ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆ; ಯುವ ಸಮುದಾಯ


Team Udayavani, Aug 15, 2020, 11:00 AM IST

Time for change

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯ ಕಾಲ ಕಾಲಕ್ಕೆ ಬದಲಾವಣೆಯನ್ನು ಅನುಸರಿಸಿಕೊಂಡು ಬಂದಿದೆ.

ಹಿಂದಿನ ಕಾಲದಲ್ಲಿ ಗುರುಕುಲ ಶಿಕ್ಷಣ ಪದ್ಧತಿಯನ್ನು ನಾವು ಕಾಣಬಹುದಾಗಿತ್ತು.

ಗುರುಕುಲ ಶಿಕ್ಷಣದಲ್ಲಿ ಶಾಸ್ತ್ರಗಳ ಅಭ್ಯಾಸದ ಜತಗೆ ಜೀವನಕ್ರಮದ ಬಗ್ಗೆ ಶಿಕ್ಷಣ ನೀಡಲಾಗುತ್ತಿತ್ತು.

ಇದೊಂದು ಅನೌಪಚಾರಿಕ ಶಿಕ್ಷಣ ಪದ್ಧತಿಯಾಗಿತ್ತು. ಇಲ್ಲಿ ಯಾವುದೇ ಸೀಮಿತ ಅಂದರೆ ಅಕಾಡೆಮಿಕ್‌ ಶಿಕ್ಷಣ ಇರಲಿಲ್ಲ.

ಬಳಿಕ ಕಾಲ ಬದಲಾದಂತೆ ಜಗತ್ತು ಆಧುನಿಕರಣವಾದಾಗ ಜೌಪಚಾರಿಕ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕಾಯಿತು.

ಇದರನ್ವಯ ತರಗತಿ, ತರಗತಿಗನುಗಣವಾಗಿ ಪಠ್ಯಗಳನ್ನು ಕೂಡ ಅಳವಡಿಸಲಾಯಿತು. ಪಠ್ಯದಲ್ಲಿರುವ ಪಾಠಗಳನ್ನು ಅಭ್ಯಸಿಸಿ ಅದಕ್ಕೆ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿತ್ತು. ಇದು ಲಾರ್ಡ್‌ ಮೆಕಾಲೆ ಶಿಕ್ಷಣದ ಒಂದು ಭಾಗವಾಗಿದೆ ಎಂದು ಹೇಳಬಹುದು. ತರುವಾಯ ಸದ್ಯ ಭಾರತದಲ್ಲಿ ನೂತನ ಶಿಕ್ಷಣ ಪದ್ಧತಿ-2020 ಎಂಬ ಕ್ರಮವನ್ನು ಘೋಷಿಸಲಾಗಿದೆ. ಇದು ಭಾರತದಲ್ಲಿ ಶಿಕ್ಷಣ ಕ್ರಾಂತಿಗೆ ಪೂರಕವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಹೀಗೆ ದೇಶದ ಶಿಕ್ಷಣವೂ ಕಾಲ ಕಾಲಕ್ಕೆ ಬದಲಾವಣೆ ಕಂಡಿದೆ.

