ಹಾಡಿನ ಲೋಕದಲ್ಲೊಬ್ಬ ಶಿವಶಂಕರ


Team Udayavani, Jul 24, 2020, 7:21 PM IST

Shankara singer

ಗಾಯನವೆನ್ನುವುದು ಒಂದು ತಪಸ್ಸಿದ್ದಂತೆ. ಅದು ಎಲ್ಲರಿಗೂ ಒಲಿಯುವುದಿಲ್ಲ. ಅದರ ಸಿದ್ಧಿಗೆ ಕಠಿನ ಪರಿಶ್ರಮ, ಸಾಧನೆ ಅತ್ಯಗತ್ಯ.

ಅದಮ್ಯ ಇಚ್ಛಾಶಕ್ತಿ ಹಾಗೂ ಕಲಿಯಬೇಕೆನ್ನುವ ಹಂಬಲವಿದ್ದರೆ ಗಾನಸರಸ್ವತಿಯೇ ಕಂಠದಲ್ಲಿ ನೆಲೆಗೊಳ್ಳುತ್ತಾಳೆ ಎಂಬುದಕ್ಕೆ ಶಿವಶಂಕರ್‌ ಗೇರುಕಟ್ಟೆ ಸಾಕ್ಷಿ. ಇವರು ಗೇರುಕಟ್ಟೆ ನಿವಾಸಿ ಶಿವಣ್ಣ ಆಚಾರ್ಯ ಮತ್ತು ಜಯಶ್ರೀ ದಂಪತಿಯ ಪ್ರಥಮ ಪುತ್ರ.

ಬಾಲ್ಯದಲ್ಲೇ ಅರಳಿದ ಸಂಗೀತ ಪ್ರೀತಿ
ಹಾಡುವುದೇ ತನ್ನ ಜೀವಾಳ ಎನ್ನುವ ಶಿವಶಂಕರ್‌ ಕೊರಿಂಜದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸಗೈಯುತ್ತಲೇ ಸಂಗೀತದ ಮೇಲೆ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.

ಭಾವಗೀತೆ, ದೇಶಭಕ್ತಿಗೀತೆ, ಜಾನಪದ ಗೀತೆ, ಚಿತ್ರಗೀತೆಗಳು ಇವರ ಕಂಠದಲ್ಲಿ ಸುಶ್ರಾವ್ಯವಾಗಿ ಮೂಡಿಬರುತ್ತಿದ್ದವು. ಶಾಲೆಯಲ್ಲಿ ಕೇವಲ ಹವ್ಯಾಸವಾಗಿ ಹಾಡುತ್ತಿದ್ದ ಇವರ ಹಾಡಿನ ಪಯಣ ಪ್ರತಿಭಾ ಕಾರಂಜಿಯಿಂದ ಪ್ರಾರಂಭವಾಯಿತು. ವಿದ್ಯಾರ್ಥಿ ದೆಸೆಯಲ್ಲೇ ಗಾಯನ ಸ್ಪರ್ಧೆಯಲ್ಲಿ ಹಲವಾರು ಬಹು ಮಾನಗಳನ್ನು ತನ್ನ ಮುಡಿಗೇರಿಸಿ ಕೊಂಡಿದ್ದರು.

ಶಿವಶಂಕರ್‌ ತನ್ನ 11ನೇ ವಯ ಸ್ಸಿನಲ್ಲಿ ವಿದುಷಿ ಶ್ಯಾಮಲಾ ನಾಗರಾಜ್‌ ಕುಕ್ಕಿಲ ಅವರಲ್ಲಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಾಥಮಿಕ ತರಬೇತಿ ಆರಂಭಿಸಿ ದ್ದರಿಂದ ಸಂಗೀತದ ಮೇಲಿನ ಆಸಕ್ತಿ ಇನ್ನಷ್ಟು ಗಟ್ಟಿ ಮಾಡಿತಲ್ಲದೇ ಆ ರಂಗದಲ್ಲಿ ಆಳವಾಗಿ ಅಧ್ಯಯನ ಮಾಡುವಂತೆ ಪ್ರೇರೇಪಿಸಿತು. ಪುಂಜಾಲಕಟ್ಟೆಯ ಸ. ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅವರು ಬೆಳ್ತಂಗಡಿಯಲ್ಲಿರುವ ಶ್ರೀ ಗುರುಮಿತ್ರ ಸಮೂಹದ ಸದಸ್ಯ ರಾಗಿ ಸೇರಿದ್ದರು. ಈ ತಂಡದ ಜತೆಗೂಡಿ ಜಿಲ್ಲಾ ಮತ್ತು ರಾಜ್ಯಮಟ್ಟದ ಯುವಜನಮೇಳದಲ್ಲಿ ಭಾಗವಹಿಸಿದ್ದರು. ಪ್ರತಿ ಸ್ಪರ್ಧೆಯಲ್ಲೂ ಬಹುಮಾನ ಪಡೆದ ಸಾಧನೆ ಮಾಡಿದ್ದರು. 8 ಬಾರಿ ಜಿಲ್ಲಾಮಟ್ಟದ ಸ್ಪರ್ಧೆ ಗಳಲ್ಲಿ ಪ್ರಥಮ ಸ್ಥಾನಿಯಾಗಿದ್ದು ಅವರ ಗಾನ ಪ್ರತಿಭೆಗೆ ಹಿಡಿದ ಕೈಗನ್ನಡಿ.

