UV Fusion: ಸಂಸ್ಕೃತಿ ಸಂಭ್ರಮ: ಮಾಯವಾಗುತ್ತಿದೆ ಗರತಿಯ ಹಾಡು


Team Udayavani, Jan 23, 2024, 3:20 PM IST

10-uv-fusion

ಭಾರತ ಕಲೆ, ಸಂಸ್ಕೃತಿಯ ತವರೂರು. ಅನೇಕತೆಯಲ್ಲಿ ಏಕತೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ರಾಷ್ಟ. ವಿವಿಧ ಸಂಸ್ಕೃತಿ, ಭಾಷೆ, ಧರ್ಮ, ವೇಷ-ಭೂಷಣ ಮತ್ತು ಜಾನಪದ ಶೈಲಿ, ಜೀವನ-ಕಸುಬು ಹೀಗೆ ವೈವಿಧ್ಯಮಯ ಮತ್ತು ವೈಶಿಷ್ಯಪೂರ್ಣ ಸಮೃದ್ಧ ಪವಿತ್ರ ಭೂಮಿ ನಮ್ಮದು.

ಅದರಲ್ಲಿ ವಿಶೇಷವಾಗಿ ಭವ್ಯ ಪರಂಪರೆ, ಇತಿಹಾಸ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನ ಹಿನ್ನೆಲೆಯನ್ನು ಹೊಂದಿದ ನಮ್ಮ ಕರ್ನಾಟಕದಲ್ಲಿ ಸೋಬಾನ ಪದ, ಲಾಲಿ ಹಾಡು, ಬೀಸುವ ಕಲ್ಲಿನ ಪದ, ಹಂತಿ ಪದ, ಗೀಗಿ ಪದ, ಮದುವೆ, ಸೀಮಂತ ಮತ್ತು ತೊಟ್ಟಿಲು ಕಾರ್ಯಕ್ರಮದಲ್ಲಿ ಹಾಡುವ ಅನೇಕ ಗರತಿಯ ಹಾಡುಗಳು ನಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತವೆ.

ಗರತಿಯ ಹಾಡುಗಳು ನಮ್ಮ ನಾಡಿನ ಹೆಣ್ಣು ಮಕ್ಕಳ ಹೃದಯದ ಪಡಿಗನ್ನಡಿ ಇದ್ದಂತೆ. ಅದರಲ್ಲಿ ತಾಯಿ-ಮಗಳ, ಅಣ್ಣ-ತಮ್ಮಂದಿರ ನಡುವಿನ ಮಮತೆಯ ಮಾಧುರ್ಯ, ಗಂಡ-ಹೆಡಿರ ಸರಸ-ವಿರಸ ಮತ್ತು ಪ್ರೇಮ ಸತ್ವವು ಹಾಗೂ ಹೆಣ್ಣಿನ ತ್ಯಾಗ-ಬುದ್ಧಿಯು ತುಂಬಿ ತುಳುಕುತ್ತಿರುತ್ತದೆ. ಕೌಟುಂಬಿಕ ರಸವು ಪರಿಪಾಕಗೊಂಡಿರುತ್ತದೆ. ಗರತಿಯ ಹಾಡುಗಳು ಹೆಣ್ಣಿನ ಜೀವನ ಜೀವಾಳವಾಗಿದೆ.

ಯಾವುದೋ ಕಾಲದಿಂದ ಒಬ್ಬರಿಂದೊಬ್ಬರ ಬಾಯಿಯಿಂದ ಬಾಯಿಗೆ ಪಸರುತ್ತಾ ಬಂದಿರುವ ಈ ಗರತಿಯ ಹಾಡುಗಳು ಇಂದಿನ ಪಾಶ್ಚಾತ್ಯ ಸಂಸ್ಕೃತಿ, ಸಮೂಹ ಮಾಧ್ಯಮಗಳು, ಟಿವಿ, ಮೋಬೈಲ್‌, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಾಯವಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಹೆಣ್ಣು ಸಂಸ್ಕೃತಿಯ ಪ್ರತಿಬಿಂಬ.

ಆಕೆ ಮದುವೆಯಾದ ಅನಂತರ ತವರುಮನೆ, ಗಂಡನ ಮನೆಯಲ್ಲಿ ಹೇಗೆ ಸಂಸಾರ ಮಾಡಬೇಕೆಂಬ ಬಗ್ಗೆ ಹಾಡುಗಳ ಮೂಲಕ ಕಿವಿಮಾತು ಹೇಳುತ್ತಾ, ಆಕೆಗಿರುವ ಸ್ಥಾನಮನ, ಗೌರವಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಗರತಿಯ ಹಾಡುಗಳು ಪ್ರಮುಖ ಪಾತ್ರ ವಹಿಸುತ್ತಿದ್ದವು. ಈ ಮೂಲಕ ಸ್ತ್ರೀ ಸಮಾಜದಲ್ಲಿ ಹೇಗೆ ಬಾಳಿ ಬದುಕಬೇಕೆಂಬ ಸೂಕ್ಷ್ಮವಿಷಯಗಳನ್ನು ವಿವರಿಸಿ ಸ್ತ್ರೀಗೆ ಗೌರವಯುತ ಜೀವನ-ಸಂಸಾರ ನಡೆಸಿ ಸಮಾಜದ ಕಟ್ಟಳೆಗಳನ್ನು ಮನವರಿಕೆ ಮಾಡಲಾಗುತ್ತಿತ್ತು.

