Women’s Quota Bill: ಲೋಕಸಭೆಯಲ್ಲಿ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆ ಅಂಗೀಕಾರ

ಇಂದು ರಾಜ್ಯಸಭೆಯಲ್ಲಿ ಮಂಡನೆ

Team Udayavani, Sep 21, 2023, 8:40 AM IST

Women’s Quota Bill: ಲೋಕಸಭೆಯಲ್ಲಿ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆ ಅಂಗೀಕಾರ

ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಒದಗಿಸುವ ಐತಿಹಾಸಿಕ ಮಸೂದೆಯು ಬುಧವಾರ ಲೋಕಸಭೆಯಲ್ಲಿ ಅಂಗಿಕಾರ ಗೊಂಡಿದೆ. ಈ ಮೂಲಕ 27 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ “ಮಹಿಳಾ ಮೀಸಲಾತಿ’ಯ ಕನಸು ಕೊನೆಗೂ ಸಾಕಾರಗೊಳ್ಳುವತ್ತ ಸಾಗಿದೆ.

ಮಸೂದೆ ಅಂಗೀಕಾರಕ್ಕೆ ನೂತನ ಸಂಸತ್‌ ಭವನ ಸಾಕ್ಷಿಯಾಗಿದ್ದಲ್ಲದೆ, ಪಕ್ಷ ಭೇದ ಮರೆತು ಸಂಸದರೆಲ್ಲರೂ ಒಗ್ಗಟ್ಟಾಗಿ ಮಹಿಳಾ ಸಬಲೀಕರಣಕ್ಕೆ ಜೈಕಾರ ಹಾಕಿ ದರು. ಲೋಕ ಸಭೆಯ ಅಂಕಿತ ಪಡೆದ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆಯು ಗುರುವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಸ್ತ್ರೀಯರಿಗೆ ಮೂರನೇ ಒಂದರಷ್ಟು ಮೀಸ ಲಾತಿ ಕಲ್ಪಿಸುವ ಮಸೂದೆ ಕುರಿತಾಗಿ ಬುಧ ವಾರ ಸತತ 7 ಗಂಟೆ ಚರ್ಚೆ ನಡೆದ ಬಳಿಕ ಧ್ವನಿಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಯಿತು. 27 ಮಂದಿ ಮಹಿಳಾ ಸಂಸದರು ಚರ್ಚೆಯಲ್ಲಿ ಪಾಲ್ಗೊಂಡರು. 454 ಸಂಸದರು ಮಹಿಳಾ ಮೀಸಲಾತಿ ಪರ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಒವೈಸಿ ಹಾಗೂ ಅದೇ ಪಕ್ಷದ ಇಮಿ¤ಯಾಜ್‌ ಜಲೀಲ್‌ ಮಸೂದೆ ವಿರುದ್ಧ ಮತ ಚಲಾಯಿಸಿದವರು. ಇತರ ಸದಸ್ಯರು ಗೈರಾಗಿದ್ದರು. “ಸವರ್ಣೀಯ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುವುದಷ್ಟೇ ಈ ಸರಕಾರದ ಉದ್ದೇಶ’ ಎಂದು ಆರೋಪಿಸಿದ ಈ ಇಬ್ಬರು ಸಂಸದರು, ಒಬಿಸಿ ಮತ್ತು ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ನೀಡಲು ಆಗ್ರಹಿಸಿದರು.

1996ರಲ್ಲಿ ಮೊತ್ತ ಮೊದಲ ಬಾರಿಗೆ ಮಂಡನೆಯಾಗಿದ್ದ ಈ ಮಸೂದೆ ಇದುವರೆಗೆ 6 ಬಾರಿ ಪರೀಕ್ಷೆ ಎದುರಿಸಿತ್ತು. 2008ರಲ್ಲಿ ಯುಪಿಎ ಸರ ಕಾರ ಸಿದ್ಧಪಡಿಸಿದ್ದ ಈ ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರ ಗೊಂಡಿತ್ತು. ಆದರೆ ಒಬಿಸಿಗೂ ಮೀಸಲಾತಿ ಗಾಗಿ ಹಲವು ಪಕ್ಷಗಳು ಒತ್ತಾಯಿಸಿದ್ದ ಕಾರಣ ಲೋಕಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.

