UV Fusion: ಹೃದಯ ಬಗ್ಗೆ ಇರಲಿ ಕಾಳಜಿ


Team Udayavani, Sep 4, 2023, 4:01 PM IST

16-uv-fusion

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲೇ ಹೃದ್ರೋಗ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. 2025ರ ಹೊತ್ತಿಗೆ ಭಾರತವು ಪ್ರಪಂಚದ ಹೃದ್ರೋಗಿಗಳ ರಾಜಧಾನಿಯಾಗಲಿದೆ ಎಂಬ ತಜ್ಞರ ಮಾತಿನಂತೆ ವರ್ಷದಿಂದ ವರ್ಷಕ್ಕೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಏರುತ್ತಿದೆ. ಇದಕ್ಕೆ ಇಂದಿನ ಒತ್ತಡದ ಜೀವನ, ಆಹಾರ ವ್ಯವಸ್ಥೆ, ಪರಿಸರ ಹೀಗೆ ಕಾರಣಗಳು ಹತ್ತಾರು ಇರಬಹುದು. ಇವೆಲ್ಲವುಗಳ ನಡುವೆ ನಮ್ಮ ಹೃದಯವನ್ನು ಜೋಪಾನವಾಗಿಟ್ಟುಕೊಳ್ಳುವುದು ನಮ್ಮ ಪ್ರಥಮ ಆದ್ಯತೆಯಾಗಬೇಕಿದೆ.

ಹೃದಯ ರೋಗವು ದಿನ ಬೆಳಗಾಗುವುದರೊಳಗೆ ಉಂಟಾಗುವುದಿಲ್ಲ. ಹೃದ್ರೋಗ ಇರುವವರಲ್ಲಿ ಮುಂಚಿತವಾಗಿ ಕೆಳಗಿನ ಲಕ್ಷಣಗಳು ಕಂಡು ಬರಬಹುದು.

ಹೃದಯ ಬೇನೆ: ಹೃದಯ ಬೇನೆ ಹದಯಾಘಾತದ ಮುನ್ಸೂಚನೆಯಾಗಿ ಬರುವ ಕಾಯಿಲೆ. ಸೈಕಲ್‌ ತುಳಿಯುವಿಕೆ, ಓಡುವುದು, ಬೆಟ್ಟ ಹತ್ತುವುದು ಮುಂತಾದ ಕೆಲಸಗಳನ್ನು ಮಾಡಿದಾಗ ಹೃದಯದಲ್ಲಿ ನೋವು ಶುರುವಾಗುತ್ತದೆ. ಮಾಡುತ್ತಿರುವ ಕೆಲಸವನ್ನು ನಿಲ್ಲಿಸಿ ವಿಶ್ರಾಂತಿ ತೆಗೆದುಕೊಂಡಾಗ ನೋವು ಮಾಯವಾಗುತ್ತದೆ.

ಕಾಲು ಸೆಳೆತ, ಕಾಲು ನೋವು: ಕಾಲಿನ ಮಾಂಸಖಂಡಗಳಿಗೆ ರಕ್ತದ ಸರಬರಾಜು ಕುಂಠಿತಗೊಂಡು ಕಾಲಿನ ಮಾಂಸಖಂಡಗಳಲ್ಲಿ ತೀವ್ರ ತರಹದ ನೋವು, ಸ್ನಾಯು ಸೆಳೆತ ಕಾಣಿಸಿಕೊಳ್ಳಬಹುದು.

ಮಾನಸಿಕ ಅಸ್ವಸ್ಥತೆ: ಕಿರಿದಾದ ರಕ್ತನಾಳಗಳ ಮೂಲಕ ಮಿದುಳಿನ ಅಂಗಾಂಶಗಳಿಗೆ ರಕ್ತ ಸರಬರಾಜು ಸರಿಯಾಗಿ ಆಗದ ಕಾರಣ ಮಾನಸಿಕ ಅಸ್ವಸ್ಥತೆ ಕಾಣಿಸಿಕೊಳ್ಳುವ ಸಾಧ್ಯತೆಗಳಿರುತ್ತವೆ.

