್ಲಿ ಚೀನವು ಫಿಂಗರ್‌ 4ರಿಂದ 8ರವರೆಗೆ ತನ್ನ ಸೇನೆಯನ್ನು ಹಿಂಪಡೆದುಕೊಳ್ಳಲು ಒಪ್ಪಿತ್ತು. ಆದರೆ, ನಂತರದಲ್ಲಿ ರಾಗ ಬದಲಿಸಿತು. ಸೆಪ್ಟೆಂಬರ್‌ನಿಂದೀಚೆಗೆ ಭಾರತೀಯ ಸೇನೆಯು ಚುಷುಲ್‌ ವಲಯದಿಂದ ಹಿಂದೆ ಸರಿಯಲಿ ಎಂಬ ಬೇಡಿಕೆಯನ್ನು ಚೀನ ಇಡ ತೊಡಗಿತು. ಆದರೆ, ದಕ್ಷಿಣ ಭಾಗವನ್ನು ಮೊದಲು ತೆರವುಗೊಳಿಸುವ ಪ್ರಶ್ನೆಯೇ ಇಲ್ಲ. ಸಮಸ್ಯೆಗೆ ಪರಿಹಾರವು ಪ್ಯಾಕೇಜ್‌ ರೀತಿಯೇ ಇರಬೇಕಾಗುತ್ತದೆ. ಎರಡೂ ಪಡೆಗಳು ಪರಸ್ಪರ ಒಪ್ಪಿಕೊಂಡು ಹಿಂದೆ ಸರಿಯುವವರೆಗೂ ನಾವು ಹಿಂದೆ ಸರಿಯಲ್ಲ ಎಂದು ಭಾರತ ಸ್ಪಷ್ಟವಾಗಿ ನುಡಿಯಿತು ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜ.ನರವಣೆ ಪ್ರವಾಸ ಶುರು
ಕೊಲ್ಲಿ ರಾಷ್ಟ್ರಗಳ ಜತೆಗೆ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಭೂಸೇನಾ ಮುಖ್ಯಸ್ಥ ಜ. ಎಂ.ಎಂ.ನರವಣೆ ಯುಎಇ, ಸೌದಿ ಅರೇಬಿಯಾಕ್ಕೆ ಆರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಭಾರತದ ಭೂಸೇನಾ ಮುಖ್ಯಸ್ಥರು ಇದೇ ಮೊದಲ ಬಾರಿಗೆ ಎರಡು ಕೊಲ್ಲಿ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಪಾಕಿಸ್ಥಾನ ಮತ್ತು ಚೀನಗಳು ದೇಶದ ವಿರುದ್ಧ ವಿವಿಧ ರೀತಿಯಲ್ಲಿ ಮಸಲತ್ತು ನಡೆಸಿರುವಂತೆಯೇ ಈ ಪ್ರವಾಸ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.