ಅಬ್ಬಾ ಡೇಂಜರ್‌ ಝೋನ್‌ ದಾಟಿದೆವು! ವಿನಾಶದ ಅಂಚಿನಿಂದ ಪಾರಾದ 73 ಜೀವಿಗಳ ನಿಟ್ಟುಸಿರು


Team Udayavani, Sep 20, 2020, 3:24 PM IST

Horse

ಈ ಭೂಮಿ ಮಾನವನಿಗೆ ಮಾತ್ರವಲ್ಲ ಎನ್ನುವುದನ್ನು ಮರೆತು ಸ್ವಾರ್ಥದಿಂದ ಅನೇಕ ಚಟುವಟಿಕೆ ನಡೆಸಿದ ಕಾರಣ ಇಂದು ಅದೇಷ್ಟೋ ಜೀವ ಜಾಲ ನಶಿಸಿಹೋಗಿವೆ, ಕೆಲವೊಂದಿಷ್ಟು ವಿನಾಶದ ಅಂಚಿನಲ್ಲಿವೆ.

ಈ ಎಲ್ಲದರ ನಡುವೆ ಇತ್ತೀಚೆಗೆ ಪ್ರಕಟ ವಾದ ಸಂಶೋಧನೆಯೊಂದರ ವರದಿಯಲ್ಲಿ ಶುಭ ಸುದ್ದಿಯೊಂದು ಬಂದಿದೆ. ಪ್ರಪಂಚದಾದ್ಯಂತ ವಂಶ ನಾಶ ಎದುರಿಸುತ್ತಿರುವ ಸುಮಾರು 73 ಜೀವಿಗಳು (48 ಪಕ್ಷಿ ಪ್ರಭೇದ ಮತ್ತು 25 ಸಸ್ತನಿ ಪ್ರಭೇದ) ಅಪಾಯದ ಅಂಚಿನಿಂದ ಪಾರಾಗಿವೆ. ಅದು ಹೇಗೆ ಎನ್ನುವುದರ ವಿವರ ಇಲ್ಲಿದೆ.

1993ರಿಂದ ವಿನಾಶದ ಅಂಚಿನಲ್ಲಿರುವ ಈ 73 ಜೀವಿಗಳ ಕುರಿತು ಅಧ್ಯಯನ ನಡೆಸಲಾಗುತ್ತಿದ್ದು, ಅದರಲ್ಲಿ ಈ ಧನಾತ್ಮಕ ಬೆಳವಣಿಗೆ ಕಂಡು ಬಂದಿದೆ.

ಯಾವೆಲ್ಲ ಪ್ರಭೇದ?
ಸಂರಕ್ಷಿಸಲ್ಪಟ್ಟ ಜೀವಿಗಳಲ್ಲಿ ಪ್ಯೂಟೋರಿಕಾನ್‌ ಗಿಳಿ, ಮಂಗೋಲಿಯನ್‌ ಕಾಡು ಕುದುರೆ, ಸಿಬೇರಿಯನ್‌ ಲಿಂಕ್ಸ್‌, ನ್ಯೂಜಿಲ್ಯಾಂಡ್‌ನ‌ ಪಕ್ಷಿಯಾದ ಬ್ಲ್ಯಾಕ್‌ ಸ್ಟಿಂಟ್‌, ಕ್ಯಾಲಿಫೋರ್ನಿಯಾ ಕೊಂಡಾರ್‌, ಪಿಗ್ಮಿ ಹೋಗ್‌ ಮುಂತಾದವು ಒಳಗೊಂಡಿವೆ.

ವಂಶನಾಶದ ಭೀತಿಗೆ ಕಾರಣ?
ಈ ಜೀವಿಗಳನ್ನು ವಂಶನಾಶದ ಭೀತಿಗೆ ತಳ್ಳಿದ್ದು ಮಾನವನ ವಿವೇಚನ ರಹಿತವಾದ ಚಟುವಟಿಕೆಗಳೇ ಎನ್ನುತ್ತಾರೆ ವಿಜ್ಞಾನಿಗಳು. ಅವುಗಳ ವಾಸ ಸ್ಥಾನದ ನಾಶ, ಮಿತಿ ಮೀರಿದ ಬೇಟೆ, ವಾತಾವರಣದಲ್ಲಿ ಕಂಡು ಬಂದ ವ್ಯತ್ಯಯ, ಕಾಯಿಲೆ ಮುಂತಾದವುಗಳು ಈ ಅಪೂರ್ವ ಜೀವಿಗಳನ್ನು ವಂಶನಾಶದ ಅಂಚಿಗೆ ತಳ್ಳಿದ್ದವು. 1970ರ ದಶಕದ ಅನಂತ ಜಗತ್ತಿನ ವನ್ಯ ಜೀವಿಗಳ ಸಂಖ್ಯೆಯಲ್ಲಿ ಮೂರರಲ್ಲಿ ಎರಡು ಅಂಶದವರೆಗೆ ಕಡಿಮೆಯಾಗಿತ್ತು ಎನ್ನುತ್ತದೆ ಡಬ್ಲ್ಯುಡಬ್ಲ್ಯುಎ‌ಫ್ ವರದಿ.

ವರದಿಯಲ್ಲೇನಿದೆ?
ಯುಕೆ ಮೂಲದ ನ್ಯೂಕಾಸ್ಟಲ್‌ ವಿವಿಯ ಸಂಶೋಧಕ ಡಾ| ರೈಕ್‌ ಬೋಲನ್‌ ಪ್ರತಿಕ್ರಿಯಿಸಿ, “ವರದಿಯ ಪ್ರಕಾರ ಕೆಲ ಜೀವಿಗಳು ವಂಶ ನಾಶ ಭೀತಿಯಿಂದ ನಾವಂದುಕೊಂಡದ್ದಕ್ಕಿಂತಲೂ ವೇಗವಾಗಿ ಪಾರಾಗಿವೆ ಎನ್ನುವುದು ನಿರೀಕ್ಷೆ ಹೆಚ್ಚಿಸಿದೆ. ಇನ್ನೊಂದು ಧನಾತ್ಮಕ ಅಂಶವೆಂದರೆ ವಂಶನಾಶದ ಭೀತಿ ಎದುರಿಸುತ್ತಿರುವ ಜೀವಿಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಗಣನೀಯವಾದ ಇಳಿಕೆ ಕಂಡು ಬಂದಿದೆ. ವಿನಾಶದ ಅಂಚಿನಲ್ಲಿರುವ ಜೀವಿಗಳನ್ನು ಸಂರಕ್ಷಿಸಬಹುದು ಎನ್ನುವ ಹೊಸದೊಂದು ಸಾಧ್ಯತೆಯನ್ನೂ ಇದು ತೆರೆದಿಟ್ಟಿದೆ’ ಎನ್ನುತ್ತಾರೆ. ಸುಮಾರು 137 ಸಂಶೋಧಕರ ತಂಡ ನಡೆಸಿದ ಅಧ್ಯಯನ ಆಧಾರದಲ್ಲಿ ಡಾ| ರೈಕ್‌ ಬೋಲನ್‌ ಮತ್ತು ಅವರ ಸಹೋದ್ಯೋಗಿಗಳು ಈ ನಿಗಮನಕ್ಕೆ ಬಂದಿದ್ದಾರೆ. ಪ್ರತಿ ಜೀವಿಯ ಎತ್ತರ, ತೂಕ, ವರ್ತನೆ, ಅವುಗಳು ಎದುರಿಸುತ್ತಿರುವ ಸವಾಲು ಮುಂತಾದ ಅಂಶಗಳನ್ನು ಸಂಶೋಧನೆಗಾಗಿ ಪರಿಗಣಿಸಲಾಗಿತ್ತು.

ಸಂರಕ್ಷಣಾ ವಿಧಾನ
ಆಕ್ರಮಣಕಾರಿ ಜೀವಿಗಳ ನಿಯಂತ್ರಣ, ವಾಸಸ್ಥಾನದ ಸಂರಕ್ಷಣೆ ಮುಂತಾದವುಗಳು ಪಕ್ಷಿಗಳನ್ನು ಕಾಪಾಡಿದರೆ ಹೊಸ ಕಾನೂನು ರಚನೆ, ಮೃಗಾಲಯಗಳ ನಿಯಮಗಳಲ್ಲಿ ಬದಲಾವಣೆ ಇತ್ಯಾದಿ ಕ್ರಮಗಳು ಸಸ್ತನಿಗಳನ್ನು ಸಂರಕ್ಷಿಸಿದವು. “ಇದು ನಂಬಿಕೆಯನ್ನು ಗಟ್ಟಿಗೊಳಿಸುವ ಅಂಶ. ಇದೇ ರೀತಿಯ ಕ್ರಮಗಳು ಕೈಗೊಂಡರೆ ಜೀವಜಾಲಗಳ ನಾಶವನ್ನು ತಡೆಗಟ್ಟಬಹುದು’ ಎಂದು ಸಲಹೆ ನೀಡುತ್ತಾರೆ ಹಿರಿಯ ವಿಜ್ಞಾನಿ ಫಿಲ್‌ ಮ್ಯಾಕ್‌ಗೊàವನ್‌. ಆದರೂ ಈ ಕಾಲಾವಧಿಯಲ್ಲೇ ಸುಮಾರು 15 ಪಕ್ಷಿಗಳೂ, ಸಸ್ತನಿಗಳೂ ಕಣ್ಮರೆಯಾಗಿರುವ ಸಾಧ್ಯತೆ ಇದೆ ಎಂದು ಅವರು ಸಂಶಯ ವ್ಯಕ್ತ ಪಡಿಸಿದ್ದಾರೆ. ಒಟ್ಟಿನಲ್ಲಿ ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಜೀವಜಾಲಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಈ ವರದಿ ಸಾರಿ ಹೇಳುತ್ತದೆ.

 ರಮೇಶ್‌ ಬಿ., ಕಾಸರಗೋಡು 

 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.