ಗೆಲುವು ಸೋಲಿನ ಬೆಟ್ಟಿಂಗ್‌ ಹವಾ?

ಐಪಿಎಲ್‌ ಜೋಶ್‌ ಚುನಾವಣೆಯತ್ತ

Team Udayavani, Apr 6, 2019, 6:00 AM IST

e-37

ಬೆಳ್ತಂಗಡಿ: ಪ್ರತಿ ವರ್ಷ ಐಪಿಎಲ್‌ನಲ್ಲಿ ಕಂತೆ ಕಂತೆ ಎಣಿಸುತ್ತಿದ್ದ ಬುಕ್ಕಿಗಳು ಈ ಬಾರಿ ರಾಜಕೀಯ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ವ್ಯವಹಾರ ಕುದುರಿಸುವಂತೆ ಕಾಣುತ್ತಿದೆ.

ಈ ಸಲ ಲೋಕಸಭಾ ಚುನಾವಣೆ ಮತ್ತು ಐಪಿಎಲ್‌ ಒಂದೇ ಸಮಯದಲ್ಲಿ ಬಂದಿರುವುದರಿಂದ ರಾಜಕೀಯ ಜಿದ್ದಾ ಜಿದ್ದಿಯ ಮಧ್ಯೆ ಐಪಿಎಲ್‌ ಮಂಕಾದಂತೆ ಕಾಣುತ್ತಿದೆ. ಜನಚಿತ್ತ ಲೋಕಸಭಾ ಚುನಾವಣೆಯತ್ತ ನೆಟ್ಟಿದೆ. ಎಲ್ಲೆಡೆ ಮತ ಬೇಟೆ ಲೆಕ್ಕಾಚಾರ ನಡೆಯುತ್ತಿದ್ದು, ಜನ ಸಾಮಾನ್ಯರೂ ಯಾರು ಗೆಲ್ಲಬಹುದು-ಯಾರು ಸೋಲ ಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದು ಹಣದ ಹೊಳೆಗೂ ಕಾರಣವಾಗುವ ಸಾಧ್ಯತೆ ಇದೆ.

ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿ ಗೆಲುವಿಗೆ ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಮೋದಿ ಅಲೆಯಲ್ಲಿ ತೇಲುತ್ತಿದ್ದು, ಮತ್ತೆ ಗೆಲುವು ನಮ್ಮದೇ ಎಂಬ ವಿಶ್ವಾಸದಲ್ಲಿದೆ. ಇತ್ತ ಕಾಂಗ್ರೆಸ್‌, ಮೋದಿಯವರನ್ನು ಸೋಲಿಸುವ ಉದ್ದೇಶದಿಂದ ವಿಪಕ್ಷಗಳ ಜತೆಗೂಡಿ ಬಿರುಸಿನ ಪ್ರಚಾರ ನಡೆಸುತ್ತಿದೆ.

ಇದರಿಂದಲೇ ಬೇಳೆ ಬೇಯಿಸಿಕೊಳ್ಳಲು ಬಯಸಿರುವ ಕೆಲವರು ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದಾರೆ. ಪಕ್ಷ ಮತ್ತು ನಾಯಕರ ಅಭಿಮಾನಿಗಳಿಂದ ಸೋಲು ಗೆಲುವಿನ ಲೆಕ್ಕಾಚಾರ ಮತ್ತು ಅಭ್ಯರ್ಥಿಗಳು ಎಷ್ಟು ಮತಗಳ ಅಂತರ ಕಾಯ್ದುಕೊಳ್ಳುತ್ತಾರೆ ಎಂಬ ನಿಟ್ಟಿನಲ್ಲಿ ಬೆಟ್ಟಿಂಗ್‌ ಸದ್ದಿಲ್ಲದೆ ಕುದುರುತ್ತಿದೆ.

ಬೆಟ್ಟಿಂಗ್‌ ನಡೆಸುವವರ ಬಗ್ಗೆ ಪೊಲೀಸ್‌ ಇಲಾಖೆ ಕಣ್ಣಿಟ್ಟಿದೆ. ಮತ್ತೂಂದೆಡೆ ಹಣದ ಸಾಗಾಟ ಮತ್ತು ಬ್ಯಾಂಕ್‌ ವ್ಯವಹಾರದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ. ಇದರ ನಡುವೆಯೂ ಅವ್ಯವಹಾರ, ಅಕ್ರಮ ಸಾಗಾಟ ನಡೆಸಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.

ಮಂಡ್ಯ, ಮೈಸೂರಿನಲ್ಲಿ ದನ, ಕುರಿ ಬೆಟ್ಟಿಂಗ್‌
ದ.ಕ. ಜಿಲ್ಲೆಯಲ್ಲಿ ಹಣದ ಲೆಕ್ಕಾಚಾರವೇ ಹೆಚ್ಚು. ಆದರೆ ಬೆಂಗಳೂರು, ಮೈಸೂರು, ಮಂಡ್ಯಗಳಲ್ಲಿ ಹಾಗಲ್ಲ. ಹಸು, ಕುರಿ, ಆಸ್ತಿ, ಬಾಡೂಟ ಸೇರಿದಂತೆ ಮನೆ ಸಾಮಗ್ರಿ ಅಡವಿಟ್ಟಾದರೂ ನೆಚ್ಚಿನ ಅಭ್ಯರ್ಥಿ ಪರ ಸೋಲು ಗೆಲುವಿನ ಲೆಕ್ಕಾಚಾರದಲ್ಲಿರುತ್ತಾರೆ.

ಆರ್ಥಿಕ ಸಂಕಷ್ಟಕ್ಕೂ ಕಾರಣ
ಬೆಟ್ಟಿಂಗ್‌ ವಿಚಾರದಲ್ಲಿ ಹಣ ಹೊಂದಿಸಲಾಗದೆ ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ ಇರುತ್ತದೆ. ಆದರೆ ಠಾಣೆ ಮೆಟ್ಟಿಲೇರಿದರೆ ಪ್ರಕರಣ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇರುವುದರಿಂದ ಮುಚ್ಚಿಹೋಗುವ ಸಾಧ್ಯತೆ ಇದೆ.

ಈವರೆಗೆ ಇಂಥ ರಾಜಕೀಯ ಬೆಟ್ಟಿಂಗ್‌ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಐಪಿಎಲ್‌ ಬೆಟ್ಟಿಂಗ್‌ ಪ್ರಕರಣಗಳು ಜಿಲ್ಲೆಯಲ್ಲಿ ವಿರಳ. ಯಾವುದೇ ಬೆಟ್ಟಿಂಗ್‌ನಲ್ಲಿ ತೊಡಗಿದರೆ ಕಾನೂನು ಕ್ರಮ ಜರಗಿಸಲಾಗುವುದು.
ಬಿ.ಎಂ. ಲಕ್ಷ್ಮೀಪ್ರಸಾದ್‌, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.