ಅಪ್ಪ ನೀನೆ ನಮ್ಮ ಆಸ್ತಿ


Team Udayavani, Mar 21, 2021, 9:45 PM IST

Dadsbaby

ಮನೆಯವರ ಇಷ್ಟ-ಕಷ್ಟಗಳ ಪೂರೈಸಲು ಶ್ರಮಿಸುವ ಅಪ್ಪ ತನ್ನ ಬಗ್ಗೆ ಆಲೋಚಿಸುವುದು ಬಹಳ ಅಪರೂಪ.

ತನ್ನೆಲ್ಲಾ ನೋವನ್ನು ಒಡಲೊಳಗೆ ಬಚ್ಚಿಡುವ ಅಪ್ಪ ಸಿಡುಕ ಅಂತ ಅನ್ಸೋದು ಸಹಜ. ನಮ್ಮೆಲ್ಲ ಬೇಕು ಬೇಡಗಳನ್ನು ಅರ್ಥ ಮಾಡ್ಕೊಳ್ಳೋ ಅಪ್ಪನ ಬೇಕು ಬೇಡಗಳನ್ನು ಅರ್ಥಮಾಡ್ಕೊಳ್ಳೋದ್ರಲ್ಲಿ ನಾವು ಯಾಕೆ ವಿಫ‌ಲರಾಗ್ತೀವಿ?

ಅಪ್ಪನ ಪ್ರತೀ ಗದರುವಿಕೆಯಲ್ಲೂ ಪ್ರೀತಿ ಅಡಕ
ಮನೆಯಿಂದ ಹೊರಗಿದ್ದು ಕೆಲಸ ಮಾಡೋ ಅಪ್ಪನಿಗೆ ಸಮಾಜದ ಆಗುಹೋಗುಗಳು ನಮಗಿಂತ ಚೆನ್ನಾಗಿ ಅರಿವಿರುತ್ತದೆ. ¤ ಕುಟುಂಬವನ್ನು ಜೋಪಾನ ಮಾಡಿ ಕಾಪಾಡುವ ಹೊಣೆ ಅಪ್ಪನಿದ್ದಾಗಿದ್ದು ಇದನ್ನೆಲ್ಲಾ ತಿಳ್ಕೊಳ್ಳಲೇ ಬೇಕು. ಇದರ ಅರಿವಿರೋದ್ರಿಂದನೇ ಅಪ್ಪ ನಮ್ಮಲ್ಲಿ ಶಿಸ್ತು ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳೋದಿಕ್ಕೆ ಹೇಳ್ತಾರೆ, ಕೆಲವು ಬಾರಿ ಕಟ್ಟುಪಾಡುಗಳನ್ನು ಹಾಕ್ತಾರೆ. ಅವುಗಳನ್ನು ನಾವು ಅನುಸರಿಸದೇ ಇದ್ದ ಸಂದರ್ಭದಲ್ಲಿ ಗದರಬಹುದು ಆದ್ರೆ ಅವನ ಉದ್ದೇಶ ಒಂದೇ ಅವನ ಮಕ್ಕಳಿಗೆ ಜೀವನ ಪಾಠವನ್ನು ಕಲ್ಸೊàದು. ಅಪ್ಪನನ್ನು ಬೈದುಕೊಂಡೆ ನಾವು ಇವುಗಳನ್ನೆಲ್ಲಾ ಕಲ್ತಿರ್ತೀವಿ ಆದ್ರೆ ಅಪ್ಪ ಮಾಡಿದ್ದು ಸರಿ ಅಂತ ಅರ್ಥ ಆಗೋವಾಗ ಬಹಳ ತಡವಾಗುತ್ತದೆ.

ಅಪ್ಪಾ ನೀನು ನಮಗೆಲ್ಲವನ್ನು ಮಾಡಿಕೊಡುವುದರ ಜತೆಗೆ ಸ್ವಾಲಂಬಿಯಾಗಿರುವುದನ್ನು ಕಲಿಸಿದ್ದೀಯ, ಅಪ್ಪ ಕೋಪ ಮಾಡಿಕೊಂಡಾಗ ಯಾಕೆ ಹೀಗಾಡ್ತಾರೆ ಅಂತ ಅನ್ಸಿದ್ರು ಅವರು ಆ ರೀತಿ ನಡೆದುಕೊಳ್ಳೊದ್ರ ಫ‌ಲನೇ ನಮ್ಮಲ್ಲಿ ಶಿಸ್ತು ಮನೆ ಮಾಡಿರೋದು. ನಾವು ಇವತ್ತು ಎಷ್ಟೇ ಬೇಳೆದು ದೊಡ್ಡವರಾಗಿರಲಿ ನಮ್ಮ ನೋವಲ್ಲಿ ಮೊದಲು ನೆನಪಾಗೋದು ನೀನೆ, ನಮ್ಮ ಪ್ರತಿ ಕಷ್ಟದಲ್ಲು ಜತೆ ನಿಂತವನೂ ನೀನೆ. ತಪ್ಪೋ ಸರಿನೋ ಆದ್ರೆ ಯಾವ ಕ್ಷಣದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ನೀನು. ಸಣ್ಣ ತಪ್ಪಿಗೂ ಗದರುವ ನೀನು ನಮ್ಮ ಸಣ್ಣ ಸಣ್ಣ ಸಾಧನೆಯಲ್ಲಿಯೂ ಸಾರ್ಥಕತೆ ಕಂಡಿದ್ದೀಯ ಅದ್ಕೆ ನೀನಂದ್ರೆ ನಮ್ಗೆ ಗೌರವ ಪ್ರೀತಿ ಎಲ್ಲ. ಮನೆಯಲ್ಲಿ ಎಷ್ಟೇ ಬೈದ್ರೂ ಶಾಲಾ ಕಾಲೇಜುಗಳಲ್ಲಿ ಪೇರೆಂಟ್ಸ್‌ ಮೀಟಿಂಗ್‌ಗೆ ಬರೋ ನೀನು ನಮ್ಮನ್ನ ಒಂದು ದಿನ ಬಿಟ್ಟು ಕೊಟ್ಟಿದ್ದಿಲ್ಲ. ಅವಾಗೆಲ್ಲ ನಿನ್ನ ಬಗ್ಗೆ ಅಪಾರವಾದ ಹೆಮ್ಮೆ ನಮಗಾಗ್ತಿತ್ತು.

