ಹಂಪಿ ಸ್ಮಾರಕಗಳ ಆವರಣದಲ್ಲಿ ನೀರು
Team Udayavani, May 20, 2022, 2:08 PM IST
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಹಂಪಿ ಸ್ಮಾರಕಗಳ ಆವರಣದಲ್ಲಿ ನೀರು ಸಂಗ್ರಹವಾಗಿವೆ.
ಕೃಷ್ಣ ದೇಗುಲ, ಪಾನ್ ಸೂಪಾರಿ ಬಜಾರ್, ರಂಗ ದೇವಾಲಯ, ಹಾಜರ ರಾಮಚಂದ್ರ ದೇವಾಲಯ, ಉಗ್ರ ನರಸಿಂಹ, ವಿಜಯವಿಠಲ ದೇವಾಲಯದ ಆವರಣದಲ್ಲಿ ನೀರು ಸಂಗ್ರಹಗೊಂಡಿದೆ. ಮಳೆ ನೀರಿನಲ್ಲಿ ಸ್ಮಾರಕಗಳ ಬಿಂಬ ಗೋಚರಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
ತಂಪೆರೆದ ಮಳೆ
ಬಿಸಿಲಿನಿಂದ ಸುಡುತ್ತಿದ್ದ ವಿಜಯನಗರ ಜಿಲ್ಲೆಯಲ್ಲಿಗ ಬುಧವಾರ ಸುರಿದ ಮಳೆ ತಂಪು ಎರೆದಿದ್ದು, ತಣ್ಣನೆ ಅನುಭೂತಿ ನೀಡಿದೆ. ಬುಧವಾರ ರಾತ್ರಿಯಿಂದಲೇ ಜಿಲ್ಲೆಯಲ್ಲಿ ಆರಂಭವಾದ ಮಳೆ, ಗುರುವಾರ ಬೆಳಗಿನ ವರಿಗೂ ಮುಂದುವರೆದಿದೆ. ಮಳೆಯ ನೀರು ತಗ್ಗು ಪ್ರದೇಶದಲ್ಲಿ ಸಂಗ್ರಹವಾಗಿದೆ.
ಬಿಸಿಲಿನ ತಾಪಕ್ಕೆ ಬಸವಳಿದು ಹೋಗಿದ್ದ ಜಿಲ್ಲೆಯ ಜನರು ಮಳೆ ಆಗಮನವನ್ನೇ ಎದುರು ನೋಡುತ್ತಿದ್ದರು. ಇದೀಗ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಜನರು ಹೊರ ಬರದಂತಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೊಸಪೇಟೆ ತಾಲೂಕಿನ ಬಸವನದುರ್ಗ ಹಾಗೂ ಪೋತಲಕಟ್ಟೆ ಗ್ರಾಮದಲ್ಲಿ ಮಳೆಗೆ ಎರಡು ಮನೆಗಳು ಉರುಳಿ ಬಿದ್ದಿವೆ. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಸಂಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