ಆನಂದ್ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ಸೋಮಣ್ಣ
Team Udayavani, Aug 11, 2021, 11:41 AM IST
ಬೆಂಗಳೂರು : ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ. ಆನಂದ ಸಿಂಗ್ ಬುದ್ದಿವಂತರಿದ್ದಾರೆ. ಈಗಾಗಲೇ ಸಿಎಂ ಮಾತನಾಡಿದ್ದಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಇನ್ನೊಮ್ಮೆ ಆನಂದ ಸಿಂಗ್ ಅವರ ಜೊತೆ ಮಾತಾಡ್ತಾರೆ ಎಂದು ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಸೂಕ್ಷ್ಮವಾಗಿ ಹೆಜ್ಜೆ ಹಾಕ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಾರ್ಗದರ್ಶನವನ್ನೂ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ. ಆನಂದ ಸಿಂಗ್ ಅವರ ಅಸಮಾಧಾನ ಸರಿಯಾಗಲಿದೆ ಎಂದು ಪ್ರಿತಮ್ ಗೌಡ್ ಗೆ ಸೂಕ್ಷ್ಮ ಮಾತುಗಳಲ್ಲೇ ತಿರುಗೇಟು ನೀಡಿದರು.
ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಏಲ್ಲಿದ್ದರೋ ಗೊತ್ತಿಲ್ಲ. ದೇವಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು. ಸೋಮಣ್ಣನವರ ಒಳ್ಳೆಯತನ ಪ್ರಿತಮ್ ಗೌಡ ಅವರಿಗೆ ಖಾರವಾಗಿ ಕಾಣಿಸಿರಬಹುದು. ಅವರಿಗೆ ಒಳ್ಳೆಯದಾಗಲಿ. ಇನ್ಮುಂದೆ ನಾನು ಎಲ್ಲರಿಗೂ ಬಹುವಚನದಲ್ಲೇ ಮಾತಾಡ್ತೇನೆ ಎಂದು ಸೋಮಣ್ಣ ಹೇಳಿಕೆ ನೀಡಿದ್ದಾರೆ.