ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ವಿಸ್ತರಣೆ ಎಂದು?


Team Udayavani, Jun 21, 2019, 5:00 AM IST

40

ಗುತ್ತಿಗಾರು: ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ವಿಸ್ತರಣೆ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ಧ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖೀಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವು ಮುರುವಿನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಧುತ್ತೆಂದು ಎದುರಾಗಿ ಅಪಘಾತಗಳೂ ಸಂಭವಿಸಿವೆ.

ಕಡತದಲ್ಲಿಯೇ ಬಾಕಿ
ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ವಿಸ್ತರಣೆಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರು ಗೊಳ್ಳದೆ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀ.ನಷ್ಟು ವಿಸ್ತರಣೆ ಮಾಡಲು ಈ ಹಿಂದೆ ಸಿಆರ್‌ಎಫ್ನಿಂದ 3 ಕೋಟಿ ರೂ. ಮಂಜೂರುಗೊಂಡು ಟೆಂಡರ್‌ ಪ್ರಕ್ರಿಯೆಯೂ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್‌ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್‌ ಮಾಡಬೇಕಿದೆ.

ಸೇವಾಜೆಯಲ್ಲಿ ಸೇತುವೆ
ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು, ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಎಂಜಿನಿಯರ್‌ ಸಣ್ಣೇ ಗೌಡ ತಿಳಿಸಿದ್ದಾರೆ.

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಪ್ರಸ್ತಾವನೆ ಕಳಿಸಿದ್ದೇವೆ

ರಸ್ತೆ ವಿಸ್ತರಣೆಗೆ 2 ವರ್ಷಗಳ ಹಿಂದೆಯೇ ಪ್ರಸ್ತಾವನೆ ಕಳಿಸಲಾಗಿದೆ. ಸಿಆರ್‌ಎಫ್ನಿಂದ 3 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಹೆದ್ದಾರಿ ಪ್ರಾಧಿಕಾರದಿಂದ 5 ಕಿ.ಮೀ. ರಸ್ತೆ ವಿಸ್ತರಣೆಗೊಳ್ಳುವ ಸಾಧ್ಯತೆಯಿದೆ.
– ಸಣ್ಣೇಗೌಡ, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಸುಳ್ಯ ವಿಭಾಗ

15 ಕಿ.ಮೀ. ಉಳಿಕೆ
ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ರಿಟೆಂಡರ್‌ ಆಗಬೇಕಿದೆ

ರಸ್ತೆ ವಿಸ್ತರಣೆಗೆ ಪ್ರಯತ್ನ ಮಾಡಲಾಗುತ್ತಿದ್ದು, ಗುತ್ತಿಗೆದಾರರ ಸಮಸ್ಯೆಯಿಂದ ಕಾಮಗಾರಿ ಬಾಕಿಯಾಗಿದೆ. ಕಾಮಗಾರಿಗಾಗಿ ರಿಟೆಂಡರ್‌ ಆಗಬೇಕಿದೆ.
– ಹರೀಶ್‌ ಕಂಜಿಪಿಲಿ, ಜಿ.ಪಂ. ಸದಸ್ಯರು, ಅರಂತೋಡು ಕ್ಷೇತ್ರ

••ಕೃಷ್ಣಪ್ರಸಾದ್‌ ಕೊಲ್ಚಾರ್‌

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.