ರೈತರಿಂದ ಟ್ರ್ಯಾಕ್ಟರ್ ಜನತಾ ಪರೇಡ್
ಮೂರು ಮರಣ ಶಾಸನಗಳು ಯಾವೂದೇ ಕಾರಣಕ್ಕೂ ಜಾರಿಗೆ ಬರಬಾರದು ಎಂದು ಆಗ್ರಹಿಸಿದರು.
Team Udayavani, Jan 27, 2021, 4:06 PM IST
ಆಳಂದ: ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ದೆಹಲಿಯಲ್ಲಿ ರೈತರು ನಡೆಸಿದ ಸತ್ಯಾಗ್ರಹಕ್ಕೆ ಬೆಂಬಲಿಸಿ ಪಟ್ಟಣದಲ್ಲಿ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಪಟ್ಟಣದಲ್ಲಿ ಟ್ರ್ಯಾಕ್ಟರ್ ಮೂಲಕ ಜನತಾ ಪರೇಡ್ ನಡೆಸಲಾಯಿತು.
ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಆರಂಭಗೊಂಡ ಟ್ರ್ಯಾಕ್ಟರ್ ನಿಂದ ಜನತಾ ಪರೇಡ್ಅನ್ನು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ತಹಸೀಲ್ ಹತ್ತಿರದ ಸತ್ಯಾಗ್ರಹ ಸ್ಥಳಕ್ಕೆ ತಲುಪಿದ ಮುಖಂಡರು ಮಾತನಾಡಿ, ರೈತರಿಗೆ ಬೇಡವಾದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ರೈತರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಮುಖಂಡ ಮೌಲಾ ಮುಲ್ಲಾ, ರಮೇಶ ಲೋಹಾರ, ಸುಧಾಮ ಧನ್ನಿ, ಪಾಂಡುರಂಗ ಮಾವೀನಕರ್, ಪ್ರಕಾಶ ಜಾನೆ, ಶಂಕಕರಾವ್ ದೇಶಮುಖ, ದಲಿತ ಸೇನೆ ಅಧ್ಯಕ್ಷ ಧರ್ಮಾ ಬಂಗರಗಾ, ಚಂದ್ರಕಾಂತ ಖೋಬ್ರೆ, ಆಶ್ಪಾಕ್ ಮುಲ್ಲಾ, ಫಕ್ರೋದ್ದೀನ್ ಗೋಳಾ ಇದ್ದರು.
ವಾಡಿಯಲ್ಲಿ ಡಿಎಸ್ಎಸ್ ನಿರಶನ ವಾಡಿ: ಗಣರಾಜ್ಯೋತ್ಸವದಂದು ದೇಶಾದ್ಯಂತ ಹೊಸ ಕೃಷಿ ನೀತಿಗಳನ್ನು ಖಂಡಿಸಿ ನಡೆದ ರೈತರ ಐತಿಹಾಸಿಕ ಚಳವಳಿ ಬೆಂಬಲಿಸಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ್ದ ದಸಂಸ ಮುಖಂಡರು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಕೃಷಿ ಮಸೂದೆಗಳ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದರು.ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಮೂರು ಮರಣ ಶಾಸನಗಳು ಯಾವೂದೇ ಕಾರಣಕ್ಕೂ ಜಾರಿಗೆ
ಬರಬಾರದು ಎಂದು ಆಗ್ರಹಿಸಿದರು.
ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶ್ರವಣಕುಮಾರ ಮೊಸಲಗಿ ಮಾತನಾಡಿ, ಸಂಸತ್ತಿನಲ್ಲಿ ಮಂಡಿಸಲಾದ ರೈತ ವಿರೋಧಿ ಮೂರು ಕರಾಳ ಕಾಯ್ದೆಗಳ ಕುರಿತು ಪ್ರಜಾತಾಂತ್ರಿಕವಾಗಿ ಚರ್ಚೆಯಾಗದೆ ಏಕಾಏಕಿ ಜಾರಿಗೆ ತರಲು ಹಟತೊಟ್ಟಿರುವ ಬಿಜೆಪಿ ಸರಕಾರ ರೈತರ ಗೋರಿ ಕಟ್ಟಲು ಮುಂದಾಗಿದೆ ಎಂದು ಆರೋಪಿಸಿದರು. ಡಿಎಸ್ಎಸ್ ಮುಖಂಡರಾದ ರಾಘುವೀರ ಪವಾರ, ಉದಯಕುಮಾರ ಯಾದಗಿರಿ, ಹೋರಾಟವನ್ನು ಬೆಂಬಲಿಸಿ ಪಾಲ್ಗೊಂಡಿದ್ದ
ಕಾಂಗ್ರೆಸ್ ಮುಖಂಡರಾದ ಟೋಪಣ್ಣ ಕೋಮಟೆ, ದೇವಿಂದ್ರ ಕರದಳ್ಳಿ, ಚಂದ್ರಸೇನ ಮೇನಗಾರ, ಝರೀನಾಬೇಗಂ, ಮಹ್ಮದ್ ಗೌಸ್, ನಾಗೇಂದ್ರ
ಜೈಗಂಗಾ, ರಾಜಾ ಪಟೇಲ, ವಿಜಯಕುಮಾರ ಸಿಂಗೆ, ತಿಮ್ಮಯ್ಯ ಪವಾರ, ಬಶೀರ ಖುರೇಶಿ, ಮಲ್ಲಯ್ಯ ಗುತ್ತೇದಾರ, ಮರಗಪ್ಪ ಕಲಕುಟಗಿ, ಅಶ್ರಫ್ ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