ಅಪಧಮನಿಗಳು ಪೆಡಸಾದಾಗ, ಸಂಕುಚಿತಗೊಂಡು ಅವುಗಳಲ್ಲಿ ರಕ್ತದ ಒತ್ತಡ ಹೆಚ್ಚಾದಾಗ ಅವು ಒಡೆಯುವ ಸಾಧ್ಯತೆಗಳಿರುತ್ತವೆ. ಹೀಗಾದಾಗ ವ್ಯಕ್ತಿ ಒಂದೋ ಪಾರ್ಶ್ವವಾಯುವಿಗೆ ತುತ್ತಾಗಬಹುದು ಅಥವಾ ಸಾವಿಗೀಡಾಗಬಹುದು.

ಹೃದಯದ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ವಯಸ್ಕರು ಸಾಮಾನ್ಯವಾಗಿ ಬೆಳಗ್ಗಿನ ಉಪಹಾರದ ಬದಲಿಗೆ ಜ್ಯೂಸ್‌ ಅಥವಾ ಕಾಫಿ ಮಾತ್ರ ಸೇವಿಸುತ್ತಾರೆ. ಸರಿಯಾದ ಸಮಯಕ್ಕೆ ಸರಿಯಾದ ಆಹಾರ ಸೇವಿಸದಿದ್ದರೆ ಹೃದಯ ಸಂಬಂಧಿ ರೋಗಗಳು ಬರುತ್ತವೆ. ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ದೂರವಿರಿ. ಜಂಕ್‌ ಫ‌ುಡ್‌, ಕರಿದ ಪದಾರ್ಥಗಳ ಸೇವನೆ ಕಡಿಮೆ ಮಾಡಬೇಕು. ಸ್ಟ್ರಾಬೆರಿ ಮತ್ತು ಬ್ಲೂಬೇರಿ ಹಣ್ಣುಗಳು, ಟೊಮೇಟೊ, ಬೆಳ್ಳುಳ್ಳಿ, ಜೀವಸತ್ವ ಇರುವ ಧಾನ್ಯಗಳು, ಗೋಧಿ, ರಾಗಿ ಇವೆಲ್ಲವು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತ ವ್ಯಾಯಾಮ ಉತ್ತಮ. ಉಪ್ಪು, ಕೊಬ್ಬಿನಾಂಶವಿರುವ ಸಕ್ಕರೆ ಮತ್ತು ಆಹಾರಗಳನ್ನು ಮಿತವಾಗಿ ಬಳಸಬೇಕು.

ಅಧಿಕ ಒತ್ತಡಕ್ಕೊಳಗಾಗಬಾರದು. ಸಣ್ಣಪುಟ್ಟ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸದಿರಿ. ಯಾವಾಗಲೂ ಮನಸ್ಸು ಪ್ರಶಾಂತತೆಯಿಂದ ಕೂಡಿರಬೇಕು. ತರಕಾರಿಗಳು, ಮೊಳಕೆ ಕಾಳುಗಳನ್ನು ಸೇವಿಸಬೇಕು.

ಹೃದಯಾಘಾತ ಆಗುವ ಸಂದರ್ಭದಲ್ಲಿ ಎದೆಯು ಬಿಗಿಯಾದಂತೆ, ಹಿಸುಕಿದ ಅನುಭವ ಅಥವಾ ಭಾರವಾದಂತೆ ಅನುಭವವಾಗುತ್ತದೆ. ಹೃದಯಾಘಾತ ಸಂಭವಿಸುವ ಮುನ್ನ ಎಚ್ಚರಿಕೆ ಗಂಟೆಯಂತೆ ಈ ನೋವು 15 ನಿಮಿಷದಿಂದ ಒಂದು ಗಂಟೆಗಳ ಕಾಲ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷಿಸದೆ ತಕ್ಷಣ ಹೃದಯ ತಜ್ಞರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

-ರೇಣುಕಾರಾಜ್‌

ಹಾರನಹಳ್ಳಿ

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.