ಯುವಜನತೆ ಮಾದಕ ವಸ್ತುಗಳನ್ನು ಬಹಿಷ್ಕರಿಸಿ’
Team Udayavani, Jul 1, 2019, 5:52 AM IST
ಗಂಗೊಳ್ಳಿ : ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಗಾಂಜಾ ಸೇವನೆಗೆ ಯುವ ಜನತೆ ಬಲಿಯಾಗುತ್ತಿದ್ದು, ಯುವಕರ ಜೀವನವೇ ಶೂನ್ಯವಾಗುತ್ತಿದೆ. ಶಾಲಾ ಕಾಲೇಜುಗಳ ಸುತ್ತಲೂ ಗಾಂಜಾ ಸೇವನೆ ಹೆಚ್ಚಾಗುತ್ತಿದ್ದು, ಯುವ ಜನರು ಇದನ್ನು ಸೇವನೆಯನ್ನು ಬಹಿಷ್ಕರಿಸಬೇಕು ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ, ತಾಲೂಕು ಜನಜಾಗೃತಿ ವೇದಿಕೆ ಕುಂದಾಪುರ, ಬೈಂದೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಬೈಂದೂರು, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ರವಿವಾರ ಜರಗಿದ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮದ್ಯಪಾನ ವ್ಯವಸ್ಥೆ ಇಡೀ ಸಮಾಜವನ್ನೇ ಹಾಳು ಮಾಡುತ್ತಿದೆ. ಮದ್ಯಪಾನ, ಮಾದಕ ದ್ರವ್ಯ ಸೇವನೆ ಮುಂತಾದವುಗಳು ನಮ್ಮ ಸಮಾಜದ ಕೆಟ್ಟ ವ್ಯವಸ್ಥೆಯಾಗಿದೆ. ಯುವಜನರು ಇಂತಹ ದುಃಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ. ಮಕ್ಕಳು ಮಾದಕ ದ್ಯವ್ಯ ಸೇವನೆ ಯಿಂದ ದೂರ ವಿರುವಂತೆ ಕಾಳಜಿ ವಹಿಸಿ ಎಂದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ ಬಿ., ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್, ಗಂಗೊಳ್ಳಿ ರೋಟರಿ ಕ್ಲಬ್ನ ನಿಯೋಜಿತ ಅಧ್ಯಕ್ಷ ಶಿವಾನಂದ ಪೂಜಾರಿ,
ಕರ್ನಾಟಕಕ್ಕೆ 4ನೇ ಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು