ಸೋಲು ಶಾಶ್ವತವಲ್ಲ  ಗೆಲುವು ಅಂತಿಮವೂ ಅಲ್ಲ


Team Udayavani, Feb 3, 2024, 3:36 PM IST

12-uv-fusion

ಜೀವನದಲ್ಲಿ ಪ್ರತೀ ಬಾರಿಯೂ ಸೋಲುವ ವ್ಯಕ್ತಿ ಗೆಲ್ಲುವ ನಿರೀಕ್ಷೆಯನ್ನು ಬಿಟ್ಟುಬಿಡುತ್ತಾನೆ. ಆದರೆ ಸೋಲು ಗೆಲುವು ಎರಡು ಸಮಾನ. ಎರಡನ್ನೂ ಸ್ವೀಕರಿಸಿ ಜೀವನ ನಡೆಸುವುದು ಬಹುಮುಖ್ಯ. ಸೋಲು ಶಾಶ್ವತವಲ್ಲ, ಗೆಲುವು ಅಂತಿಮವೂ ಅಲ್ಲ. ಮೊದಲು ನಮಗೆ ನಮ್ಮ ಮೇಲೆ ನಂಬಿಕೆ ಇರಬೇಕು.  ನಂಬಿಕೆ ಎನ್ನುವುದು ಜಯದ ಮೊದಲ ಮೆಟ್ಟಿಲು. ಮುಂದೊಂದು ದಿನ ನನ್ನ ದಿನವೂ ಬಂದೇ ಬರುತ್ತದೆ ಎಂದು ಬಲವಾದ ನಂಬಿಕೆ ಇಟ್ಟು ಜೀವನ ನಡೆಸಬೇಕು.

ನಮಗೆಲ್ಲ ತಿಳಿದ ಹಾಗೆ ದ್ರೋಣಾಚಾರ್ಯರು ಹಕ್ಕಿಯ ಕಣ್ಣಿಗೆ ಬಾಣ ಹೊಡೆಯಲು ಹೇಳಿದಾಗ ಅಲ್ಲಿ ಅನೇಕ ವೀರಾನುಪುರುಷರು ಇದ್ದರು. ಹಾಗೆ ಅರ್ಜುನನೂ ಇದ್ದ, ಆದರೆ ಅಲ್ಲಿ ಹಕ್ಕಿಯ ಕಣ್ಣನ್ನು ಭೇದಿಸಿದ್ದು ಮಾತ್ರ ಅರ್ಜುನ. ಯಾಕೆಂದರೆ ಆ ಗುರಿಯ ಸ್ಪಷ್ಟತೆ ಅವನಿಗೆ ಇತ್ತು. ಜೀವನದಲ್ಲಿ ಗುರಿ, ಗುರು ಎಲ್ಲವೂ ಅಗತ್ಯ. ಗುರುವಿನ ಮಾರ್ಗದರ್ಶನ ಅತ್ಯಂತ ಅಗತ್ಯ.

ದೇವನೂರು ಮಹದೇವರು ಹೇಳಿದ ಹಾಗೆ, ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ, ನಾಳೆ ಫ‌ಲ ಕೊಟ್ಟೇ ಕೊಡುತ್ತದೆ. ಭೂಮಿಗೆ ಬಿದ್ದ ಬೀಜ ತತ್‌ಕ್ಷಣಕ್ಕೆ ಫ‌ಲ ಕೊಡುವುದು ಅಸಾಧ್ಯ. ವಾರ, ತಿಂಗಳುಗಳೇ ಬೇಕು ಅದು ಮೊಳಕೆ ಬಂದು ಫ‌ಲ ಕೊಡಲು. ಹಾಗೆ ಮಾಡಿದ ಕೆಲಸ, ಶ್ರಮಕ್ಕೆ ಆಗಲೇ ಫ‌ಲ ದೊರೆಯಬೇಕು ಎಂದು ನಿರೀಕ್ಷಿಸುವುದು ಮೂರ್ಖತನ. ಮನಸ್ಸಿಟ್ಟು, ನಂಬಿಕೆ ಇಟ್ಟು ಮಾಡಿದ ಕೆಲಸಕ್ಕೆ ಫ‌ಲ ದೊರೆತೇ ದೊರೆಯುತ್ತದೆ. ಹಾಗೆ ಕಷ್ಟಪಟ್ಟು ಕಲಿತ ಅಕ್ಷರ ಕೂಡ ಮುಂದೊಂದು ದಿನ ನಮ್ಮ ಜೀವನವನ್ನೇ ಬೆಳಕಾಗಿಸಬಹುದು. ಯಾವತ್ತೂ ನಾವು ಹೊಸ ವಿಚಾರಗಳನ್ನು ಕಲಿಯುತ್ತಾ ಇರಬೇಕು. ಅಂತಿಮ ಎನ್ನುವುದು ಯಾವ ವಿದ್ಯೆಗೂ ಇಲ್ಲ.

