ರೆಬೆಲ್ಸ್ ವಿರುದ್ಧ ಕೈ ಕ್ರಮವಿಲ್ಲ

ಕೆಪಿಸಿಸಿಗೆ ವಿವರಣೆ ನೀಡಿದ ಮಂಡ್ಯ ನಾಯಕರು

Team Udayavani, May 4, 2019, 6:00 AM IST

18

ಬೆಂಗಳೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಜತೆ ಸಭೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಮಾಜಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಮಾಜಿ ಶಾಸಕರಿಗೆ ಕೆಪಿಸಿಸಿ ಬುಲಾವ್‌ ನೀಡಿ ಸ್ಪಷ್ಟನೆ ಪಡೆದಿದೆ. ಜತೆಗೆ, ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಪ್ರಶ್ನೆ ಇಲ್ಲ ಎಂದೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಗೆ ಸಚಿವ ಜಮೀರ್‌ ಅಹಮದ್‌ ಜತೆ ಆಗಮಿಸಿದ ಚೆಲುವರಾಯಸ್ವಾಮಿ, ರಮೇಶ್‌ ಬಂಡಿ ಸಿದ್ದೇಗೌಡ, ನರೇಂದ್ರಸ್ವಾಮಿ, ಕೆ.ಬಿ.ಚಂದ್ರಶೇಖರ್‌ ಅವರು, ಲೋಕಸಭೆ ಚುನಾವಣೆಗೂ ಸುಮಲತಾ ಅವರ ಜತೆ ಊಟ ಮಾಡಿದ್ದಕ್ಕೂ ಸಂಬಂಧವಿಲ್ಲ. ನಾವಾಗಿಯೇ ಅವರನ್ನು ಭೇಟಿ ಆಗಿಲ್ಲ. ಇಂಡವಾಳು ಸಚ್ಚಿದಾನಂದ ಅವರು ಹುಟ್ಟುಹಬ್ಬ ಪ್ರಯುಕ್ತ ಆಯೋಜಿಸಿದ್ದ ಔತಣಕೂಟದಲ್ಲಿ ನಾವೂ ಪಾಲ್ಗೊಂಡಿದ್ದೆವು, ಸುಮಲತಾ ಅವರೂ ಪಾಲ್ಗೊಂಡಿದ್ದರು ಎಂದು ಸಮಜಾಯಿಷಿ ನೀಡಿದರು.

ಮೊದಲಿನಿಂದಲೂ ನಾವು ಜೆಡಿಎಸ್‌ನಿಂದ ದೂರವೇ ಉಳಿದಿದ್ದೇವೆ. ಅದನ್ನು ನಿಮ್ಮ ಗಮನಕ್ಕೂ ತಂದಿದ್ದೇವೆ. ಏನು ಸಮಸ್ಯೆ ಆಗಿತ್ತು ಎಂಬುದನ್ನೂ ತಿಳಿಸಿದ್ದೇವೆ. ನಾವೇನೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮೊದಲಿನಿಂದಲೂ ಅಂತರ ಕಾಯ್ದುಕೊಂಡಿದ್ದೇವು, ಅದನ್ನೇ ಮುಂದುವರಿಸಿದ್ದೇವೆ. ಮಂಡ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್‌ ಬೆಳೆಸಲು ಆಗುತ್ತಾ? ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ನಾವೇ ಉತ್ತರ ಕೊಡಬೇಕಲ್ಲವೇ ಎಂದು ಪ್ರಶ್ನಿಸಿದರು ಎಂದು ಹೇಳಲಾಗಿದೆ. ಆದರೆ, ದಿನೇಶ್‌ ಅವರು, ಆದರೂ ಇಂತಹ ಸಂದರ್ಭದಲ್ಲಿ ಸುಮಲತಾ ಅವರ ಜತೆಕಾಣಿಸಿಕೊಂಡಿದ್ದು ಗೊಂದಲಗಳಿಗೆ ಕಾರಣವಾಗಿದೆ. ಹೀಗಾಗಿ, ಸ್ಪಷ್ಟನೆ ನೀಡಲು ಹೇಳಿದ್ದಕ್ಕೆ ಮೌಖಿಕವಾಗಿ ಸ್ಪಷ್ಟನೆ ನೀಡಿದರು.

