Budget 2024: ಕೃಷಿಯನ್ನು ಉತ್ತೇಜಿಸಲು ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’…
ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?
Team Udayavani, Feb 16, 2024, 11:39 AM IST
ಬೆಂಗಳೂರು: ಹದಿನೈದನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಿಎಂ ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಈ ಯೋಜನೆಯಡಿ ರೈತರಿಗೆ ಕೆಲ ವಿಷಯಗಳ ಬಗ್ಗೆ ಮಾರ್ಗದರ್ಶನ ಜೊತೆಗೆ ಬೆಂಬಲ ನೀಡಲು ಸರಕಾರ ಕ್ರಮ ಕೈಗೊಂಡಿದೆ.
ಅವುಗಳೆಂದರೆ:
– ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
– ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
– ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
– ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಸೇರಿದೆ.
ಜೊತೆಗೆ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಹೇಳಿದರು.
ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು ಎಂದರು.
ನಮ್ಮ ಮಿಲ್ಲೆಟ್ ಕಾರ್ಯಕ್ರಮ:
ನಮ್ಮ ಮಿಲ್ಲೆಟ್ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು – ಕಂಪನಿಗಳು ಮತ್ತು రిటిలా ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು