ದಕ್ಷಿಣ ಕನ್ನಡ, ಕೊಡಗಿನ ವಿವಿಧೆಡೆ ಗಾಳಿ – ಮಳೆ: ತೀವ್ರ ಹಾನಿ
Team Udayavani, Apr 25, 2019, 6:00 AM IST
ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ವೇಳೆಗೆ ಮಳೆ ಬಂದಿದೆ. ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಕೆಲವು ಮನೆಗಳಿಗೆ ಹಾನಿಯಾಗಿದೆ.
ಸುಳ್ಯ ತಾಲೂಕಿನಲ್ಲಿ ಬುಧವಾರ ಸಂಜೆ ಸುರಿದ ಆಲಿಕಲ್ಲು ಸಹಿತ ಮಳೆ, ಗಾಳಿಯಿಂದ ನಗರದಲ್ಲಿ ಹಲವು ಮನೆಗಳ ಛಾವಣಿಗೆ ಹಾನಿ ಉಂಟಾಗಿದೆ. ಬೆಟ್ಟಂಪಾಡಿ ನಿವಾಸಿ ಬಾಲಕೃಷ್ಣ ಅವರ ಮನೆ ಸಂಪೂರ್ಣ ಹಾನಿಗೀಡಾಗಿದೆ. ಜಯನಗರದಲ್ಲಿ ಅಬ್ದುಲ್ ಹಾಜಿ ಅವರ ಕೊಟ್ಟಿಗೆ ಮೇಲೆ ಮರ ಬಿದ್ದಿದೆ.
ತಿರುಮಲೇಶ್ವರಿ, ರಾಧಾಕೃಷ್ಣ, ಜನಾರ್ದನ ಎಂಬವರ ಛಾವಣಿ ಹೆಂಚು ಹಾರಿಹೋಗಿದೆ. ಉಷಾ ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.
ಮೊಯ್ದು ಅವರ ಮನೆ ಛಾವಣಿಗೆ ಹಾನಿ ಸಂಭವಿಸಿದೆ. ಜಯನಗರ ಅಂಗನವಾಡಿ ಬಳಿ ಹಲಸಿನ ಮರವೊಂದು ಧರೆಗುರುಳಿದೆ. ಜಯನಗರ ಶಾಲೆ ಬಳಿ ಮರ ಬಿದ್ದು ಸ್ವಲ್ಪಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕುದ್ಪಾಜೆ ಮಾಧವ ಅವರ ಮನೆಗೂ ಹಾನಿಯಾಗಿದೆ. 10ಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಜಾಲೂÕರು, ಕನಕಮಜಲು, ಸೋಣಂಗೇರಿ ಮೊದಲಾದೆಡೆ ಮಳೆಯಾಗಿದೆ. ಜಾಲೂÕರು – ಸೋಣಂಗೈರಿ ರಸ್ತೆಯಲ್ಲಿ ವಿದ್ಯುತ್ ಕಂಬ ಮತ್ತು ಮರ ಧರೆಗುರುಳಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ರಾತ್ರಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಹಾನಿ ಸ್ಥಳಕ್ಕೆ ತಹಶೀಲ್ದಾರ್ ಅಬ್ದುಲ್ ಕುಂಞಿ, ಗ್ರಾಮ ಕರಣಿಕರು ಭೇಟಿ ನೀಡಿದರು.
ಕಡಬ ಹೊಸಮಠ ಬಳಿ ವಿದ್ಯುತ್ ಲೈನ್ಗೆ
ಮರ ಮುರಿದು ಬಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಸುಬ್ರಹ್ಮಣ್ಯ ಕ್ಷೇತ್ರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರಲಿಲ್ಲ.
ಸುಬ್ರಹ್ಮಣ್ಯದಲ್ಲಿ ಗುಡುಗು ಕಾಣಿಸಿಕೊಂಡರೆ, ಕಡಬದಲ್ಲಿ ಮಳೆಯಾಗಿದೆ. ಪುತ್ತೂರಿನಲ್ಲಿ ಹನಿ ಮಳೆಯಾಗಿದೆ. ಮಂಗಳೂರಲ್ಲಿ ಮೋಡ ಕವಿದ ವಾತಾವರಣವಿತ್ತು.
ಕುಶಾಲನಗರ: ಶಾಲೆಗೆ ಹಾನಿ
ಮಡಿಕೇರಿ: ಗಾಳಿ ಮಳೆಗೆ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿ ಸರಕಾರಿ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು ಕೊಠಡಿಗಳು ನೀರಿನಿಂದ ಅವೃತಗೊಂಡು ಪೀಠೊಪಕರಣಗಳಿಗೆ ಹಾನಿಯಾಗಿದೆ.
ಮೇಲ್ಛಾವಣಿಯ ಸಿಮೆಂಟ್ ಶೀಟ್ಗಳು ಹಾರಿ ಹೋಗಿ ತರಗತಿಯ ಕೊಠಡಿಗಳು ಮತ್ತು ಕಚೇರಿಯಲ್ಲಿದ್ದ ವಸ್ತುಗಳು ನಾಶಗೊಂಡಿವೆ. ಗುಮ್ಮನಕೊಲ್ಲಿಯ ಸಿ.ಎನ್. ಸೋಮಪ್ಪ ಅವರ ಮನೆಯ ಶೀಟ್ಹಾರಿಹೋಗಿದ್ದು ಮನೆಗೆ ಹಾನಿಯುಂಟಾಗಿದೆ.
ಎ. 30ರಿಂದ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು: ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಲಿರುವ ಚಂಡಮಾರುತ ರಾಜ್ಯದ ಮೇಲೆ ಪರಿಣಾಮ ಬೀರಲಿದ್ದು, ಎ.30ರಿಂದ 3 ದಿನ ಹಲವೆಡೆ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದೆರಡು ದಿನಗಳಿಂದ ವಾಯು ಭಾರ ಕುಸಿತ ಉಂಟಾಗುತ್ತಿದ್ದು, ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹೆಚ್ಚಾಗಿರುತ್ತದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೆ ಬುಧವಾರ ಅದು ದಿಕ್ಕು ಬದಲಿಸಿದ್ದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ. ಆದರೂ ಎ. 30 ರಿಂದ ಮೂರು ದಿನ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಮಳೆಯಾಗಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಉಂಟಾಗಿದ್ದ ನಿಮ್ನ ಒತ್ತಡ ಹಾಗೂ ಮೇಲ್ಮೆ„ ಸುಳಿಗಾಳಿಯ ತೀವ್ರತೆ ಕಡಿಮೆಯಾಗಿದ್ದು, ಬುಧವಾರ ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ 2 ದಿನ ದಕ್ಷಿಣ ಒಳ ನಾಡಿನ ಕೆಲವಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