ಸಂಭ್ರಮವನ್ನು ಮರೆಯಲು ಸಾಧ್ಯವಿಲ್ಲ


Team Udayavani, Aug 15, 2020, 9:20 AM IST

33

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನನ್ನ ಬಾಲ್ಯದ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯು ನನ್ನ ಅಚ್ಚುಮೆಚ್ಚಿನ ರಾಷ್ಟೀಯ ಹಬ್ಬವಾಗಿತ್ತು.

ಸ್ವಾತಂತ್ರೋತ್ಸವ ಎಂದರೆ ನನ್ನಲ್ಲಿ ಹೊಸದೊಂದು ಅನುಭವದ, ಹೊಸದೊಂದು ನೆನಪಿನ ಲೋಕ ಕಣ್ಣ ಮುಂದೆ ಬರುತ್ತದೆ.

ಸೂರ್ಯೋದಯವಾಗುವ ಮುಂಚೆಯೇ ಎದ್ದು ಸ್ನಾನ ಮಾಡಿ, ಶುಭ್ರವಾದ ಇಸ್ತ್ರೀ ಮಾಡಿದ ಬಿಳಿ ಸಮವಸ್ತ್ರ ಧರಿಸುತ್ತಿದ್ದೆ.
ನನ್ನ ತಂದೆ ದರ್ಜಿ. ಆದ್ದರಿಂದ ಸ್ವಾತಂತ್ರೋತ್ಸವಕ್ಕೆ ಹೊಸ ಬಿಳಿ ಸಮವಸ್ತ್ರ ಹೊಲಿದು ಕೊಡುತ್ತಿದ್ದರು.

ಅದನ್ನು ಧರಿಸಿ ಶಾಲೆಗೆ ಹೊರಡುತ್ತಿದ್ದೆ. ಮೊದಲು ನಮ್ಮ ಶಾಲೆಯಲ್ಲಿ ಧ್ವಜಾರೋಹಣ. ಅದು ಮುಗಿದ ಬಳಿಕ ಸಮೀಪದಲ್ಲಿದ್ದ ದೊಡ್ಡ ಮೈದಾನದಲ್ಲಿ ಧ್ವಜಾರೋಹಣ ನೆರವೇರುತಿತ್ತು. ಇಂದಿಗೂ ನಾನು ಆ ಮೈದಾನವಿರುವ ರಸ್ತೆಯಲ್ಲಿ ಹಾದು ಹೋಗುವಾಗ ಆ ದಿನಗಳು ಮರುಕಳಿಸುತ್ತವೆ. ನಮಗೆ ಖುಷಿ ಕೊಡುತ್ತಿದ್ದ ವಿಷಯವೇನೆಂದರೆ ನಾವು ಶಾಲೆಯಿಂದ ಮೈದಾನಕ್ಕೆ ಹೋಗುವ ಮಧ್ಯದಲ್ಲಿ ನಮಗೆ ರಸ್ತೆಯಲ್ಲಿ ಸಿಹಿತಿಂಡಿಯನ್ನು ನೀಡುತ್ತಿದ್ದರು. ಅದಕ್ಕಾಗಿ ನಾನು ಮತ್ತು ನನ್ನ ಗೆಳತಿಯರು ಕಾಯುತ್ತಿದ್ದುದು ಈಗಲೂ ಕಣ್ಣ ಮುಂದೆ ಬರುತ್ತದೆ.

ನಾವೆಲ್ಲರೂ ಮೈದಾನಕ್ಕೆ ತಲುಪಿದ ಬಳಿಕ ಅತಿಥಿಗಳು ಹಾಗೂ ಗಣ್ಯರು ಆಗಮಿಸುತ್ತಿದ್ದರು. ಧ್ವಜಾರೋಹಣದೊಂದಿಗೆ ಪಥ ಸಂಚಲನ ಕಾರ್ಯಕ್ರಮವನ್ನು ತುಂಬಾ ಚೆನ್ನಾಗಿ ನಡೆಸಿಕೊಡುತ್ತಿದ್ದರು. ಅದನ್ನು ನೋಡುವುದು ನಮ್ಮ ಪುಟಾಣಿ ಕಣ್ಣುಗಳಿಗೆ ಹಬ್ಬವಾಗಿತ್ತು. ಈ ಕಾರ್ಯಕ್ರಮದ ಅನಂತರ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯುತ್ತಿತ್ತು. ನಾನು ಕೂಡ ಹಲವು ಬಾರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಸ್ವಾತಂತ್ರ್ಯ ದಿನಾಚರಣೆ ಎಂದ ಕೂಡಲೇ ಆ ದಿನಗಳು ಹಾಗೆ ಕಣ್ಣ ಮುಂದೆ ಸರಿದು ಹೋಗುತ್ತದೆ. ಹೀಗೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಬಹಳ ಸುಂದರವಾದ ನೃತ್ಯ, ನಾಟಕಗಳನ್ನೆಲ್ಲ ಪ್ರದರ್ಶಿಸುತ್ತಿದ್ದರು.

ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮನೆಗೆ ಹೋಗುವಾಗ ನಾನು ನಡೆದುಕೊಂಡೇ ಹೋಗುತ್ತಿದ್ದೆ. ಏಕೆಂದರೆ ರಸ್ತೆ ಉದ್ದಕ್ಕೂ ನಮಗೆ ಸ್ವಾತಂತ್ರ್ಯ ದಿನಾಚರಣೆಯ ದಿನ ಚಾಕಲೇಟು ಹೀಗೆ ಅನೇಕ ಸಿಹಿತಿಂಡಿಗಳನ್ನು ನೀಡುತ್ತಿದ್ದರು. ಮನೆಯನ್ನು ತಲುಪುವಾಗ ನನ್ನ ಬಳಿ ಸಾಕಷ್ಟು ಚಾಕಲೇಟುಗಳು ಸಂಗ್ರಹವಾಗುತ್ತಿದ್ದವು. ನನ್ನ ಬಾಲ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯು ನನ್ನ ಅಚ್ಚುಮೆಚ್ಚಿನ ರಾಷ್ಟೀಯ ಹಬ್ಬವಾಗಲು ರಸ್ತೆ ಉದ್ದಕ್ಕೂ ನೀಡುತ್ತಿದ್ದ ಸಿಹಿತಿಂಡಿಗಳೇ ಕಾರಣವೋ ಏನೋ, ನನಗೆ ತಿಳಿದಿಲ್ಲ. ಆದರೆ ನನ್ನ ಬಾಲ್ಯದ ಸ್ವಾತಂತ್ರೋತ್ಸವದ ಸಂಭ್ರಮವನ್ನು ನಾನು ಮರೆಯಲು ಸಾಧ್ಯವೇ ಇಲ್ಲ.

ಲಾವಣ್ಯಾ, ಭಂಡಾರ್ಕಾರ್ಸ್‌ ಕಾಲೇಜು, ಕುಂದಾಪುರ

 

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-fusion

UV Fusion: ಇಂಡಿ ಪಂಪ್‌ ಮಟ..

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

12-

UV Fusion: ಮಕ್ಕಳ ಕೈಗೊಂದು ಪುಸ್ತಕ ಕೊಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.