ಮೂಡಿಗೆರೆಯಲ್ಲಿ ಕಾಡುಕೋಣಗಳ ದಾಳಿಗೆ ನೂರಾರು ಅಡಿಕೆ ಗಿಡ ನಾಶ
Team Udayavani, Aug 4, 2021, 11:24 AM IST
ಚಿಕ್ಕಮಗಳೂರು : ಕಾಡುಕೋಣಗಳು ದಾಳಿ ನಡೆಸಿ ಅಡಿಕೆ ಬೆಳೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಕಾಡುಕೋಣಗಳ ಹಿಂಡು ನೂರಾರು ಅಡಿಕೆ ಗಿಡಗಳನ್ನು ನಾಶ ಮಾಡಿವೆ. ವಿಜಯಪ್ರಕಾಶ್ ಎಂಬುವರಿಗೆ ಸೇರಿದ ಅಡಿಕೆ ಬೆಳೆ ಸಂಪೂರ್ಣ ನಾಶವಾಗಿದ್ದು, ಕಾಡುಕೋಣಗಳಿಂದ ಮುಕ್ತಿ ಕೊಡಿಸಬೇಕೆಂದು ಸ್ಥಳೀಯರ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡುಕೋಣಗಳ ದಾಳಿಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಅಂತಾ ಬೆಳೆ ಕಳೆದುಕೊಂಡ ರೈತರು ಆಗ್ರಹಿಸಿದ್ದಾರೆ.
ಇದನ್ನೂ ಓದಿ :BREAKING : ಈ ಶಾಸಕರಿಗೆ ಸಚಿವ ಸ್ಥಾನ ಖಚಿತ : ಖುದ್ದು ಸಿಎಂ ಬೊಮ್ಮಾಯಿ ದೂರವಾಣಿ ಕರೆ