12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ


Team Udayavani, Jul 31, 2020, 10:31 AM IST

Malayali

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಇತ್ತೀಚಿನ ದಿನಗಳಲ್ಲಿ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆ ಕಂಡು ಬಂದಿದ್ದು ತ್ವರಿತ ಗತಿಯ ಆಹಾರ ಪದ್ಧತಿಗಳನ್ನು ಬಿಟ್ಟು ಜನರು ಸ್ವ-ಅವಲಂಬಿತ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು ವಿಶೇಷ.

ಅದರಂತೆ ಜನರು ಮನೆಗಳಲ್ಲಿ ನಗರ ತೋಟಗಾರಿಕೆ, ಟೆರೆಸ್‌ ಗಾರ್ಡ್‌ನಿಂಗ್‌ನಂತಹ ಹೊಸ ರೀತಿಯ ಜೀವನ ಶೈಲಿಯನ್ನು ಆರಂಭಿಸಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಕೇರಳದ ತಿರುವನಂತಪುರಂನಲ್ಲಿರುವ ಕುಟುಂಬವೊಂದು 12 ವರ್ಷಗಳಿಂದ ಮನೆಗೆ ಬೇಕಾದ ಅಕ್ಕಿ, ತರಕಾರಿಗಳನ್ನು 20 ಸೆಂಟ್ಸ್‌ನಲ್ಲಿ ಬೆಳೆದು ಮಾದರಿಯಾಗಿದ್ದಾರೆ.

ವೆಲ್ಲಾಯಣಿಯಲ್ಲಿ ಕೃಷಿ ಮಹಾವಿದ್ಯಾಲಯದ ರೋಗಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಉಮಾ ಮಹೇಶ್ವರ್‌ ಭೂಮಿ ಉಳುಮೆ ಮಾಡಲು, ನೆಲಸಮಗೊಳಿಸಲು ಮನೆ ಹತ್ತಿರದಲ್ಲಿರುವ ಕೃಷಿ ಭವನದ ಸಹಾಯ ಪಡೆಯುತ್ತಾರೆ. ಅಲ್ಲದೆ ಇವರ ಮನೆಯಲ್ಲಿ ಬೆಳೆಯಲಾದ ಹೆಚ್ಚಿನ ಸಸಿಗಳನ್ನು ಅಲ್ಲಿಂದಲೇ ತರಲಾಗಿದ್ದು, ಇಳುವರಿ ಕೂಡ ಚೆನ್ನಾಗಿದೆ.

ಉಮಾ ಮಹೇಶ್ವರ್‌ ಅವರ ಪತ್ನಿ ರಾಜಶ್ರೀ ತಿರುವನಂತಪುರಂನ ಕೃಷಿ ನಿರ್ದೇಶನಾಲಯದಲ್ಲಿ ಸಸ್ಯ ಸಂರಕ್ಷಣಾ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮನೆಯವರೆಲ್ಲರೂ ಸೇರಿ ತಮ್ಮ ಜಾಗದಲ್ಲಿ 400 ಕೆ.ಜಿ. ಭತ್ತದ ಕೃಷಿ ಬೆಳೆಯುತ್ತಾರೆ. ನವೆಂಬರ್‌ನಲ್ಲಿ ಭತ್ತ ಕೊಯ್ಲು ಮಾಡುತ್ತಾರೆ. ಉಳಿದ ತಿಂಗಳು ಆ ಜಾಗದಲ್ಲಿ ದ್ವಿದಳ ಧಾನ್ಯಗಳನ್ನು ಬೆಳೆಸುತ್ತಾರೆ. ಇದರಲ್ಲಿ ಅವರು ವರ್ಷಕ್ಕೆ 10 ಕೆ.ಜಿ. ಇಳುವರಿ ಪಡೆಯುತ್ತಿದ್ದಾರೆ.

20 ಸೆಂಟ್ಸ್‌ನಲ್ಲಿ ಭತ್ತ ಬೆಳೆದರೆ ಮನೆಯ ಅಕ್ಕ ಪಕ್ಕ ಇರುವ 6 ಸೆಂಟ್ಸ್‌ ಜಾಗದಲ್ಲಿ ಶುಂಠಿ, ಅರಿಶಿನ, ಮೆಣಸು, ಟೊಮೆಟೊ, ಬಾಳೆಹಣ್ಣು, ಹೂಕೋಸು, ಬೆಂಡೆಕಾಯಿ ಇನ್ನಿತರ ತರಕಾರಿಗಳನ್ನು ಬೆಳೆಯುತ್ತಾರೆ.  ತಂಪು ಪ್ರದೇಶಗಳಲ್ಲಿ ಹೆಚ್ಚಾಗಿ ಬೆಳೆಯುವ ತರಕಾರಿಗಳನ್ನು ಕೂಡ ಇವರು ಬೆಳೆಯುತ್ತಿದ್ದು ಈರುಳ್ಳಿ, ಬಟಾಟೆ, ಬೆಳ್ಳುಳ್ಳಿ, ಬದನೆಕಾಯಿ, ಬಿನ್ಸ್‌, ಸ್ಥಳೀಯ ತರಕಾರಿಗಳಾದ ಸಿಹಿ ಕುಂಬಳಕಾಯಿ, ಸೋರೆಕಾಯಿ ಮುಂತಾದ ಕೃಷಿ ಮಾಡುತ್ತಾರೆ.ಇದಲ್ಲದೆ ಟೆರೆಸ್‌ನಲ್ಲಿ ಗ್ರೋ ಬ್ಯಾಗ್‌ಗಳನ್ನು ಬಳಸಿ ಗಿಡಗಳನ್ನು ಬೆಳೆಸಲಾಗುತ್ತಿದೆ.

ಉಮಾ ಮಹೇಶ್ವರ್‌-ರಾಜಶ್ರೀ ದಂಪತಿ ಪುತ್ರ ಆನಂದ ಕೂಡ ಚಿಕ್ಕಂದಿನಿಂದಲೇ ಕೃಷಿಯಲ್ಲಿ ತೊಡಗಿಕೊಂಡಿದ್ದು, ಅದರಲ್ಲಿ ಆಸಕ್ತಿ ಹೊಂದಿದ್ದಾರೆ. ಸಮಯ ಸಿಕ್ಕಾಗೆಲ್ಲ ಕೃಷಿಗೆ ಇವರೂ ನೆರವಾಗುತ್ತಾರೆ.

ಒಟ್ಟಿನಲ್ಲಿ ಇದೇ ರೀತಿ ಪ್ರತಿ ಮನೆಯಲ್ಲಿಯೂ ಅಗತ್ಯಕ್ಕೆ ತಕ್ಕ ತರಕಾರಿ, ಧಾನ್ಯಗಳನ್ನು ಬೆಳೆಯುವುದರಿಂದ ಪ್ರತಿಯೊಂದಕ್ಕೂ ಅಂಗಡಿಯನ್ನು ಅವಲಂಭಿಸುವುದನ್ನು ತಪ್ಪಿಸಬಹುದು ಮತ್ತು ರಾಸಾಯನಿಕಯುಕ್ತ ಆಹಾರ ಸೇವನೆಗೆ ನಿಯಂತ್ರಣ ಹೇರಬಹುದು.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.