ಬರ್ಕಣಾ ಜಲಪಾತದ ವೈಭೋಗ


Team Udayavani, Jun 28, 2021, 9:00 AM IST

ಬರ್ಕಣಾ ಜಲಪಾತದ ವೈಭೋಗ

ಸುತ್ತ ಹಸುರ ಕೇಶರಾಶಿಯ ಮಧ್ಯೆ ಬೈತಲೆಯಂತೆ ಸಾಗುವ ಕಣಿವೆ. ಬೆಟ್ಟ – ಗುಡ್ಡಗಳ ಸಾಲು, ಬಾನಿಗೆ ಮುತ್ತಿಕ್ಕೋ ಮಂಜಿನ ರಾಶಿ. ಹಸುರ ಬೆಟ್ಟಗಳ ಸಾಲಿನಿಂದ, ಕಲ್ಲು- ಬಂಡೆಗಳ ಮಧ್ಯದಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ. ಇದು ದಕ್ಷಿಣದ ಚಿರಾಪುಂಜಿಯೆಂದೇ ಹೆಸರುವಾಸಿಯಾದ ಆಗುಂಬೆ ಸಮೀಪದ ಮಲ್ಲಂದೂರಿನಲ್ಲಿ ವೈಭವದಿ ಹರಿಯುವ ಬರ್ಕಣಾ ಜಲಪಾತದ ಸೊಬಗು.

ಆಗುಂಬೆ ಎಂದರೆ ಸಾಕು ಸಾಲು – ಸಾಲು ಜಲಪಾತಗಳು ನಮ್ಮನ್ನು ಕೈ ಬೀಸಿ ಕರೆಯುತ್ತವೆ. ಬರ್ಕಣಾ, ಒನಕಿ ಅಬ್ಬಿ, ಜೋಗಿ ಗುಂಡಿ, ಕುಂಚಿಕಲ್‌ ಹೀಗೆ ಮುಂದುವರಿಯುತ್ತದೆ. ಅದರಲ್ಲೂ ಡಾ| ರಾಜಕುಮಾರ್‌ ಅಭಿನಯದ ಆಕಸ್ಮಿಕ ಸಿನೆಮಾ ಚಿತ್ರೀಕರಣಗೊಂಡ ಬರ್ಕಣಾ ಜಲಪಾತವಂತೂ ನೋಡುಗರ ಕಣ್ಮನ ಸೆಳೆಯುತ್ತದೆ. ಮಳೆಗಾಲದಲ್ಲಂತೂ ಬಂಡೆಗಳ ಮೇಲಿನಿಂದ ಜುಳು – ಜುಳು ನಿನಾದಗೈಯ್ಯುತ್ತಾ, ಧುಮ್ಮಿಕ್ಕೋ ಜಲಧಾರೆಗಳು ಕ್ಷೀರಧಾರೆಯಂತೆ ಭಾಸವಾಗುತ್ತವೆ. ಆಗಾಗ ಬರುವ ಮಳೆಗೆ ಬೆಟ್ಟಗಳ ಸಾಲು ಹಸಿರೊದ್ದು ಝೇಂಕರಿಸುತ್ತಿದ್ದರೆ, ಮಂಜಿನ ಕಣ್ಣಮುಚ್ಚಾಲೆ ಆಟವು ನಿಸರ್ಗದ ನೈಜ ಸಂಪತ್ತನ್ನು ಪ್ರವಾಸಿಗರಿಗೆ ಉಣಬಡಿಸುತ್ತದೆ.

ಬರ್ಕಣಾ ಜಲಪಾತವು ದೇಶದ 11ನೇ ಅತೀ ಎತ್ತರದ ಜಲಪಾತವಾಗಿದ್ದು, ಇಲ್ಲಿ ಸುಮಾರು 850 ಅಡಿ ಎತ್ತರದಿಂದ ಕಲ್ಲು, ಬಂಡೆಗಳ ಮಧ್ಯೆ ಹಾಲ್ನೊರೆಯಂತೆ ನೀರು ಧುಮ್ಮಿಕ್ಕುವುದನ್ನು ನೋಡುವುದೇ ಕಣ್ಣಿಗೆ ಹಬ್ಬ.

ಪಶ್ಚಿಮ ಘಟ್ಟದ ದಟ್ಟ ಅರಣ್ಯ ಪ್ರದೇಶಗಳ ಮಧ್ಯೆ ಇರುವ ಈ ಜಲಪಾತವು ಇಲ್ಲಿಗೆ ಬರುವ ಪ್ರವಾಸಿಗರು, ಚಾರಣಿಗರಿಗೆ ವಿಶಿಷ್ಟ ಅನುಮತಿಯನ್ನು ನೀಡುತ್ತದೆ. ಬರ್ಕಣಾ ವೀಕ್ಷಕ ತಾಣ (ಬರ್ಕಣಾ ವ್ಯೂ ಪಾಯಿಂಟ್)ವು ಪಶ್ಚಿಮ ಘಟ್ಟಗಳ ರುದ್ರರಮಣೀಯ ಸೌಂದರ್ಯವನ್ನು ತೆರೆದಿಡುತ್ತದೆ.