ಶಿಕ್ಷಣವೂ ವ್ಯಕ್ತಿಯೋರ್ವನಿಗೆ ಸಿಗಬೇಕಾದ ಮೂಲಹಕ್ಕುಗಳಲ್ಲಿ ಒಂದು. ಇದರಿಂದ ಆತನ ಜೀವನಕ್ಕೆ ಉದ್ಯೋಗ ನೀಡುವಷ್ಟೇ ಅಲ್ಲ, ಜೀವನ ಬೆಳಗಲೂ ಪ್ರೇರಣೆಯಾಗಬೇಕು. ಜ್ಞಾನ ವೃದ್ಧಿಗೆ ಶಿಕ್ಷಣ ಅತ್ಯಗತ್ಯ. ಈ ಹಿಂದೆ ಗುರುಕುಲ ಶಿಕ್ಷಣ ಪದ್ಧತಿಯೂ ಬಾಯಿಪಾಠದ ಶಿಕ್ಷಣಕ್ಕಿಂತ ವ್ಯಕ್ತಿತ್ವ, ಮೌಲ್ಯ ಶಿಕ್ಷಣಕ್ಕೆ ಒತ್ತು ನೀಡುತ್ತಿತ್ತು. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಿರುತ್ತಿದ್ದ. ಹಿರಿಯ-ಕಿರಿಯರಿಗೆ ಗೌರವಾಧರಗಳನ್ನು ನೀಡುವುದನ್ನು ಕಲಿತಿರುತ್ತಿದ್ದ. ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸುತ್ತಿದ್ದ ಎಂದು ಓದಿ ಕೇಳಿದ್ದೇವೆ. ಆಗಂಥ ಈಗಿನ ಆಧುನಿಕ ಶಿಕ್ಷಣ ಮೌಲ್ಯ ಶಿಕ್ಷಣ ನೀಡುವುದನ್ನು ಕಲಿಸಲಿಲ್ಲವೇ ಎಂದರೆ ತಪ್ಪಾಗುತ್ತದೆ. ಆಧುನಿಕ ಶಿಕ್ಷಣ ಪದ್ಧತಿ ಮೌಲ್ಯ ಶಿಕ್ಷಣಕ್ಕೂ ಒತ್ತು ನೀಡಿದೆ ಆದರೆ ಕೆಲವೊಂದು ಬದಲಾವಣೆ ಅತ್ಯಾವಶ್ಯಕ ಅಗತ್ಯವಿದೆ ಎಂಬ ಬಲವಾದ ವಾದಗಳು ಆಗಾಗ ಕೇಳಿಬರುತ್ತಿದ್ದವು. ಇದಕ್ಕೆ ಕೇವಲ ಶಿಕ್ಷಣ ಪದ್ಧತಿ ಹೊಣೆಗೇಡಿಯಾಗಬೇಕಿಲ್ಲ. ಬದಲಾಗಿ ಇಡೀ ವ್ಯವಸ್ಥೆ ಹೊಣೆಯಾಗಬೇಕಿದೆ.

ಈ ನಿಟ್ಟಿನಲ್ಲಿ ಈಗಿನ ಜಾರಿಗೊಳಿಸಿರುವ ನೂತನ ಶಿಕ್ಷಣ ಪದ್ದತಿ ಅನುಕೂಲಿಯಾಗಲಿದೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ಜ್ಞಾನಕ್ಕೆ ಪೂರಕವಾದ ಶಿಕ್ಷಣ ಬೇಕಿದೆ. ಅವರ ಆಸಕ್ತಿ, ಕೌಶಲ ವೃದ್ಧಿಗೆ ಪೂರಕವಾದ ಶಿಕ್ಷಣ ಮಾಧ್ಯಮ ಬೇಕಿದೆ. ಕೇವಲ ಉದ್ಯೋಗ ಸೃಷ್ಟಿಗೆ ಮಾತ್ರ ಶಿಕ್ಷಣ ಸೀಮಿತವಾಗದೇ ಇಡೀ ಮನುಷ್ಯನ ವ್ಯಕ್ತಿತ್ವ, ಸರ್ವತೋಮುಖ ಅಭಿವೃದ್ಧಿಯಾಗುವ ಶಿಕ್ಷಣ ಅಗತ್ಯವಿದೆ. ಇನ್ನು 2030ರ ವೇಳೆಗೆ ಭಾರತದಲ್ಲಿ ಶಿಕ್ಷಣ ಪದ್ಧತಿಯೂ ಮುಂದುವರಿದಿರುತ್ತದೆ. ಈಗಾಗಲೇ ವೃತ್ತಿ ಶಿಕ್ಷಣ, ಕೌಶಲ ವೃದ್ಧಿ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣಕ್ಕೆ ಹೆಚ್ಚು ಒತ್ತು ಸಿಗುತ್ತಿದೆ. ತಂತ್ರಜ್ಞಾನವೂ ಅಭಿವೃದ್ಧಿಯಾಗಿದ್ದು ಶಿಕ್ಷಣದಲ್ಲಿ ಕೂಡ ಬಳಕೆಯಾಗುತ್ತಿದೆ. ವಿಧವಿಧವಾದ ಕೋರ್ಸ್‌ಗಳು ದೇಶಕ್ಕೆ ಪರಿಚಯವಾಗುತ್ತಿವೆ. ಇದು ಮುಂದುವರಿದ ಶಿಕ್ಷಣ ಭಾಗವಾಗಿದೆ. ಹೀಗಾಗಿ ನಾವು ಕೂಡ ಶಿಕ್ಷಣ ಪದ್ಧತಿಗೆ ಒಗ್ಗಿಕೊಳ್ಳಬೇಕಿದೆ.

 ನವ್ಯಶ್ರೀೆ, ರಾಮಕುಂಜೇಶ್ವರ ಕಾಲೇಜು ರಾಮಕುಂಜ

 

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.