ಮತ್ತೂಂದು ಮೂಲಗಳ ಪ್ರಕಾರ, ಸುಮಲತಾ ಜತೆ ಸಭೆ ವಿಚಾರವನ್ನು ಜೆಡಿಎಸ್‌ ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಿರುವುದರಿಂದ ಪ್ರಕರಣ ಗಂಭೀರವಾಗಬಹುದು ಎಂದು ಮಾಜಿ ಶಾಸಕರನ್ನು ಕರೆಸಿ ಸ್ಪಷ್ಟನೆ ‘ಶಾಸ್ತ್ರ’ ಮುಗಿಸಲಾಯಿತು. ದಿನೇಶ್‌ ಗುಂಡೂರಾವ್‌ ಅವರು ಸಹ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿರುವುದರಿಂದ ಸದ್ಯಕ್ಕೆ ವಿಚಾರ ಅಲ್ಲಿಗೆ ಕೈ ಬಿಡಲಾಗಿದೆ ಎಂದು ಹೇಳಲಾಗಿದೆ.

ದೂರ ಉಳಿದಿದ್ದೇವೆ: ದಿನೇಶ್‌ ಗುಂಡೂರಾವ್‌ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಚೆಲುವರಾಯಸ್ವಾಮಿ, ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದೆವು. ಆಡೕಯೋ ರಿಲೀಸ್‌ ವಿಚಾರ ಸಂಬಂಧ ಚರ್ಚೆ ನಡೆಸಿದೆವು. ಏನು ಮಾಹಿತಿ ಹೇಳಬೇಕೋ ಅದನ್ನು ಅವರಿಗೆ ತಿಳಿಸಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷ, ಏನು ಮಾಡಬೆಕು ಅನ್ನೋದು ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಯಾವ ವಿಚಾರ ಹೇಗೆ ಹ್ಯಾಂಡಲ್ ಮಾಡಬೇಕು ಎಂಬುದು ಪಕ್ಷದ ನಾಯಕರಿಗೆ ಗೊತ್ತಿದೆ. ಅವರ ತೀರ್ಮಾನಕ್ಕೆ ನಾವೆಲ್ಲವೂ ಬದ್ಧ ಎಂದು ಹೇಳಿದರು.

ಈಗ್ಯಾಕೆ ವಿಡಿಯೋ ಬಿಡುಗಡೆ ಮಾಡಿಸಲಾಗಿದೆ ಅನ್ನೋದು ಗೊತ್ತಿಲ್ಲ, ಊಟ ಮಾಡಿರುವುದಕ್ಕೆ ಇಷ್ಟೇಕೆ ಮಹತ್ವ ಬಂತು ಅನ್ನೋದು ತಿಳಿಯುತ್ತಿಲ್ಲ.ನಾವು ಸುಮಲತಾ ಪರ ಕೆಲಸ ಮಾಡಿಲ್ಲ, ಅಂತರ ಕಾಯ್ದುಕೊಂಡಿದ್ದೇವೆ. ಮೈತ್ರಿ ಅಭ್ಯರ್ಥಿ ವಿಚಾರದಲ್ಲೂ ಮೌನ ವಹಿಸಿದ್ದೆವು ಎಂದು ತಿಳಿಸಿದರು. ಮಂಡ್ಯದಲ್ಲಿ ಪರಿಸ್ಥಿತಿ ಮಿತಿ ಮೀರಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಹೇಳಿದ್ದರು. ಅವರು ಸುಮ್ಮನಿದ್ದಾರೆ, ಆದರೆ, ಯಾರೋ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಹೇಳಿದರು. ನಿಖೀಲ್ ಸೋತರೆ ಚೆಲುವರಾಯಸ್ವಾಮಿ ತಂಡ ಕಾರಣ ಎಂಬ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿ, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ಅದು ಮಂಡ್ಯ ಜನರ ತೀರ್ಮಾನ. ನಾನು ಸೇರಿದಂತೆ ನರೇಂದ್ರಸ್ವಾಮಿ ಸಹಿತ ಯಾರೂ ಎಲ್ಲೂ ಪ್ರಚಾರವೇ ಮಾಡಿಲ್ಲ. ಅವರ ಸೋಲಿಗೆ ನಾವು ಕಾರಣ ಅಂದರೆ ಸರಿಯಾ? ನಮ್ಮನ್ನೇ ಅಸೆಂಬ್ಲಿ ಚುನಾವಣೆಯಲ್ಲಿ ಸೋಲಿಸಿದ್ದಾರೆ. ನಾವು ಯಾರನ್ನಾದರೂ ಗೆಲ್ಲಿಸಲು ಸಾಧ್ಯವಾ? ಮಂಡ್ಯದಲ್ಲಿ ಯಾರು ಸೋತರೂ, ಗೆದ್ದರೂ ಜನರ ತೀರ್ಮಾನ ಎಂದು ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.