ಸಂಧ್ಯಾರಾಗದೊಳಗೆ ತಾಳ್ಮೆಯ ಗೆಲುವು


Team Udayavani, Sep 25, 2020, 9:38 PM IST

book talk 8

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕನ್ನಡದ ಮೇರು ಕಾದಂಬರಿಕಾರರಲ್ಲಿ ಆ.ನ. ಕೃಷ್ಣರಾಯರು ಓರ್ವರು. ಕನ್ನಡದ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಗ್ರಗಣ್ಯ.

ತಮ್ಮ ಕೃತಿ, ಕಾದಂಬರಿಗಳ ಮೂಲಕ ಪಾತ್ರಗಳಲ್ಲಿಯೇ ಬದುಕನ್ನು ಅನ್ವೇಷಿಸುವ ಇವರ ಬರೆಹದ ಶೈಲಿ ಅದ್ಭುತ. ಇದು ಓದುಗರನ್ನು ಹತ್ತಿರವಾಗಿಸುತ್ತದೆ. ಜೀವನ ಪ್ರೀತಿಯನ್ನು ಹೆಚ್ಚಿಸುತ್ತದೆ. ಈ ಸಾಲಿಗೆ “ಸಂಧ್ಯಾರಾಗ’ ಎಂಬ ಕಾದಂಬರಿ ಸೇರುತ್ತದೆ.

ಸಂಧ್ಯಾರಾಗ ಕಾದಂಬರಿಯೂ ದೀರ್ಘ‌ವಾದ ಅನುಭವ ಮತ್ತು ಜೀವನದ ಸಂಗತಿಯನ್ನು ಒಳಗೊಂಡಿದ್ದು, ಇದು ಪ್ರಭಾವಶಾಲಿಯಾಗಿ ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಕನ್ನಡ ಮೇರು ಲೇಖಕ ವಿಎಂ ಇನಾಂದಾರ್‌ ಅವರು ಕೂಡ ಈ ಕಾದಂಬರಿಯನ್ನು ಓದಿ ಮುಗಿಸಿದ ಬಳಿಕ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

ಕಾದಂಬರಿಯ ಕಥೆ ಎಳೆಯನ್ನು ನೋಡಿದರೆ, ಇದು ಕೂಡು ಕುಟುಂಬದ ಕಥೆ. ಶ್ರೀನಿವಾಸರಾಯರೆಂಬ ಗೌರವಾನ್ವಿತ ವ್ಯಕ್ತಿ , ಪತ್ನಿ ಮೀನಾಕ್ಷಮ್ಮ. ಮೀನಾಕ್ಷಮ್ಮ ಮನೆಗೆ ಭಾಗ್ಯವಂತಾಗಿದ್ದಳು. ಆದರೆ ಆಕೆಗೆ ಮಕ್ಕಳಾಗದ ಕಾರಣ ನಿರ್ಭಾಗ್ಯಳು ಎಂದು ಕೆಲವರು ಛೇಡಿಸಿದ್ದುಂಟು. ಆಗ ರಾಯರಿಗೆ ಇನ್ನೊಂದು ಮದುವೆ ಮಾಡಲು ಮುಂದಾಗಿ ದೂರದ ಸಂಬಂಧಿ ಸಾವಿತ್ರಿಯನ್ನು ರಾಯರಿಗೆ ತಂದು ಮದುವೆ ಮಾಡಿ ಸುತ್ತಾಳೆ.

ಕೆಲವು ದಿನಗಳಲ್ಲಿ ಮೀನಾಕ್ಷಮ್ಮ ಕೂಡ ಗರ್ಭ ಧರಿಸಿದಳು. ಇಬ್ಬರಿಗೂ ಗಂಡು ಮಕ್ಕಳು ಜನಿಸಿ, ರಾಮ, ಲಕ್ಷ್ಮಣ ಎಂದು ನಾಮಕರಣ ಮಾಡಿದರು.

