ಪರಿಸರ ರಕ್ಷಣೆಗೆ ಪಣತೊಡಲು ಇದು ಸಕಾಲ


Team Udayavani, Jun 5, 2021, 3:15 PM IST

ಪರಿಸರ ರಕ್ಷಣೆಗೆ ಪಣತೊಡಲು ಇದು ಸಕಾಲ

ನಾವು ವಾಸಿಸುವ ಪ್ರದೇಶದ ಸುತ್ತ ಮುತ್ತಲಿನ ವಾತಾವರಣವೇ ಪರಿಸರ. ಅದು ನಮ್ಮ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆ ಹಾಗೂ ಪ್ರಸಿದ್ಧಿ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ಹಾಗಾಗಿ ಅದರ ರಕ್ಷಣೆ ನಮ್ಮ ಹೊಣೆಗಳಲ್ಲೊಂದು.

ಯಾವುದೇ ದೇಶದ ಅಭಿವೃದ್ಧಿಯಲ್ಲಿ ಅಲ್ಲಿನ ಪರಿಸರ ಮಹತ್ವದ ಪಾತ್ರ ವಹಿಸುತ್ತದೆ. ಒಂದು ದೇಶ ದೊಡ್ಡ ದೊಡ್ಡ ಕಾರ್ಖಾನೆಗಳು, ಕಟ್ಟಡಗಳು ಹಾಗೂ ರಸ್ತೆಗಳನ್ನು ಹೊಂದಿದ ಮಾತ್ರಕ್ಕೆ ಅದನ್ನು ಅಭಿವೃದ್ಧಿ ಹೊಂದಿದ ದೇಶ ಎನ್ನಲು ಸಾಧ್ಯವಿಲ್ಲ. ಜತೆಗೆ ಆರೋಗ್ಯಕರ ವಾತಾವರಣವನ್ನು ಹೊಂದಿರುವುದು ಅಷ್ಟೇ ಮುಖ್ಯವಾಗಿರುತ್ತದೆ. ಇದಕ್ಕೆ ಅಲ್ಲಿನ ಪರಿಸರ ಸಂರಕ್ಷಿಸಲ್ಪಟ್ಟು, ಸಂಪದ್ಭರಿತವಾಗಿರಬೇಕು. ಆದರೆ ಅಭಿವೃದ್ಧಿ ನೆಪದಲ್ಲಿ ಪರಿಸರದ ನಾಶಕ್ಕೆ ಮನುಷ್ಯನೇ ಕಾರಣನಾಗುತ್ತಿದ್ದಾನೆ. ಇದನ್ನರಿತು ಯುವಜನತೆ  ಎಚ್ಚೆತ್ತುಕೊಳ್ಳುವುದು ಅನಿವಾರ್ಯ.

ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅಗತ್ಯವೇನಿಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ. ನಿಸರ್ಗದ ಜತೆ ಬೆರೆತು ಬಾಳಿದರೆ ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ.

ಯುವಜನತೆ ನೈಸರ್ಗಿಕ ಪರಿಸರದ ರಕ್ಷಣೆಗೆ ಅಗತ್ಯವಾದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಇದಕ್ಕೆ ಪೂರಕ. ನೀರಿನ ಬಳಕೆ ವೇಳೆ ಮುನ್ನೆಚ್ಚರಿಕೆಗಳನ್ನು ಅಳವಡಿಸಿಕೊಂಡು ಪೋಲಾಗದಂತೆ ನೋಡಿಕೊಳ್ಳುವುದು, ನೀರಿಂಗಿಸುವಿಕೆ, ಅಳಿವಿನಂಚಿನಲ್ಲಿರುವ ಪ್ರಾಣಿ, ಪಕ್ಷಿ, ಸಸ್ಯಗಳ ರಕ್ಷಣೆ, ಇತರರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುವುದು, ತ್ಯಾಜ್ಯ ವಿಲೇವಾರಿ ವ್ಯವಸ್ಥಿತವಾಗಿ ನಡೆಸುವುದು, ನವೀಕರಿಸಬಹುದಾದ ಇಂಧನಗಳ ಬಳಕೆಗೆ ಪ್ರೋತ್ಸಾಹ ನೀಡುವುದು, ಪರಿಸರಕ್ಕೆ ಮಾರಕವಾದ ರಾಸಾಯನಿಕಗಳ ಬಳಕೆ ವಿರುದ್ಧ ಜಾಗೃತಿ, ಪ್ಲಾಸ್ಟಿಕ್‌ನಂತಹ ಮಣ್ಣಿನಲ್ಲಿ ಕರಗದ ವಸ್ತುಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸುವುದು ಇತ್ಯಾದಿ ಚಟುವಟಿಕೆಗಳಲ್ಲಿ ಯುವಜನರಾದ ನಾವು ಸ್ವಯಂ ಸ್ಫೂರ್ತಿಯಿಂದ ತೊಡಗಿಸಿಕೊಂಡು ಮಾದರಿಯಾಗಬೇಕಿದೆ. ಅಭಿವೃದ್ಧಿಯೇ ಮೂಲವಂತ್ರವಾಗಿರುವ ಇಂದು ಅದಕ್ಕೆ ಪೂರಕವಾಗಿ ಆಧುನಿಕ ತಂತ್ರಜ್ಞಾನಗಳ ಬಳಕೆ ಸಂದರ್ಭ ಪರಿಸರ ರಕ್ಷಣೆಗೆ ಹೊಂದಿಕೊಳ್ಳುವಂತೆ ನೋಡಿಕೊಳ್ಳುವುದು ಯುವಜನತೆಯ ಕರ್ತವ್ಯವಾಗಿರಬೇಕು.

