ಆಮ್ಲಜನಕ ಸಿಲಿಂಡರ್ ಹೊರುವ ಪರಿಸ್ಥಿತಿ ಬರುವುದು ಬೇಡ; ಪ್ರಧಾನಿಗೆ 12 ವರ್ಷದ ಬಾಲಕಿ ಪತ್ರ


Team Udayavani, Sep 7, 2020, 7:52 PM IST

Ridhima 1

ಮಣಿಪಾಲ: “ಹವಾಮಾನ ವೈಪರಿತ್ಯಕ್ಕೆ ನಾವು ಏನಾದರೂ ಮಾಡಲೇಬೇಕಾಗಿದೆ. ನಮ್ಮಿಂದ ಏನೂ ಮಾಡಲಾಗದಿದ್ದರೆ ಒಂದು ದಿನ ಎಲ್ಲರೂ ಆಮ್ಲಜನಕ ಸಿಲಿಂಡರ್‌ ಅನ್ನು ಹೊತ್ತುಕೊಂಡು ಓಡಾಡಬೇಕಾಗುತ್ತದೆ.’
ಇದು ಉತ್ತರಾಖಂಡದ ಹರಿದ್ವಾರ ಮೂಲದ ರಿಧಿಮಾ ಎಂಬ ಬಾಲಕಿ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿರುವ ಸಾಲುಗಳು.

ಬ್ಲೂ ಸ್ಕೈಗಾಗಿ ಮೊದಲ ಅಂತಾರಾಷ್ಟ್ರೀಯ ಶುದ್ಧ ವಾಯು ದಿನಾಚರಣೆಯ ಸಂದರ್ಭದಲ್ಲಿ 12 ವರ್ಷದ ಪರಿಸರ ಕಾರ್ಯಕರ್ತೆ ರಿಧಿಮಾ ಎಂಬಾಕೆ ಪ್ರಧಾನ ಮಂತ್ರಿಗೆ ಶುದ್ಧ ಗಾಳಿಯನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ. ಇದು ದೇಶದ ಗಮನ ಸೆಳೆದಿದೆ.

ಆಕ್ಸಿಜನ್‌ ಸಿಲಿಂಡರ್‌ಗಳು ಮಕ್ಕಳ ಜೀವನದ ಪ್ರಮುಖ ಭಾಗವಾಗದಂತೆ ನೋಡಿಕೊಳ್ಳಿ. ಅದನ್ನು ನಾವು ಭವಿಷ್ಯದಲ್ಲಿ ನಮ್ಮ ಹೆಗಲ ಮೇಲೆ ಹೊತ್ತುಕೊಳ್ಳಬೇಕಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗಾಳಿಯು ಎಷ್ಟು ಕಲುಷಿತವಾಗಿದೆ ಎಂದರೆ ಆಮ್ಲಜನಕ ಸಿಲಿಂಡರ್‌ನೊಂದಿಗೆ ಶಾಲೆಗೆ ಹೋಗುವುದನ್ನು ಊಹಿಸುವುದೂ ಕಷ್ಟ. ನನ್ನಂತಹ 12 ವರ್ಷದ ಮಗುವಿಗೆ ಉಸಿರಾಟದ ತೊಂದರೆ ಇದ್ದರೆ ಜೀವ ಉಳಿಸಿಕೊಳ್ಳಲು ತುಂಬಾ ಕಷ್ಟವಾದೀತು. ದಿಲ್ಲಿ ಅಥವಾ ಇತರ ನಗರಗಳಲ್ಲಿ ವಾಸಿಸುವ ಮಕ್ಕಳ ಮೇಲೆ ಇದು ಯಾವ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆ ನನ್ನನ್ನು ತುಂಬಾ ಕಾಡುತ್ತದೆ ಎಂದು 12 ವರ್ಷದ ಬಾಲಕಿ ಪ್ರಧಾನಿಗೆ ಬರೆದ ಪತ್ರದಲ್ಲಿ ಅವಲತ್ತುಕೊಂಡಿದ್ದಾರೆ.