ನರಸಿಂಹ ಪರ್ವತದಲ್ಲಿ ಹುಟ್ಟಿ, ಆಗುಂಬೆಯನ್ನು ದಾಟಿಕೊಂಡು, ಸೋಮೇಶ್ವರದಲ್ಲಿ ಹರಿದು, ಉಡುಪಿಯಲ್ಲಿ ಸಮುದ್ರ ಸೇರುವ ಸೀತಾ ನದಿಯು ಈ ಬರ್ಕಣಾ ಜಲಪಾತವನ್ನು ದಾಟಿಯೇ ಮುನ್ನಡೆಯುವುದು ವಿಶೇಷ.

ಈ ಬರ್ಕಣಾ ಜಲಪಾತವು ಕುದುರೆಮುಖ ವನ್ಯಜೀವಿ ವಿಭಾಗ, ಸೋಮೇಶ್ವರ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವುದರಿಂದ ಅರಣ್ಯ ಇಲಾಖೆಯವರ ಅನುಮತಿ ತೆಗೆದುಕೊಂಡೇ ಹೋಗುವುದು ಸೂಕ್ತ.

ಯಾವಾಗ ಸೂಕ್ತ?:

ಇಲ್ಲಿಗೆ ವರ್ಷದ ಎಲ್ಲ ದಿನಗಳಲ್ಲೂ ಭೇಟಿ ನೀಡಬಹುದಾದರೂ, ಸಪ್ಟೆಂಬರ್‌, ಡಿಸೆಂಬರ್‌, ಜನವರಿ ತಿಂಗಳಲ್ಲಿ ಇಲ್ಲಿಗೆ ಬಂದಲ್ಲಿ ಅತ್ಯದ್ಭುತ ಪ್ರಕೃತಿ ಸೌಂದರ್ಯವನ್ನು ಸವಿಯಬಹುದು. ಬೇಸಿಗೆಯಲ್ಲಿ ಜಲಪಾತದಲ್ಲಿ ಅಷ್ಟೇನು ನೀರಿನ ಹರಿವು ಇರುವುದಿಲ್ಲ. ಅಷ್ಟೊಂದು ಆಕರ್ಷಕವಾಗಿಯೂ ಇರುವುದಿಲ್ಲ.

ದಾರಿ ಹೇಗೆ?:

ಬರ್ಕಣಾ ಜಲಪಾತವು ಆಗುಂಬೆಯಿಂದ 8 ಕಿ.ಮೀ. ದೂರದಲ್ಲಿದ್ದು, ಅಲ್ಲಿಂದ ಶೃಂಗೇರಿಗೆ ಹೋಗುವ ಮಾರ್ಗದ ಕಡೆಗೆ ಬರುವಾಗ ಮಲ್ಲಂದೂರು ಗ್ರಾಮದ ಕಡೆಗೆ ಸಂಚರಿಸುವ ರಸ್ತೆ ಸಿಗುತ್ತದೆ. ಆ ಮಾರ್ಗದಲ್ಲಿ ಸುಮಾರು 3 ಕಿ.ಮೀ. ಪರ್ವತ ಹಾದಿಗಳ ಮಧ್ಯೆ, ಚಾರಣ ಮಾಡಿಕೊಂಡು ಬರ್ಕಣಾ ಜಲಪಾತವನ್ನು ತಲುಪಬಹುದು. ಈ ಜಲಪಾತವನ್ನು ತಲುಪಲು ಸುಮಾರು 5 ಕಿ.ಮೀ.ವರೆಗೆ ದಾರಿಯಿದ್ದು, ಅಲ್ಲಿಂದ ಮುಂದಕ್ಕೆ 3 ಕಿ.ಮೀ. ಕಾಲ್ನಡಿಗೆಯಿಂದಲೇ ಸಂಚರಿಸಬೇಕು. ಇನ್ನು ಉಡುಪಿಯಿಂದ 60 ಕಿ.ಮೀ., ಮಂಗಳೂರಿನಿಂದ 105 ಕಿ.ಮೀ., ಶಿವಮೊಗ್ಗದಿಂದ 100 ಕಿ.ಮೀ., ತೀರ್ಥಹಳ್ಳಿಯಿಂದ 38 ಕಿ.ಮೀ., ಬೆಂಗಳೂರಿನಿಂದ 352 ಕಿ.ಮೀ. ದೂರದಲ್ಲಿದೆ. ಟ್ರೆಕ್ಕಿಂಗ್‌ ಮಾಡುವವರಿಗೆ ಇದು ಒಳ್ಳೆಯ ಪ್ರವಾಸಿ ತಾಣ.

 

ಸಿಂಚನಾ ಎಂ.ಆರ್‌.

ಆಗುಂಬೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.