ಸುಂದರ ಲಾಲ್‌ ಬಹುಗುಣ, ಸಾಲುಮರದ ತಿಮ್ಮಕ್ಕ, ಶಿವರಾಮ ಕಾರಂತ ಹೀಗೆ ಹಲವಾರು ಮಂದಿ ಸ್ವತ್ಛ ಪರಿಸರಕ್ಕಾಗಿ ಜೀವಮಾನವನ್ನೇ ಮೀಸಲಿಟ್ಟಿದ್ದರು. ಅದಕ್ಕಾಗಿ ಅವರು ಬೇರೆ ಬೆರೆ ಚಳವಳಿ ನಡೆಸಿ ಪರಿಸರ ಎಂದರೆ ಏನು? ಅದರ ರಕ್ಷಣೆ ಏಕೆ ಎಂದು ತೋರಿಸಿದ್ದಾರೆ. ಇದು ಭಾರತದಲ್ಲಿ ವ್ಯಕ್ತಿಗತ ನಡೆಗಳಾದರೆ ಇದಕ್ಕೆ ಹೊರತಾಗಿ ಪರಿಸರ ರಕ್ಷಣೆ, ಜಾಗೃತಿಗಾಗಿ ದೇಶದಲ್ಲಿ ಎನ್ವಿರಾನ್‌ಮೆಂಟ್‌ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಸಹಿತ ಹಲವಾರು ಸಂಸ್ಥೆಗಳು, ಎನ್‌ಜಿಒಗಳು ಕಾರ್ಯಾಚರಿಸುತ್ತಿವೆ. ಇವೆಲ್ಲವುಗಳ ಪರಿಸರ ಕಾಳಜಿ ಯುವ ಜನರಿಗೆ ಪ್ರೇರಣೆಯಾಗಿ ಆ ದಾರಿಯಲ್ಲಿ ನಡೆದರೆ ಉತ್ತಮ ಪರಿಸರ ನಿರ್ಮಾಣ ಆಗುವುದು ನಿಸ್ಸಂಶಯ.

ಎಲ್ಲ ಜೀವರಾಶಿಗಳ ಅಳಿವು ಉಳಿವಿನ ಮೇಲೆ ನೇರ ಪರಿಣಾಮ ಬೀರುವ ಪರಿಸರ ಹಾಗೂ ಪ್ರಕೃತಿಯನ್ನು ಉಳಿಸಿ, ಬೆಳೆಸಿ ಜತನದಿಂದ ಕಾಪಾಡುವ ಹೊಣೆ ಕೇವಲ ಓರ್ವ ವ್ಯಕ್ತಿ, ಸಮಾಜ, ಸಮುದಾಯ, ಪಕ್ಷಕ್ಕೆ ಸೀಮಿತವಾಗದೆ ಸಮಸ್ತ ವಲಯದ ಜವಾಬ್ದಾರಿಯಾಗಿದೆ. ಅಂಥ ಜವಾಬ್ದಾರಿಯೊಂದಿಗೆ ಮುಂದಡಿಯಿಡಲು  ಪಣತೊಡಲು ಪರಿಸರ ದಿನವಾದ ಇಂದೇ ಸಕಾಲ.

-ಸಂ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.