ನಗರಗಳಿಗೆ ಸೀಮಿತವಾದ ಬಿಜೆಪಿಯನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಿದ್ದು ಯಡಿಯೂರಪ್ಪ
Team Udayavani, Oct 21, 2021, 6:11 PM IST
ಕುಷ್ಟಗಿ :‘ಕಳೆದ 20 ವರ್ಷಗಳ ಹಿಂದೆ ಬಿಜೆಪಿ ಪಕ್ಷವು ಕೇವಲ ನಗರಗಳಿಗೆ ಸೀಮಿತವಾದ ಪಕ್ಷವಾಗಿತ್ತು. ಅದನ್ನು ಪ್ರತಿ ಹಳ್ಳಿಗಳಿಗೂ ತಲುಪಿಸಿದ ಕೀರ್ತಿ ಯಡಿಯೂರಪ್ಪ ನವರಿಗೆ ಸಲ್ಲುತ್ತದೆ’ ಎಂದು ಗುರುವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ,’ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇಬ್ಭಾಗವಾದಂತೆ ಕರ್ನಾಟಕದಲ್ಲೂ ಒಡೆದು ಹೋಗಿ ಮೂಲೆಗುಂಪಾಗುವದರಲ್ಲಿ ಯಾವುದೇ ಅನುಮಾನವಿಲ್ಲ. ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಆ ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ತಮ್ಮ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೇನ್ನುವ ವಿಶ್ವಾಸವಿದೆ’ ಎಂದರು.
‘ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಶಾಸಕರುಗಳು ಸಚಿವ ಸ್ಥಾನಕ್ಕಾಗಿ ಬಂಡಾಯ ಏಳುವ ಪ್ರಶ್ನೆಯೇ ಇಲ್ಲ. ಮುಖ್ಯ ಮಂತ್ರಿಗಳು ಎಲ್ಲರನ್ನೂ ಸರಿದೂಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರುಗಳಿಗೆ ಜನರ ಮುಂದೆ ತಮ್ಮ ಸಾಧನೆಗಳನ್ನು ಹೇಳಿಕೊಳ್ಳಲು ಏನು ಉಳಿದುಕೊಂಡಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷದವರು ಮಾನ್ಯ ಪ್ರಧಾನ ಮಂತ್ರಿ ಯವರ ಮೇಲೆ ಹಾಗೂ ಜೆಡಿಎಸ್ ಪಕ್ಷದವರುಆರ್ ಎಸ್ಎಸ್ ಮೇಲೆ ವಿನಾಕಾರಣ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದರು.
‘ಕಾಂಗ್ರೆಸ್ ಪಕ್ಷದವರಿಗೆ ಮಾತನಾಡಲು ಯಾವುದೇ ನೈತಿಕತೆಯಿಲ್ಲ. ವಿನಾಕಾರಣ ಚುನಾವಣಾ ಸಂದರ್ಭದಲ್ಲಿ ಹಾಗೂ ದೇಶದಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬ ಹತಾಶೆಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರುಗಳು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಿರುವುದರಿಂದ ಅವರೇನು ದೊಡ್ಡ ಮನುಷ್ಯರಾಗುವದಿಲ್ಲ, ಅವರಿಗೆ ಶೋಭೆ ತರುವುದಿಲ್ಲ’ ಎಂದರು.
‘ಐಟಿ ಯವರು ಯಾರಿಗೆ ದಾಳಿ ಮಾಡಬೇಕು, ಯಾವಾಗ ದಾಳಿ ಮಾಡಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು. ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ ಮಾಡಿರುವುದಕ್ಕೂ ಯಡಿಯೂರಪ್ಪನವರಿಗೂ ಯಾವುದೇ ಸಂಬಂಧವಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