ಪ್ರಶಸ್ತಿ, ಗೌರವ
2017ರಲ್ಲಿ ರಂಗಗೀತೆ ವಿಭಾಗ ಮತ್ತು 2018ರ ಭಾವಗೀತೆ ವಿಭಾಗದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ, 2016ರಲ್ಲಿ ಮಂಗಳೂರು ಆಕಾಶವಾಣಿ ನಡೆಸಿದ 92.7 ಬಿಗ್‌ ಎಫ್.ಎಂ. ಗೋಲ್ಡನ್‌ ವಾಯ್ಸ…ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆೆ. ಶಿವಶಂಕರ್‌ ಶ್ರೀ ಶಂಕರ ಚಾನೆಲ್‌ ನಡೆಸಿದ ಭಜನ್‌ ಸಾಮ್ರಾಟ್‌ ರಿಯಾಲಿಟಿ ಶೋದಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಉಜಿರೆ ಮತ್ತು ಬೆಳ್ತಂಗಡಿ ಜೆ.ಸಿ.ಐ. ಘಟಕಗಳು ನಡೆಸಿದ ಸ್ಟಾರ್‌ ಸಿಂಗರ್‌ ಸ್ಪರ್ಧೆಗಳೆರಡರಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರಲ್ಲದೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಯುವ ಸಾಂಸ್ಕೃತಿಕ ಸಾಧಕ ಪುರಸ್ಕಾರ, ಜೆ.ಸಿ.ಐ. ಘಟಕದಿಂದ ಸಮ್ಮಾನ, ಕಲಾಕಾರ್‌ ಸಮ್ಮಾನ, ಗಾನ ಕೋಗಿಲೆ ಪ್ರಶಸ್ತಿಯನ್ನು ಕೂಡ ಮುಡಿಗೇರಿಸಿಕೊಂಡಿದ್ದಾರೆ. ನೇತ್ರಾವತಿ ನದಿ ಉಳಿವಿಗಾಗಿ ರಚಿಸಿದ್ದ ನೇತ್ರೆ ಎಂಬ ನಾಟಕಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ.

ಎಂಜಿನಿಯರ್‌ ಆಗಿ ಕರ್ತವ್ಯ
ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಪೆನಿಯೊಂದರಲ್ಲಿ ಎಂಜಿನಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಮತ್ತು ಪ್ರವೃತ್ತಿಯನ್ನು ಸರಿದೂಗಿಸಿಕೊಂಡು ಹೋಗುತ್ತಿರುವ ಶಿವಶಂಕರ್‌ ಇದೀಗ ಪುತ್ತೂರಿನ ವಿದುಷಿ ಸುಚಿತ್ರಾ ಹೊಳ್ಳ ಇವರಿಂದ ಸಂಗೀತ ತರಬೇತಿ ಪಡೆಯುತ್ತಿದ್ದು ಸಂಗೀತ ಕ್ಷೇತ್ರದಲ್ಲಿ ಪ್ರವೀಣನಾಗಬೇಕೆಂಬ ಬಯಕೆ ಹೊಂದಿದ್ದಾರೆ. ವೇದಿಕೆ ಯೆಂದರೆ ಭಯ ಪಡುತ್ತಿದ್ದ ನನಗೆ ಮೈಕ್‌ ಹಿಡಿದಾಗ ಏನೋ ಹೊಸ ಚೈತನ್ಯ ಸೃಷ್ಟಿಯಾ ದಂತೆ ಭಾಸವಾಗುತ್ತದೆ. ಅದುವೇ ನನಗೆ ನಿರ್ಭಯವಾಗಿ ಹಾಡಲು ಧೈರ್ಯ ನೀಡುವುದು ಎನ್ನುತ್ತಾರೆ ಶಿವಶಂಕರ್‌.

-ಪೃಥ್ವಿಶ್‌ ಧರ್ಮಸ್ಥಳ, ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.