ಒಂದು ದಿನ ತಮ್ಮ ಮನೆಯಲ್ಲಿದ್ದ ಗುಮಾಸ್ತನ ಕುಟುಂಬದ ಬಡತನವನ್ನು ಕಂಡ ರಾಯರು, ಗುಮಾಸ್ತನ ಸಂಬಂಧಿ ವೆಂಕಟೇಶ ಎಂಬ ಬಾಲಕನಿಗೆ “ನಾನು ವೆಂಕಟೇಶನಿಗೆ ವಿದ್ಯಾದಾನ ಮಾಡುತ್ತೇನೆ’ ಎಂದು ಮಾತುಕೊಟ್ಟರು. ರಾಯರು ಕೊಟ್ಟ ಮಾತಿನಂತೆಯೇ ವೆಂಕಟೇಶನನ್ನು ತಮ್ಮ ಮನೆಗೆ ಕರೆದುಕೊಂಡು ಬಂದರು.

ಹಿರಿಯ ಮಗ ರಾಮ ಎಲ್‌ಎಸ್‌ಬಿ ಪದವಿ ಪಡೆದ ಬಳಿಕ ಎಲ್ಲರೂ ಈತನನ್ನು ರಾಮಚಂದ್ರರಾಯರು ಎಂದು ಈತನನ್ನು ಕರೆಯಲಾರಂಭಿಸದರು. ಇದರಿಂದ ಈತ ಹಿಗ್ಗಿ ಜಂಭಕೊಚ್ಚಿಕೊಳ್ಳುತ್ತಿದ್ದ. ಆದರೆ ಲಕ್ಷ್ಮಣನಿಗೆ ಮಾತ್ರ ವಿದ್ಯೆ ತಲೆಗೆ ಹಚ್ಚಲಿಲ್ಲ. ಬದಲಿಗೆ ಆತನಿಗೆ ಸಂಗೀತವೇ ಉಸಿರಾಗಿತ್ತು. ಈತನಿಗೆ ಸಂಗೀತಾಭ್ಯಾಸ ಮುಂದೆ ಎಲ್ಲವೂ ಗೌಣ.

ಮುಂದೆ ಶ್ರೀನಿವಾಸರಾಯರು ಇಬ್ಬರಿಗೆ ಮದುವೆ ಮಾಡಿದರು. ವೆಂಕಟೇಶನಿಗೂ ತನ್ನ ಮಗಳನ್ನೇ ಕೊಟ್ಟು ಮದುವೆ ಮಾಡಿದರು. ರಾಮಚಂದ್ರ ರಾಯನ ಹೆಂಡತಿ ಶ್ರೀಮಂತ ಮನೆಯ ಮೂಲದವಳಾಗಿದ್ದರಿಂದ ಆತನ ಇನ್ನಷ್ಟು ಜಂಭಗೊಂಡಿದ್ದ.

ಮೀನಾಕ್ಷ್ಮಮ್ಮ ಸ್ವರ್ಗಸ್ಥರಾದರು. ಬಳಿಕ ರಾಯರು ಕೂಡ ಹಾಸಿಗೆಯಿಡಿದರು. ಆದರೆ ರಾಯರೂ ಕೂಡ ಬಹಳಷ್ಟು ದಿನ ಬದುಕಲಿಲ್ಲ. ಅವರು ಕೂಡ ಸ್ವರ್ಗಸ್ಥರಾದರು. ಬಳಿಕ ಮನೆಯ ಯಜಮಾನಿಕೆ ಹಿರಿ ಮಗ ರಾಮಚಂದ್ರರಾಯರಿಗೆ ಸೇರಿದ ಮೇಲೆ ಹೆಂಡತಿ ಜತೆಗೆ ಸೇರಿ ವೈಭೋಗದ ಜೀವನಕ್ಕೆ ಮುಂದಾದನು. ತಮ್ಮ ಲಕ್ಷ್ಮಣ, ಆತನ ಹೆಂಡತಿ ಹಾಗೂ ತಂಗಿ ಗಂಡ ವೆಂಕಟೇಶ ಇವರು ಮನೆಯಾಳುಗಳಂತೆ ದುಡಿಯಲಾರಂಭಿಸಿದರು.

