ನಗರದಲ್ಲಿ ಇಂದು, ನಾಳೆ ನೀರಿಲ್ಲ

ರೇಷನಿಂಗ್‌ ಮತ್ತೆ ಜಾರಿ

Team Udayavani, May 1, 2019, 6:28 AM IST

reshiong

ಮಹಾನಗರ: ಮಂಗಳೂರಿಗೆ ನೀರುಣಿಸುವ ತುಂಬೆ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್‌ ವ್ಯವಸ್ಥೆ ಮತ್ತೆ ಜಾರಿಗೆ ತರಲು ದ.ಕ. ಜಿಲ್ಲಾಡಳಿತ ತೀರ್ಮಾನಿಸಿದ್ದು, ಇದರಂತೆ ಬುಧವಾರ ಹಾಗೂ ಗುರುವಾರ (ಮೇ 1ರ ಬೆಳಗ್ಗೆ 6ರಿಂದ ಮೇ 2 ಪೂರ್ಣ )
ಮಂಗಳೂರಿನಲ್ಲಿ ನೀರು ಸರಬರಾಜು ಸ್ಥಗಿತವಾಗಲಿದೆ.

ಈ ಮೂಲಕ ಪಾಲಿಕೆ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸœಗಿತಗೊಂಡಿದ್ದ ನೀರು ರೇಷನಿಂಗ್‌ ಮೇ 1ರಿಂದ ಮತ್ತೆ ಜಾರಿಯಾಗಲಿದೆ. ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರು ಸಂಗ್ರಹದಲ್ಲಿ ಇಳಿಮುಖವಾಗುತ್ತಿದ್ದು ಹಾಲಿ ಸಂಗ್ರಹ ಇರುವ ನೀರನ್ನು ಜೂನ್‌ ಮೊದಲನೇ ವಾರದವರೆಗೆ ಸಮರ್ಪಕವಾಗಿ ವಿತರಣೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ 4 ದಿನಗಳ ಒಟ್ಟು 96 ಗಂಟೆಗಳ ಅವಧಿಯಲ್ಲಿ ಎಲ್ಲ ವಾರ್ಡ್‌ಗಳಿಗೆ ಹಾಲಿ ಪೂರೈಕೆ ಮಾಡುತ್ತಿರುವ ರೀತಿಯಲ್ಲಿ ನೀರನ್ನು ಸರಬರಾಜು ಮಾಡಲಾಗುವುದು.

ತದನಂತರ 48 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ತುಂಬೆ ವೆಂಟೆಡ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಗೊಂಡ ಹಿನ್ನೆಲೆಯಲ್ಲಿ ಎ. 11ರಿಂದಲೇ ನೀರಿನ ರೇಷನಿಂಗ್‌ ನಡೆಸಲು ಜಿಲ್ಲಾಡಳಿತ/ ಮನಪಾ ನಿರ್ಧರಿಸಿತ್ತು. ಬಳಿಕ ನಿರ್ಧಾರ ಬದಲಿಸಿ ಚುನಾವಣೆ ಮುಗಿದ ಬಳಿಕ ರೇಷನಿಂಗ್‌ಗೆ ಉದ್ದೇಶಿಸಿದ ಹಿನ್ನೆಲೆಯಲ್ಲಿ ಎ. 18ರ ಸಂಜೆ 6 ಗಂಟೆಯಿಂದ ರೇಷನಿಂಗ್‌ ಆರಂಭಿಸಿತ್ತು. ಹೀಗಾಗಿ ಎ. 18ರಿಂದ 20ರ ಬೆಳಗ್ಗೆಯವರೆಗೆ ನೀರಿರಲಿಲ್ಲ. 20ರಂದು ಬೆಳಗ್ಗಿನಿಂದ ಮತ್ತೆ ನೀರು ಸರಬರಾಜು ಆರಂಭಿಸಿ ಎ. 24ರಂದು ಬೆಳಗ್ಗೆಯವರೆಗೆ ನೀರು ಹರಿಸಲು ಉದ್ದೇಶಿಸಿ ಎ. 24- ಎ. 25ಕ್ಕೆ ರೇಷನಿಂಗ್‌ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತುಂಬೆ ಡ್ಯಾಮ್‌ನಲ್ಲಿ ಆಗ ನೀರಿನ ಪ್ರಮಾಣದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ವಾರದ ರೇಷನಿಂಗ್‌ ಕೈಬಿಡಲಾಗಿತ್ತು.

ಈ ಮಧ್ಯೆ ಸಚಿವ ಖಾದರ್‌ ಎ. 28ರಂದು ತುಂಬೆ ಡ್ಯಾಂಗೆ ಭೇಟಿ ನೀಡಿ, ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟು ಎ. 30ರವರೆಗಿನ ಪರಿಸ್ಥಿತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ಉಲ್ಲೇಖೀಸಿದ್ದರು. ಈಗ ಮಳೆಯ ಸಾಧ್ಯತೆ ಇಲ್ಲದಿರುವ ಹಿನ್ನೆಲೆಯಲ್ಲಿ ರೇಷನಿಂಗ್‌ ಮುಂದುವರಿಸುವ ಅನಿವಾರ್ಯತೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಗಣಿಸಿದೆ. ಇದರಂತೆ ಮೇ ತಿಂಗಳಿನಲ್ಲಿ ರೇಷನಿಂಗ್‌ ಮಾಡುವ ದಿನಾಂಕವನ್ನು ಪ್ರಕಟಿಸಿದೆ.

ಇಲ್ಲಿದೆ ರೇಷನಿಂಗ್‌ ಟೈಮಿಂಗ್‌
ಮಂಗಳೂರು ಪಾಲಿಕೆಯು ತಿಳಿಸಿರುವ ಪ್ರಕಾರ, ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯವರೆಗೆ (48 ತಾಸುಗಳ ಅವಧಿ) ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಬಳಿಕ ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆಯವರೆಗೆ (96 ಗಂಟೆಗಳ ಕಾಲ) ನೀರು ಸರಬರಾಜು ಮಾಡಲಾಗುವುದು. ಬಳಿಕ ಮೇ 9 ರ ಬೆಳಗ್ಗೆ 6 ಗಂಟೆಯವರೆಗೆ ಪೂರೈಕೆ ಸ್ಥಗಿತಗೊಳಿಸಲಾಗುವುದು. ಮೇ 9 ರ ಬೆಳಗ್ಗೆ 6 ಗಂಟೆಯಿಂದ ಮೇ 13ರ ಬೆಳಗ್ಗೆ 6 ಗಂಟೆಯವರೆಗೆ 96 ತಾಸುಗಳ ಕಾಲ ಸರಬರಾಜು ಇರುತ್ತದೆ. ಬಳಿಕ ಮೇ15 ರ ಬೆಳಗ್ಗೆ 6 ಗಂಟೆಯವರೆಗೆ ಸ್ಥಗಿತಗೊಳ್ಳುತ್ತದೆ. ಮೇ 15 ರಂದು 6 ಗಂಟೆಯಿಂದ ಪ್ರಾರಂಭವಾಗುವ ಪೂರೈಕೆ ಮೇ19 ರ ಬೆಳಗ್ಗೆ 6 ಗಂಟೆಯವರೆಗೆ ಸರಬರಾಜು ಮಾಡಲಾಗುತ್ತದೆ. ಬಳಿಕ ಸ್ಥಗಿತಗೊಳ್ಳಲಿದ್ದು ಮೇ 21ರ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಳ್ಳಲಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.