ಪ್ರತಿಯೊಂದು ಕ್ಷೇತ್ರದಲ್ಲಿಯೂ ಹೊಸತನ ಇದ್ದೇ ಇರುತ್ತದೆ. ಆ ಹೊಸತನವನ್ನು ಮೈಯೆಲ್ಲಾ ಕಣ್ಣಾಗಿ ಕಂಡುಹಿಡಿಯಬೇಕು ಮತ್ತು ಅದನ್ನು ಜೀವನದಲ್ಲಿ ಅಳವಡಿಸುವುದು ನಮ್ಮ ಜವಾಬ್ದಾರಿ. ಹಾಗಿದ್ದರೆ ಮಾತ್ರ ಬದುಕಿಗೆ ಪ್ರತಿಫ‌ಲದ ನೈಜ ಬೆಲೆ ಸಿಗುವುದು.

ಜೀವನದ ಹಾದಿಯಲ್ಲಿ ಕಷ್ಟಗಳು ಎಷ್ಟೇ ಇರಬಹುದು. ಆದರೆ ಅದನ್ನು ಹರಿಯುವ ನೀರಿನಂತೆ ಬಗೆಹರಿಸಬೇಕು. ಬದುಕಿನಲ್ಲಿ ಬಡವನಾಗಿದ್ದರೂ  ಕಲಿಕೆಯಲ್ಲಿ, ಪ್ರತಿಭೆಯಲ್ಲಿ ಎಂದಿಗೂ ಶ್ರೀಮಂತನಾಗಿರಬೇಕು. ಸಾಧಿಸುವ ಧೈರ್ಯ, ಆತ್ಮವಿಶ್ವಾಸ ನಮ್ಮಲ್ಲಿದ್ದರೆ ಜಯ ಎಂದಿಗೂ ಶಾಶ್ವತ. ಹಾಗೆ ಸೂಕ್ತ ಸಮಯ ಬೇಕು ಎಂದು ಕಾಯುವುದಕ್ಕಿಂತ ನಾವೇ ಆ ಸಮಯವನ್ನು ಸೃಷ್ಟಿಸಿಕೊಳ್ಳಬೇಕು, ನಾಳೆ ಮಾಡುವೆ ಎನ್ನುವುದನ್ನು ಬಿಟ್ಟು ಇವತ್ತೇ ಮಾಡುವೆ ಎಂದು ಸಕಲ ನಿರ್ಧಾರ ನಮ್ಮದಾಗಬೇಕು.

ಬದುಕಿನಲ್ಲಿ ಕಠಿನ ನಿರ್ಧಾರಗಳನ್ನು ಸುಲಭದಲ್ಲಿ ಯೋಚಿಸಿ ಎಲ್ಲವೂ ಸಾಧ್ಯ ಎಂದು ಗಟ್ಟಿ ಮನಸ್ಸಿನೊಂದಿಗೆ ಇರಬೇಕು. ಮೊದಲು ನಮ್ಮನ್ನು ನಾವು ಹುರಿದುಂಬಿಸಬೇಕು ಮತ್ತು ಆಗೇ ಆಗುತ್ತದೆ, ಮಾಡೇ ಮಾಡುತ್ತೇನೆ ಎಂಬ ಛಲದೊಂದಿಗಿರಬೇಕು.

ಕಳೆದು ಹೋದ ಕ್ಷಣಗಳನ್ನು ಮರೆತು, ಮುಂದಿನ ದಿನಗಳನ್ನು ಯೋಚಿಸುವುದು ಬಿಟ್ಟು ಈ ದಿನ ನಾನು ಏನು ಮಾಡಬೇಕು ಎಂದು ಯೋಚಿಸುವುದು ಮುಖ್ಯ. ಪ್ರತಿಕ್ಷಣವೂ ಹೊಸತನವನ್ನು ಯೋಚಿಸುತ್ತಾ ಹೊಸ ಭರವಸೆಯೊಂದಿಗೆ ಗೆಲುವಿನ ಹಾದಿ ಹಿಡಿಯುವ. ನಮ್ಮ ಜೀವನ ನಮ್ಮ ಕೈಯಲ್ಲಿದೆ, ನಾವೇ ನಮ್ಮ ಜೀವನದ ಶಿಲ್ಪಿ, ಮಾಲಕರು ಕೂಡ.

-ಅನಿತಾ,

ಉಜಿರೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.