ಬಿಸಿ ಬಿಸಿ ಚರ್ಚೆ
ಬುಧವಾರ ಲೋಕಸಭೆಯಲ್ಲಿ ನಡೆದ ಚರ್ಚೆ ಯಲ್ಲಿ ಸಂಸದರು ಸಕ್ರಿಯವಾಗಿ ಪಾಲ್ಗೊಂಡರು. ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯವರು, ಇತರ ಹಿಂದುಳಿದ ವರ್ಗಗಳ(ಒಬಿಸಿ) ಮಹಿಳೆಯ ರಿಗೂ ಮೀಸಲಾತಿಯನ್ನು ಒದಗಿ ಸುವ ನಿಬಂಧನೆಯನ್ನು ಸೇರಿಸಬೇಕು ಮತ್ತು ಮಸೂದೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ದರು. ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡುವ ಮೊದಲು ಜನಗಣತಿ ಮತ್ತು ಕ್ಷೇತ್ರಗಳ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಯ ಬೇಕು ಎಂಬ ಸರಕಾರದ ನಿರ್ಧಾರವನ್ನು ವಿಪಕ್ಷಗಳ ಹಲವು ನಾಯಕರು ವಿರೋಧಿಸಿ ದರು. ಮಹಿಳಾ ಮೀಸಲಾತಿ ಜಾರಿ ಪ್ರಕ್ರಿಯೆ ಇದರಿಂದಾಗಿಯೇ ವಿಳಂಬವಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, “ವಿಳಂಬ ಆಗುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಕೂಡಲೇ ಮುಂದಿನ ಸರಕಾರ ಗಣತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಆರಂಭಿಸಲಿದೆ’ ಎಂದು ಹೇಳಿದರು.

ಮಹಿಳಾ ಮಸೂದೆ ಅಂಗೀಕಾರವಾಗಿರುವುದಕ್ಕೆ ಸಂತಸವಾಗಿದೆ. ಬೆಂಬಲ ನೀಡಿದ ಎಲ್ಲ ಪಕ್ಷಗಳ ಸಂಸದರಿಗೂ ಧನ್ಯವಾದಗಳು.
– ನರೇಂದ್ರ ಮೋದಿ, ಪ್ರಧಾನಿ

ಇದು ನನ್ನ ಬದುಕಿನ ಅತ್ಯಂತ ಹೃದಯಸ್ಪರ್ಶಿ ಕ್ಷಣ. ಈ ಮಸೂದೆ ಅಂಗೀಕಾರಗೊಂಡರೆ ರಾಜೀವ್‌ ಗಾಂಧಿಯವರ ಕನಸು ಈಡೇರಿದಂತೆ. ಒಬಿಸಿ ಮಹಿಳೆ ಯರಿಗೂ ಮೀಸಲಾತಿ ಸಿಗು ವಂತಾಗಬೇಕು. ಕಾಂಗ್ರೆಸ್‌ ಈ ಮಸೂದೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ.
– ಸೋನಿಯಾ ಗಾಂಧಿ, ಕಾಂಗ್ರೆಸ್‌ ನಾಯಕಿ

ಮಹಿಳಾ ಸುರಕ್ಷೆ, ಗೌರವ, ಸಮಾನ ಭಾಗೀದಾರಿಕೆಯು ಪ್ರಧಾನಿ ಮೋದಿ ನೇತೃತ್ವದ ಸರಕಾರದ ಸಂಕಲ್ಪವಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಹೊಸ ಯುಗಾರಂಭಕ್ಕೆ ನಾಂದಿ ಹಾಡಿದೆ.
– ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಇದನ್ನೂ ಓದಿ: ‘Donald Trump: ಡೊನಾಲ್ಡ್ ಟ್ರಂಪ್ ನಿಧನ… ಟ್ರಂಪ್ ಮಗನ X ಖಾತೆ ಹ್ಯಾಕ್ ಮಾಡಿ ಟ್ವೀಟ್

ಟಾಪ್ ನ್ಯೂಸ್

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.