ಪರಿಸರಕ್ಕೆ ಬೇಕು ಪರಿವಾರದ ರಕ್ಷಣೆ


Team Udayavani, Jun 5, 2020, 12:53 PM IST

ಪರಿಸರಕ್ಕೆ ಬೇಕು ಪರಿವಾರದ ರಕ್ಷಣೆ

ಸಾಂದರ್ಭಿಕ ಚಿತ್ರ

ಮಾನವನ ಹುಟ್ಟು ಮತ್ತು ಸಾವು ಸ್ವಾಭಾವಿಕವಾದದ್ದು. ಈ ಅಂತರದಲ್ಲಿ ಪರಿಸರದೊಂದಿಗೆ ಹೊಂದಿಕೊಳ್ಳದೆ ಬದುಕು ನಿರ್ವಹಣೆ ಅಸಾಧ್ಯ. ಭೂಮಿಯ ಮೇಲಿನ ಪ್ರತಿಯೊಂದು ಜೀವ ಸಂಕುಲಕ್ಕೆ ಪರಿಸರವನ್ನು ಸ್ವತಂತ್ರವಾಗಿ ಉಪಯೋಗಿಸಿಕೊಳ್ಳಲು ಅವಕಾಶವಿದೆ. ಪರಿಸರವು ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗ. ಇದನ್ನು ಕಾಪಾಡಿಕೊಳ್ಳುವಲ್ಲಿ ಎಷ್ಟು ಕಾರ್ಯಪ್ರವೃತ್ತರಾಗಿದ್ದೇವೆ ಎಂಬುದು ಮುಖ್ಯವಲ್ಲ. ನಮ್ಮದೊಂದು ಸಣ್ಣ ಕಾರ್ಯ ಪರಿಸರ ನಾಶವನ್ನು ತಡೆ ಯು ತ್ತದೆ. ಈ ಕಾರ್ಯ ಕೇವಲ “ವಿಶ್ವ ಪರಿಸರ ದಿನ’ಕ್ಕೆ ಮಾತ್ರ ಸೀಮಿತವಾಗಿರದೆ ನಮ್ಮ ಬದುಕಿನುದ್ದಕ್ಕೂ ಮೈಗೂಡಿಸಿಕೊಳ್ಳಬೇಕಿದೆ. ನಮಗೆ ಆಹಾರಕ್ಕಿಂತ ಗಾಳಿ, ನೀರು ತುಂಬಾ ಮುಖ್ಯ. ಭೂಮಿಯ ಮೇಲಿರುವ ಪ್ರತಿಯೊಬ್ಬರೂ ಪ್ರಾಣಿ, ಪಕ್ಷಿ, ಗಿಡ, ಮರ..ಇವು ಯಾವುವೂ ನೀರಿಲ್ಲದೆ ಬದುಕಲು ಸಾಧ್ಯವೇ ಇಲ್ಲ.

ನಿಸರ್ಗದ ಅತ್ಯಮೂಲ್ಯ ಕೊಡುಗೆ ಅರಣ್ಯ. ಮಾನವ, ಪ್ರಾಣಿ ಮತ್ತು ಪಕ್ಷಿಗಳ ಅಳಿವು-ಉಳಿವು ಇದರ ಮೇಲೆ ಅವಲಂಬಿತವಾಗಿದೆ. ಅರಣ್ಯ ನಾಶದಿಂದಾಗಿ ಮಾನವ ಕುಲಕ್ಕೆ ವಿಪತ್ತು ಬರುವುದರಲ್ಲಿ ಯಾವ ಸಂದೇಹವೂ ಇಲ್ಲ. ಮಾನವನ ಹಸ್ತಕ್ಷೇಪದಿಂದಾಗಿ ಇಂದು ಅರಣ್ಯ ನಾಶವಾಗುತ್ತಿದೆ. ವಿಶ್ವಾದ್ಯಂತ ಪ್ರತೀ ವರ್ಷವೂ ಕೂಡ ಪ್ರಾಣಿ ಪಕ್ಷಿಗಳು ಕಣ್ಮರೆಯಾಗುತ್ತಿವೆ. ಕಳೆದ ವರ್ಷ ಅರಣ್ಯ ನಾಶಕ್ಕೆ ತುತ್ತಾದ ಅಮೆಜಾನ್‌ ಕಾಡು ಇದಕ್ಕೆ ಮತ್ತೂಂದು ಉದಾಹರಣೆಯಾಗಿದೆ. ವಿಶ್ವದ ಅತೀ ಹೆಚ್ಚು ಮಳೆ ಸುರಿಯುವ ಕಾಡು, ವಿಶ್ವದ ಶ್ವಾಸಕೋಶ ಎಂಬೆಲ್ಲ ಖ್ಯಾತಿ ಪಡೆದಿರುವ ಅಮೆಜಾನ್‌ ಬೆಂಕಿಯ ಕೆನ್ನಾಲಿಗೆಗೆ ಗುರಿಯಾಗಿತ್ತು. ಇದು ಇನ್ನೂ ಮುಂದುವರಿದ ರೆ ಇಡೀ ವಿಶ್ವವೇ ನಾಶವಾಗುವ ಸ್ಥಿತಿ ಬರುತ್ತದೆ.

ಪರಿಸರ ಸಂರಕ್ಷಣೆಗೆ ಮತ್ತೂಂದು ತೊಡಕಾಗಿರುವುದು ಪ್ಲಾಸ್ಟಿಕ್‌ ಬಳಕೆ. ಪ್ಲಾಸ್ಟಿಕ್‌ ಬಳಕೆಗೆ ನಿಷೇಧ ಹೇರಿದರೂ ನಾವು ಇಂದಿಗೂ ಅದನ್ನೇ ಅವಲಂಬಿಸಿದ್ದೇವೆ. ನಮ್ಮನ್ನು ಕಾಪಾಡುವ ಪರಿಸರವು ನಮ್ಮಿಂದಲೇ ಹಾಳಾಗುತ್ತಿದೆ ಎಂದರೆ ಮನುಕುಲ ಬದುಕಿದ್ದೂ ಸತ್ತ ಹಾಗೆ. ಆದ್ದರಿಂದ ನಮ್ಮ ಸುತ್ತಲಿನ ವಾತಾವರಣವನ್ನು ಕಾಪಾಡುವುದು, ಅದನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ.

– ಪೂರ್ಣಿಮಾ ಹಿರೇಮಠ,
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.