ಪ್ರತಿ ವರ್ಷ ಭಾರತದ ಅನೇಕ ಭಾಗಗಳಲ್ಲಿ ಗಾಳಿಯು ತುಂಬಾ ಕಲುಷಿತಗೊಳ್ಳುತ್ತದೆ. ಅಕ್ಟೋಬರ್‌ ಅನಂತರ ಉಸಿರಾಡಲು ತುಂಬಾ ಕಷ್ಟವಾಗುತ್ತದೆ. ನಾವು ಈ ಬಗ್ಗೆ ಯೋಚಿಸಬೇಕು ಮತ್ತು ಇದಕ್ಕಾಗಿ ಏನಾದರೂ ಮಾಡಬೇಕು. ದಟ್ಟವಾದ ನಗರಗಳಲ್ಲಿ ಗಾಳಿ ಹೆಚ್ಚು ಕಲುಷಿತಗೊಳ್ಳುತ್ತಿದೆ. ಅಲ್ಲಿ ವಾಸಿಸುವ ಜನರಿಗೆ ಇದು ತುಂಬಾ ಅಪಾಯಕಾರಿ. ಇದು ಮುಂಬರುವ ದಿನಗಳಲ್ಲಿ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ನೀವು ಹವಾಮಾನ ಬದಲಾವಣೆಯ ಅನಿವಾರ್ಯತೆಯನ್ನು ಒಪ್ಪಿಕೊಂಡಿದ್ದೀರಿ. ಇಂದು ದೇಶದ ಎಲ್ಲ ಮಕ್ಕಳ ಪರವಾಗಿ, ಬ್ಲೂ ಸ್ಕೈಗಾಗಿ ಅಂತಾರಾಷ್ಟ್ರೀಯ ಶುದ್ಧ ಗಾಳಿ ದಿನದಂದು, ದಯವಿಟ್ಟು ನಮ್ಮ ಭವಿಷ್ಯದ ಬಗ್ಗೆ ಯೋಚಿಸಲು ನಾನು ನಿಮಗೆ ವಿನಂತಿಯನ್ನು ಮಾಡಬಯಸುತ್ತೇನೆ. ಭಾರತದ ನಾಗರಿಕರು ಶುದ್ಧ ಗಾಳಿಯನ್ನು ಉಸಿರಾಡಲು ಎಲ್ಲ ನಿಯಮಗಳು ಮತ್ತು ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನೀವು ಕಟಿಬದ್ಧರಾಗಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಶ್ವಸಂಸ್ಥೆಯ ಉದ್ದೇಶ
ಕಳೆದ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ತನ್ನ 74ನೇ ಅಧಿವೇಶನದಲ್ಲಿ ಬ್ಲೂ ಸ್ಕೈಗಾಗಿ ಅಂತಾರಾಷ್ಟ್ರೀಯ ಶುದ್ಧ ಗಾಳಿ ದಿನವನ್ನು ಆಚರಿಸಲು ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷ ಆದಿಯಾಗಿ ಸೆ. 7ರಂದು ಅಂತಾರಾಷ್ಟ್ರೀಯ ಶುದ್ಧ ಗಾಳಿ ದಿನವನ್ನು ಆಚರಿಸಲಾಗುತ್ತದೆ. ಶುದ್ಧ ಗಾಳಿಯ ಮಹತ್ವದ ಬಗ್ಗೆ ವ್ಯಕ್ತಿ, ಸಮುದಾಯ, ಕಾರ್ಪೊರೇಟ್‌ ಮತ್ತು ಸರಕಾರಕ್ಕೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ.

ಶುದ್ಧ ಗಾಳಿ ದಿನ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ವಾಯುಮಾಲಿನ್ಯದಿಂದ ಹೆಚ್ಚು ಪರಿಣಾಮ ಬೀರುವ ದೇಶ ಭಾರತ. ದೇಶವು ಇಂದು 90 ಮಿಲಿಯನ್‌ ಟನ್‌ ಕಲ್ಲಿದ್ದಲು, 40 ಮಿಲಿಯನ್‌ ಟನ್‌ ಜೀವರಾಶಿ, 200 ಮಿಲಿಯನ್‌ ಟನ್‌ ತೈಲ ಮತ್ತು 50 ಮಿಲಿಯನ್‌ ಟನ್‌ ಅನಿಲವನ್ನು ಬಳಸುತ್ತದೆ.

 

ಟಾಪ್ ನ್ಯೂಸ್

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.