ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ
2020-21ನೇ ಸಾಲಿನಲ್ಲಿ ಆ ಮೊತ್ತವನ್ನು 25, 000 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ
Team Udayavani, Feb 1, 2021, 2:10 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.
ಇದನ್ನೂ ಓದಿ:2021 ಕೇಂದ್ರ ಬಜೆಟ್: ಈ ಬಾರಿ ಯಾವ ವಸ್ತು ಅಗ್ಗ, ಯಾವುದು ದುಬಾರಿ?
ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
2013-14ನೇ ಸಾಲಿನಲ್ಲಿ ಗೋಧಿಯನ್ನು ಖರೀದಿಸುವ ಮೂಲಕ ರೈತರಿಗೆ 33,874 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2019-20ನೇ ಸಾಲಿನಲ್ಲಿ ಆ ಮೊತ್ತ 62,802 ಕೋಟಿಗೆ ಏರಿಕೆಯಾಗಿದ್ದು, 2020-21ನೇ ಸಾಲಿನಲ್ಲಿ 75,060 ಕೋಟಿ ರೂಪಾಯಿಗೆ ಹೆಚ್ಚಳವಾಗಿರುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಹತ್ತಿ ಬೆಳೆಗಾರರಿಗೆ ಇದೀಗ ಭರ್ಜರಿ ರಿಲೀಫ್ ಕಂಡಿದ್ದಾರೆ. 2013-14ನೇ ಸಾಲಿನಲ್ಲಿ 90 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2020-21ನೇ ಸಾಲಿನಲ್ಲಿ ಆ ಮೊತ್ತವನ್ನು 25, 000 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ಈ ಪಾವತಿಯಿಂದ ದೇಶದ 43.36 ಲಕ್ಷ ರೈತರು ಲಾಭ ಪಡೆದಿದ್ದಾರೆ. ರೈತರಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