ಪಂಜಾಬ್ ಆತಿಥ್ಯದಲ್ಲಿ ವಿಶ್ವ ಕಬಡ್ಡಿ ಕಪ್
Team Udayavani, Nov 14, 2019, 12:06 AM IST
ಚಂಡೀಗಢ: ಪಂಜಾಬ್ ಸರಕಾರ 2019ನೇ ಸಾಲಿನ “ವಿಶ್ವ ಕಬಡ್ಡಿ ಕಪ್’ ಪಂದ್ಯಾವಳಿಯನ್ನು ಆಯೋಜಿಸಲಿದ್ದು, ಮುಂದಿನ ಡಿ. ಒಂದರಿಂದ 9ರ ತನಕ ಈ ಕೂಟ ನಡೆಯಲಿದೆ ಎಂದು ರಾಜ್ಯ ಕ್ರೀಡಾ ಸಚಿವ ರಾಣಾ ಗುರ್ಮಿತ್ ಸಿಂಗ್ ಸೋಧಿ ಹೇಳಿದರು. ಈ ಕೂಟವನ್ನು ಸಿಕ್ಖ್ ಧರ್ಮಗುರು ಗುರುನಾನಕ್ ಅವರಿಗೆ ಅರ್ಪಿಸಲಾಗುವುದು ಎಂದೂ ಅವರು ಹೇಳಿದರು. ಇದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯ ವರ್ಷವಾಗಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಸೇರಿದಂತೆ 9 ದೇಶಗಳು ಪಾಲ್ಗೊಳ್ಳಲಿವೆ. ಉಳಿದ ತಂಡಗಳೆಂದರೆ ಅಮೆರಿಕ, ಆಸ್ಟ್ರೇಲಿಯ, ಇಂಗ್ಲೆಂಡ್, ಶ್ರೀಲಂಕಾ, ಕೀನ್ಯಾ, ನ್ಯೂಜಿಲ್ಯಾಂಡ್, ಪಾಕಿಸ್ಥಾನ ಮತ್ತು ಕೆನಡಾ. ಇವುಗಳಲ್ಲಿ ಪಾಕಿಸ್ಥಾನ ಮತ್ತು ಕೆನಡಾಕ್ಕೆ ಕೇಂದ್ರ ಸರಕಾರದಿಂದ ನಿರಾಕ್ಷೇಪಣಾ ಪತ್ರ ಲಭಿಸಬೇಕಷ್ಟೇ.
ಡಿ. ಒಂದರಂದು ಸುಲ್ತಾನ್ಪುರ್ ಲೋಧಿಯ “ಗುರುನಾನಕ್ ಸ್ಟೇಡಿಯಂ’ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಂದು 4 ಪಂದ್ಯಗಳನ್ನು ಆಡಲಾಗುವುದು. ಡೇರ ಬಾಬಾ ನಾನಕ್ನ “ಶಹೀದ್ ಭಗತ್ ಸಿಂಗ್ ನ್ಪೋರ್ಟ್ಸ್ ಸ್ಟೇಡಿಯಂ’ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಅಮೃತಸರ, ಫಿರೋಜ್ಪುರ್, ಪಟಿಯಾಲಾದಲ್ಲಿ ಲೀಗ್ ಪಂದ್ಯಗಳು, ಶ್ರೀ ಆನಂದ್ಪುರ್ ಸಾಹಿಬ್ನಲ್ಲಿ ಸೆಮಿಫೈನಲ್ ಪಂದ್ಯಗಳನ್ನು ಆಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