ಅಪ್ಪಾ ಯು ಆರ್‌ ಹೀರೋ
ನಾವು ಸಣ್ಣವರಿದ್ದಾಗ ಆ ಸ್ಕೂಟರ್‌ ಅಲ್ಲಿ ನಮ್ಮನ್ನೆಲ್ಲಾ ಕೂರಿಸ್ಕೊಂಡು ಹೋಗ್ತಿದ್ದಾಗ ದಾರಿ ಉದ್ದಕ್ಕೂ ನಿಂಗೆ ಎಲ್ಲಾರು ನಮಸ್ತೆ ಮಾಡ್ತಿದ್ರೆ ನಮೊಗೊಂತರ ಗೌರವ, ಜತೆಗೆ ನೀನು ಹೀರೋ ಆಗಿºಡ್ತಿದ್ದೆ ನಮ್ಮ ಕಣ್ಣಲ್ಲಿ. ನೀನು ಯಾವತ್ತಿಗೂ ಹೀರೋನೆ. ಎಷ್ಟೋ ವಿಷಯಗಳನ್ನು ನಮ್ಗೆ ಮನಬಂದಂತೆ ನೀನು ಮಾಡ್ಲಿಕ್ಕೆ ಬಿಡದಿದ್ದಾಗ ನಮ್ಗೆ ನಿನ್ನ ಬಗ್ಗೆ ಬೇಜಾರಾದ್ರೂ ಯಾವತ್ತು ನಮ್ಮನ್ನು ಅನುಮಾನಿಸದೆ ಇದ್ದೆ ಅಲ್ವ ನೀನು? ಅದಕ್ಕಾಗಿ ನಿನ್ನ ಬಗ್ಗೆ ತುಂಬಾ ಹೆಮ್ಮೆ. ಅಪ್ಪಾ ಅಂದ್ರೆ ನಿನ್ನ ಹಾಗೆ ಇರ್ಬೇಕು ಅಂತ ಅನ್ಸಿದ್ದು ಸುಳ್ಳಲ್ಲ.

ಇವತ್ತು ನಾಲ್ಕು ಜನರ ಮಧ್ಯೆ ತಲೆ ಎತ್ತಿ ಓಡಾಡುವ ತಾಕತ್ತನ್ನು ನಮ್ಗೆ ನೀಡಿದ ನೀನು ಗ್ರೇಟ್‌ . ಎಲ್ಲರ ನೋವಿಗೂ ನಲಿವಾಗೋ ನಮ್ಮಪ್ಪನ ನಗು ನಾವಾಗಬೇಕು. ಮತ್ಯಾಕೆ ಅಲ್ವಾ ಮಕ್ಕಳಿರೋದು. ಕೋಟಿ ಕೋಟಿ ಆಸ್ತಿ ಇದ್ದರೇನು ಬಂತು ಅಪ್ಪನ ಮುಖದಲ್ಲಿ ನಗು ತರಿಸುವ ತಾಕತ್ತು ಮಕ್ಕಳಿಗಿಲ್ಲವಾದರೆ. ಅಪ್ಪ ಮಾಡಿಟ್ಟ ಆಸ್ತಿ ಕರಗಿ ಹೋಗಬಹುದು ಆದ್ರೆ ಅವನು ಕಲಿಸಿದ ಪಾಠಗಳು ಜೀವನದುದ್ದಕ್ಕೂ ನಮ್ಮನ್ನು ಕಾಪಾಡುತ್ತವೆ. ಅಪ್ಪ ಒಂಥರಾ ಆಕಾಶನೆ. ಅವನ ಅಸ್ತಿತ್ವದ ಅನಿವಾರ್ಯಯ ಅರಿವು ನಮಗಾಗದಿದ್ದರೂ ಅವನ ಅನುಪಸ್ಥಿತಿ ಖಂಡಿತ ಅರಿವಾಗುತ್ತದೆ. ನಮ್ಮ ನೆಮ್ಮದಿಯ ಬಾಳಿನ ಸೂತ್ರದಾರನಿಗೆ ಧನ್ಯವಾದ. ನಮ್ಮ ಆಸ್ತಿ ನೀನು. ಅಪ್ಪ.


ಸಾಯಿ ಶ್ರೀಪದ್ಮ ಡಿ.ಎಸ್‌., ಸಂತ ಫಿಲೋಮಿನಾ ಕಾಲೇಜು, ಮೈಸೂರು 

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.