UV Fusion: ಬದುಕಿನ ಸೂತ್ರಕ್ಕೊಂದು ಪಾತ್ರದ ಆಯ್ಕೆ


Team Udayavani, Feb 20, 2024, 10:42 AM IST

2-drama-1

ಬದುಕಿನಲ್ಲಿ ಪಾತ್ರಗಳು ಎಷ್ಟು ಮುಖ್ಯವೋ, ಆಯ್ಕೆ ಕೂಡ ಅಷ್ಟೇ ಮುಖ್ಯವಾಗುತ್ತದೆ. ಕಾರಣ ಜಗತ್ತಿನಲ್ಲಿ ಎರಡು ರೀತಿ ನಟಿಸುವವರಿದ್ದಾರೆ. ಒಂದು ಬಣ್ಣ ಹಚ್ಚಿ ನಟಿಸುವವರು, ಎರಡನೆಯದು ಬಣ್ಣ ಹಚ್ಚದೇ ನಟಿಸುವವರು. ವ್ಯತ್ಯಾಸ ಇಷ್ಟೇ, ಮೊದಲನೆಯವರು ರಂಗದ ಮೇಲೆ ನಟಿಸಿದರೆ, ಎರಡನೆಯವರು ವ್ಯಕ್ತಿಗಳ ಬದುಕಿನಲ್ಲಿ ನಟಿಸುವ ಹೀನ ಮನಸ್ಥಿತಿ ಉಳ್ಳವರು.

ಜಗತ್ತು ವಿಶಾಲವಾಗಿ, ಅಷ್ಟೇ ವೇಗವಾಗಿ ಬದಲಾಗುತ್ತಾ ಹೋಗುತ್ತಿದೆ. ವಿಚಿತ್ರವೋ ವಿಶಿಷ್ಟವೋ ವಿಚಾರಗಳು, ಯೋಚನೆಗಳು, ಆಸೆ, ಆಚರಣೆಗಳು ಹೀಗೆ ಇನ್ನೂ ಹಲವು ವಿಷಯಗಳು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತಿವೆ. ಹೀಗಿರುವಾಗ ಬದುಕಿನಲ್ಲಿ ವೇಷ ಮರೆಸಿಕೊಂಡು ಬರುವ ಅನೇಕ ಪಾತ್ರಗಳು ತಮ್ಮ ನಟನೆಯಲ್ಲಿ ನಾವೇ ಒಂದು ಕೈ ಮೇಲು ಅಂದುಕೊಂಡು ಮುಂದುವರೆಯುತ್ತದೆ. ಈ ಪಾತ್ರಗಳಿಗೆ ಸ್ನೇಹ-ಪ್ರೀತಿ, ಅಣ್ಣ-ಅಕ್ಕ, ತಂಗಿ-ತಮ್ಮ ಹೀಗೆ ನಾನಾ ಹೆಸರುಗಳಿವೆ ಎಂಬುವುದು ನಿಮಗೂ ತಿಳಿದಿರಬಹುದು.

ಹಾಗಿದ್ದರೆ ಈ ಎಲ್ಲ ಆಕಸ್ಮಿಕ ಆಗಮನದ ಪಾತ್ರಗಳು ಶಾಶ್ವತವೇ? ನಿಮ್ಮನ್ನು ನೀವು ಎಂದಾದರು ಪ್ರಶ್ನಿಸಿದ್ದೀರಾ? ಪ್ರಶ್ನಿಸಿಕೊಂಡಿದ್ದೇ ಆದಲ್ಲಿ ಎಲ್ಲವೂ ಸರಿ ಇದೆಯೇ? ಇಲ್ಲವಾದಲ್ಲಿ, ಎಡವಿದ್ದೆಲ್ಲಿ? ಅನ್ನುವ ನೂರಾರು ಪ್ರಶ್ನೆಗಳು ತಲೆತುಂಬಾ ಹರಿದಾಡಿದರೂ, ಪಾತ್ರಗಳು ಮಾತ್ರ ಹಾಯಾಗಿರುತ್ತವೆ ಬೆದರು ಬೊಂಬೆಯಂತೆ.

ಕೆಲವೊಮ್ಮೆ ನಾವೆಷ್ಟು ವಿಚಲಿತರಾಗುತ್ತೇವೆ ಎಂದರೆ ಪಾತ್ರಗಳಿಲ್ಲದೆ ಜೀವನವೇ ಮುಗಿದು ಹೋಯಿತು ಎನ್ನುವಷ್ಟು. ಅದೇಕೆ ಇನ್ನೊಬ್ಬರ ಮೇಲೆ ಅಷ್ಟೊಂದು ಅವಲಂಬನೆ ಎಂದು ತಿಳಿಯುವಷ್ಟರಲ್ಲಿ ಎಲ್ಲವೂ ಕತ್ತಲಾಗಿರುತ್ತದೆ. ಹಾಗೆಯೇ ಹೊರಬರುವಷ್ಟರಲ್ಲಿ ಎಲ್ಲರ ಕಣ್ಣಲ್ಲಿ ತಪ್ಪಿತಸ್ಥರಂತೆ ಬಿಂಬಿತರಾಗಿರುತ್ತೇವೆ.

ಬದುಕಿನಲ್ಲಿ ಪಾತ್ರಗಳು ಮುಖ್ಯ ಅನ್ನುವ ಸತ್ಯ ಇನ್ನಷ್ಟು ಕಹಿಯಾಗಿದೆ. ಪ್ರತಿಯೊಂದು ಹೆಜ್ಜೆಯಲ್ಲು ಒಂದೊಂದು ತೆರನಾದ ಪಾತ್ರಗಳು ಸುತ್ತುವರಿದು ನೆಲೆಯೂರಲು ಪ್ರಯತ್ನಿಸುತ್ತದೆ.

ಸನಿಹ ಸುಳಿಯುವ ಎಲ್ಲ ಪಾತ್ರಗಳು ಒಂದೊಳ್ಳೆ ನಿಶಾನೆ ನೀಡುತ್ತವೆ ಎಂದರೆ ತಪ್ಪು, ಹಾಗಂತ ಎಲ್ಲವೂ ತಪ್ಪು ಅನ್ನುವುದು ಕೂಡ ತಪ್ಪು. ಹಾಗಾಗಿ ಎಲ್ಲವೂ ಕೈ ಮೀರಿ ನಡೆಯುವ ಮುನ್ನ ಆಲೋಚಿಸುವುದು ಉತ್ತಮ. ಪ್ರತಿಯೊಂದು ಪಾತ್ರಗಳ ಆಯ್ಕೆ ನಮ್ಮ ಬದುಕಿಗೆ ಒಳಿತಾಗುವಂತೆ ಇರಲಿ, ಅದೇ ರೀತಿ ಆ ಪಾತ್ರಕ್ಕೂ ಒಳಿತಾಗಲಿ ಅನ್ನುವ ಹಾಗೆ ಇರಲಿ.

-ವಿಜಿತಾ ಅಮೀನ್‌

ಬಂಟ್ವಾಳ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.