ರಾಮಚಂದ್ರ ರಾಯರು ಹೈಕೋರ್ಟ್‌ ವಕೀಲರಾದ ಬಳಿಕ ಸಂಬಂಧಗಳನ್ನು ದೂರಲಾರಂಭಿಸದರು. ಹಣಕ್ಕೆ ಪ್ರಾಶಸ್ತ್ಯ ನೀಡಿದರು. ಆದರೆ ರಾಯರ ತಮ್ಮ ಲಕ್ಷ್ಮಣನ ಸಂಗೀತ ಅಭ್ಯಾಸಕ್ಕೆ ತೊಂದರೆ ಮಾಡಿ, ನೀನು ಮನೆಯಲ್ಲಿ ಸಂಗೀತಾಭ್ಯಾಸ ಮಾಡದಿರು ಆಜ್ಞೆ ಮಾಡಿ ಅವಮಾನಿಸದ. ಇದರಿಂದ ಒಂದು ದಿನ ಲಕ್ಷ್ಮಣ ಮನೆ ಬಿಟ್ಟು ಹೋದ. ಮುಂದೆ ಲಕ್ಷ್ಮಣ ತನ್ನ ಸಂಗೀತ ಶಿಕ್ಷಣಕ್ಕೆ, ಹಸಿವಿಗೆ ಊರುಗಳ ತಿರುಗಾಡಿದ ಬಳಿಕ ಅವರು ಒಬ್ಬ ಮಹಾನ್‌ ಸಂಗೀತ ದರ್ಶನವಾಗಿ ಈತನಿಗೆ ಸಂಗೀತ ಅಭ್ಯಾಸ ಹೇಳಿಕೊಟ್ಟರು. ಮುಂದೆ ದೊಡ್ಡ ಸಂಗೀತಗಾರನಾದ. ಆದರೆ ಅವರ ಅಣ್ಣ ಹಣ ಗಳಿಕೆಯ ಹಿಂದೆ ಬಿದ್ದು ಎಲ್ಲವನ್ನೂ ಕಳೆದುಕೊಂಡರು. ಆದರೆ ತಾಳ್ಮೆಯಿಂದ ಲಕ್ಷ್ಮಣ ರಾಯರು ತಮ್ಮ ಸಂಗೀತ ಕ್ಷೇತ್ರದಲ್ಲಿ ಮಹೋನ್ನತ ಸಾಧನೆ ಮಾಡಿದರು.

ಜೀವನದುದ್ದಕ್ಕೂ ಸುಖ ದುಃಖಗಳು ನಮ್ಮನ್ನು ಹಿಂಬಾಲಿಸುತ್ತವೆ, ನಾವು ನಮ್ಮವರು ನಮ್ಮ ಕುಟುಂಬ, ನಮ್ಮ ಸಮಾಜ ಎಂದು ತಿಳಿದಾಗಲೆ ನಮ್ಮತನ ಗೊತ್ತಾಗುತ್ತದೆ. ಈ ಸಂಧ್ಯಾರಾಗದಲ್ಲಿ ಅ.ನ. ಕೃಷ್ಣರಾಯರು ಸೃಷ್ಟಿಸಿದ ಲಕ್ಷ್ಮಣ ಈ ಸಾಲಿನಲ್ಲಿ ಬಂದು ನಿಲ್ಲುತ್ತಾರೆ.


ಸಿದ್ಧರಾಮೇಶ ರಾಮತ್ನಾಳ, ವಿಎಸ್‌ ಆರ್‌ ಕಾನೂನು ಕಾಲೇಜು, ಬಳ್ಳಾರಿ 

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.