UV Fusion: ಅತಿಯಾಸೆಯಿಂದ ಅವಕಾಶಗಳನ್ನು ಕೈಚೆಲ್ಲದಿರಿ…


Team Udayavani, Feb 8, 2024, 12:23 PM IST

9-uv-fusion

ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಬೇಕು ಎಂಬ ಉದ್ದೇಶದಿಂದ ಅನೇಕ ಕೆಲಸ ಕಾರ್ಯಗಳನ್ನು ಹುಡುಕಾಟದಲ್ಲಿಯೇ ಸಮಯ ಕಳೆಯುತ್ತಾನೆ. ಆದರೂ ಯಾವುದೇ ಕೆಲಸವೂ ದೊರೆಯುವುದಿಲ್ಲ. ಕೊನೆಗೆ ಜೀವನದ ದಾರಿ ತಿಳಿಯಲಾರದೆ ತಾನು ನಂಬಿದ ಒಬ್ಬ ಗುರೂಜಿ ಬಳಿ ಬಂದು ತನ್ನ ಕಷ್ಟವನ್ನು ಹೇಳುತ್ತಾನೆ.

ಆತನ ಕಷ್ಟಗಳನ್ನು ಆಲಿಸಿದ ಗುರೂಜಿ ಅವನಿಗೆ ಒಂದು ಹೂವಿನ ತೋಟಕ್ಕೆ ಹೋಗಿ ಒಂದು ಸುಂದರ ಪುಷ್ಪ ಕಿತ್ತುಕೊಂಡು ಬಾ, ಆದರೆ ಒಂದು ಷರತ್ತು. ಒಂದು ಪುಷ್ಪವನ್ನು ತಿರಸ್ಕರಿಸಿ ಮುಂದೆ ಸಾಗಿದರೆ ಅದನ್ನು ಮರಳಿ ಆಯ್ಕೆ ಮಾಡಕೂಡದು ಎಂಬ ಚಟುವಟಿಕೆ ನೀಡುತ್ತಾನೆ.

ಗುರೂಜಿಯ ಮಾತಿನಂತೆ ವ್ಯಕ್ತಿ ತೋಟಕ್ಕೆ ಹೋಗುತ್ತಾನೆ. ಆಯ್ದುಕೊಳ್ಳಲು ತೋಟದ ತುಂಬಾ ಸೊಗಸಾದ ಪುಷ್ಪಗಳನ್ನು ನೋಡಿ ಹಿಗ್ಗಿದ. ಅನಂತರ ಪುಷ್ಪವನ್ನು ಆಯ್ದುಕೊಳ್ಳಲು ಹೋದಾಗ ಸ್ವಲ್ಪ ದೂರ ಸಾಗಿದಾಗ ಒಂದು ಸುಂದರ ಪುಷ್ಪದ ತುಂಬಾ ದುಂಬಿಗಳು ತುಂಬಿರುತ್ತವೆ. ಅದನ್ನು ತಿರಸ್ಕರಿಸಿ ಮುಂದೆ ಸಾಗಿದಾಗ ಮತ್ತೂಂದು ಪುಷ್ಪ ನೋಡಿದ ದಳಗಳು ಉದುರಿದ ಹಾಗೆ ಕಾಣಿಸಿತು. ಮುಂಚೆ ನೋಡಿದ ಪುಷ್ಪಕ್ಕೆ ಹೋಲಿಸಿ ಆತ ಅದನ್ನು ಸಹ ತಿರಸ್ಕರಿಸಿ ಮುಂದೆ ಸುಂದರ ಹೂವು ಸಿಗಬಹುದು ಎಂಬ ಆಸೆಯಿಂದ ಮತ್ತೆ ಮುಂದೆ ಸಾಗಿದ. ಇದೇ ರೀತಿ ಒಂದು ಹೂವಿಗೆ ಮತ್ತೂಂದು ಹೂವನ್ನು ಹೋಲಿಸಿ ನೋಡುತ್ತಾ ಕೊನೆಗೆ ತೋಟದ ಅಂಚಿನಲ್ಲಿ ಬಂದಾಗ ಪುಷ್ಪಗಳೇ ಕಡಿಮೆಯಾಗುತ್ತವೆ. ಕೊನೆಗೆ ಅನಿವಾರ್ಯವಾಗಿ ಒಂದು ಬಾಡಿ ಬತ್ತಲಾದ ಪುಷ್ಪವನ್ನು ಆಯ್ಕೆ ಮಾಡುತ್ತಾನೆ.

ಆಯ್ಕೆ ಮಾಡಿದ ಪುಷ್ಪವನ್ನು ತಂದು ಗುರೂಜಿಗಳಿಗೆ ತೋರಿಸಿದಾಗ, ಗುರುಗಳು ಯಾಕಪ್ಪಾ ನಿನಗೆ ಅಷ್ಟು ದೊಡ್ಡ ಹೂದೋಟದಲ್ಲಿ ಒಂದು ಸುಂದರ ಹೂವು ದೊರಕಲಿಲ್ಲವೇ ಎಂದು ಕೇಳಿದಾಗ ಅವನಿಗೆ ಬೇಸರ ಉಂಟಾಗುತ್ತದೆ.

ಆಗ ಗುರುಗಳು ನೀನು ಜೀವನದಲ್ಲಿ ಯಶಸ್ಸು ಕಾಣದಿರಲು, ದೊರೆತ ಅನೇಕ ಅವಕಾಶಗಳನ್ನು ಕೈಚೆಲ್ಲಿರುವುದೇ ಮೂಲ ಕಾರಣ. ಅವಕಾಶಗಳು ಜೀವನದಲ್ಲಿ ಪದೇ ಪದೇ ಬರುವುದಿಲ್ಲ, ಬಂದಾಗ ಅವುಗಳನ್ನು  ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಹೊರತು ಅತಿಯಾಸೆಯಿಂದ  ಕಡೆಗಣಿಸಬಾರದು ಎಂದು ಆತನಿಗೆ ಉಪದೇಶ ನೀಡಿದರು.

ಗುರುಗಳ ಉಪದೇಶವನ್ನು ಅರಿತುಕೊಂಡು  ತನ್ನ ಜೀವನದಲ್ಲಿ ಯಾವುದೇ ಅವಕಾಶಗಳು ದೊರೆತರೂ ಸಹ ಕಡೆಗಣಿಸದೆ ಕಾರ್ಯನಿರ್ವಹಿಸಿದ. ಕೊನೆಗೆ ತಾನು ಸಹ ಯಶಸ್ಸಿನ ಮೆಟ್ಟಿಲೇರಿದ.   ಒಟ್ಟಾರೆಯಾಗಿ ಮನುಷ್ಯನ ಜೀವನದಲ್ಲಿ ಬಂದ ಚಿಕ್ಕ ಅವಕಾಶಗಳು ಸಹ ಉನ್ನತ ಸಾಧನೆಯತ್ತ ಕೊಂಡೊಯ್ಯುತ್ತವೆ. ಪ್ರತಿಯೊಂದು ಅವಕಾಶದ ಆಯ್ಕೆಯಲ್ಲಿ ಅತಿಯಾಸೆ ಮಾಡದೇ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

-ಮಡು

ಮೂಲಿಮನಿ, ಗದಗ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.