ಹಾಲುಂಡ ತರೀಗಿ ಏನೆಂದ ಹಾಡಲೆ

ಹೊಳೆದಂಡೆಯಲಿರುವ ಕರಕೀಯ

ಕುಡಿಯಂಗ ಹಬ್ಬಲಿ ಅವರ ರಸಬಳ್ಳಿ

ಎಂಬ ಸಾಲುಗಳಿಂದ ತವರುಮನೆಯ ಎಲ್ಲ ಕುಟುಂಬದ ಸದಸ್ಯರು ಸಂತೋಷದಿಂದಿರಲಿ. ಅದರ ಕೀರ್ತಿಯು ವ್ಯಾಪಕವಾಗಿ ಬಳ್ಳಿಯಂತೆ ಹಬ್ಬಲೆಂದು ಒಳ್ಳೆಯ ಬಯಕೆಯನ್ನು ನಾವು ತಿಳಿದುಕೊಳ್ಳಬಹುದು.

ಅತ್ತೀಯ ಮನಿಯಾಗ ಮುತ್ತಾಗಿ ಇರಬೇಕ

ಹೊತ್ತ ನೀಡಿದರ ಉಣಬೇಕ

ತವರೂರ ಉತ್ತಮರ ಹೆಸರ ತರಬೇಕ

ಎಂಬ ಮೇಲಿನ ಸಾಲುಗಳಿಂದ ತಾಯಿಯಾದವಳು ಮದುವೆಯಾಗಿ ಗಂಡನ ಮನೆ ಸೇರುತ್ತಿರುವ ತನ್ನ ಮಗಳಿಗೆ ಗಂಡನ ಮನೆಯಲ್ಲಿ ಗುರು-ಹಿರಿಯರಿಗೆ ಗೌರವ ನೀಡುವುದು, ಅತ್ತೆ-ಮಾವ ಮತ್ತು ಮನೆಯವರೊಂದಿಗೆ ಹೇಗೆ ನಡೆದುಕೊಳ್ಳಬೇಕು. ಗಂಡನ ಮನೆಯ ಕುಟುಂಬದ ಸದಸ್ಯರೆಲ್ಲರ ಪ್ರೀತಿಗೆ ಪಾತ್ರರಾಗಿ, ತಂದೆ-ತಾಯಿ, ತವರುಮನೆಯ ಹೆಸರು ತರಬೇಕೆಂಬ ಕಿವಿಮಾತು ಹೇಳುತ್ತಿದ್ದಳು. ಹೀಗಾಗಿ ತನ್ನ ಯಾವುದೇ ತಪ್ಪುಗಳನ್ನು ಮಾಡಿದರೆ ಆಕೆ ಗರತಿಯ ಹಾಡುಗಳ ಮೂಲಕ ಬುದ್ಧಿವಾದವನ್ನು ಹೇಳುತ್ತಾ ತನ್ನ ಗಂಡನ ವ್ಯಕ್ತಿತ್ವ ಹಾಗೂ ಸತಿಯ ಅಂದ-ಚೆದವನ್ನು ವರ್ಣನೆ ಮಾಡುತ್ತಾಳೆ.

ನಮ್ಮ ಸಂಸ್ಕೃತಿಯನ್ನು ಅಭಿವ್ಯಕ್ತಿಗೊಳಿಸುವ ಗರತಿಯ ಹಾಡುಗಳು ಇಂದು ಮಾಯವಾಗುತ್ತಿರುವುದು ತೀರಾ ವಿಷಾದನೀಯ ಸಂಗತಿ. ನಮ್ಮ ಗ್ರಾಮೀಣ ಸೊಗಡು, ಜನಜೀವನ, ಜೀವನ ಶೈಲಿ, ಹಬ್ಬ-ಹರಿದಿನ, ಆಚರಣೆ, ಸಂಪ್ರದಾಯಗಳ ಬಗ್ಗೆ ಹಾಡಿನ ಮೂಲಕ ತಿಳಿಸಿಕೊಡುತ್ತಿರುವ ಗರತಿಯ ಜಾನಪದ ಹಾಡುಗಳು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಯಿಂದ ನಶಿಸಿ ಹೋಗುತ್ತಿವೆ. ಆಧುನಿಕತೆಯ ಸೋಗಿನಲ್ಲಿ ನಾವಿಂದು ನಮ್ಮ ಸಂಸ್ಕೃತಿ ಮತ್ತು ನಮ್ಮತನವನ್ನು ಮರೆತು ಬಿಡುತ್ತಿದ್ದೇವೆ. ಇದನ್ನು ನಮ್ಮ ಮುಂದಿನ ಯುವ ಜನಾಂಗಕ್ಕಾಗಿ ಉಳಿಸಿ, ಬೆಳೆಸಲು ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ.

ಮಲ್ಲಪ್ಪ ಸಿ.

ಖೊದ್ನಪೂರ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.