ಈ ಪರಿಸರ ಗೀತೆ ಇಂದಿಗೂ ಪ್ರಸ್ತುತ…


Team Udayavani, Jul 21, 2021, 9:15 AM IST

ಈ ಪರಿಸರ ಗೀತೆ ಇಂದಿಗೂ ಪ್ರಸ್ತುತ…

ರಿಮಿಕ್ಸ್‌ ಸಾಂಗ್ಸ್‌, ಫ್ಯೂಷನ್‌ ಸಾಂಗ್ಸ್‌ ಇವುಗಳ ಮಧ್ಯೆ ಮರೆಯಾಗುತ್ತಿರುವುದು ಸಾಹಿತ್ಯ ಬದ್ಧವಾದ, ಅರ್ಥಗರ್ಭಿತ, ಸುಮಧುರ ಗೀತೆಗಳ ಸಾಲಿನಲ್ಲಿ ಪ್ರಕೃತಿ ಗೀತೆ ಸಹ ಒಂದು. ಶಾಲೆಯ ಪಠ್ಯಪುಸ್ತಕಗಳಲ್ಲಿ ಕೆಲವು ಪ್ರಕೃತಿ ಗೀತೆಗಳನ್ನು ಓದಿರುತ್ತೇವೆ. ನೀವು ದೂರದರ್ಶನವನ್ನು ಸುಮಾರು 90ರ ದಶಕದಲ್ಲಿ ವೀಕ್ಷಿಸಿದ್ದರೆ ಪ್ರಕೃತಿ ಗೀತೆಗಳನ್ನು ಬಹಳಷ್ಟು ಕೇಳಿರುತ್ತಿರಿ. ಎಷ್ಟರ ಮಟ್ಟಿಗೆ ಎಂದರೆ ಆ ಹಾಡುಗಳ ಸಾಹಿತ್ಯ ಬಾಯಿಪಾಠ ಆಗುವ ಅಷ್ಟು. ಉದಾಹರಣೆಗೆ ಗಿಡ ನೆಡಿ, ಗಿಡ ನೆಡಿ, ಗಿಡ ನೆಡಿ ಎಂಬ ಹಾಡು, ನಾ ಹಡೆದವ್ವ, ಹೆಸರು ಪ್ರಕೃತಿ ಮಾತೆ ಎಂಬ ಹಾಡಿರಬಹುದು. ಎಲ್ಲವೂ ಕೇಳುತ್ತಿದಂತೆ ಪ್ರಕೃತಿಯ ಹತ್ತಿರ ಕರೆದೊಯ್ಯುತ್ತಿದೆ ಎಂದೆನಿಸುತ್ತದೆ.

ಇಂದು ನಾನು ಹೇಳ ಹೊರಟಿರುವ ಗೀತೆ ಯಾವು ದೆಂದರೆ ನಾಗತಿಹಳ್ಳಿ ಚಂದ್ರಶೇಖರ್‌ಅವರ ಸಾಹಿತ್ಯ, ವಿಜಯ ಭಾಸ್ಕರ್‌ ಅವರ ಸಂಗೀತ ಸಂಯೋಜನೆಗೆ ಬಿ. ಆರ್‌. ಛಾಯಾ ಅವರ ಸುಶ್ರಾವ್ಯ ಧ್ವನಿಯಲ್ಲಿರುವ ಹಾಡು “ಹೃದಯಾಂತರಾಳದಲಿ ಅಡಗಿರುವ ನೋವುಗಳು ನೂರೆಂಟು ನನ್ನ ನಲ್ಲ, ಬರಿಯ ನೋವುಗಳಲ್ಲ, ಭಯದ ಆತಂಕಗಳು ಕಾಡುತಿವೆ ವಿಶ್ವವೆಲ್ಲ’ ಈ ಹಾಡಿಗೆ ಕುಂಚದ ಕಲೆ ಕೊಟ್ಟಿರುವವರು ಬಿ. ಕೆ.ಎಸ್‌. ವರ್ಮಾ ಅವರು. ಈ ಹಾಡಿನ ಸಾಹಿತ್ಯದ ವಿಶೇಷ ಎಂದರೆ ಹಾಡಿನುದ್ದಕ್ಕೂ ಅರಣ್ಯದಲ್ಲಿ ಅಕ್ಕ-ಪಕ್ಕ ಬೆಳೆದು ನಿಂತಿರುವ ಬೃಹತ್‌ ಮರಗಳನ್ನು ನಲ್ಲ ನಲ್ಲೆ ಎಂದು ಪ್ರತಿಬಿಂಬಿಸಿ, ಆ ಎರಡು ಮರಗಳು ತಮ್ಮ ನೋವನ್ನು ಒಬ್ಬರಿಗೊಬ್ಬರು ಹೇಳಿಕೊಳ್ಳುತ್ತಾ ಹೋಗುವ ರೀತಿಯನ್ನು ಕವಿಗಳು ತಮ್ಮ ಕವಿತೆಯ ಸಾಲುಗಳಲ್ಲಿ ಸುಂದರವಾಗಿ ವರ್ಣಿಸಿದ್ದಾರೆ.

ನೀಲಿ ಗಗನದ ತುಂಬಾ ನೀಲಿಯೇ ಏಕಿಲ್ಲ

ಯಾಕಿಂಥ ಮಲಿನ ಮುಸುಕು

ನಿರ್ಜೀವ ಯಂತ್ರಗಳು ಕಪ್ಪಾದ ಹೊಗೆಚೆಲ್ಲಿ

ನೀಲಿ ಮಾಸಿತು ನನ್ನ ನಲ್ಲೆ ——

ನೀಲಾಕಾಶದಲ್ಲಿ ನೀಲಿಯೇ ಇಲ್ಲದೆ, ಮಲಿನದ ಮುಸುಕೇಕೆ? ಎಂದಾಗ ಕಾರ್ಖಾನೆಗಳಿಂದ ಬರುವ ಕಪ್ಪಾದ ಮಲಿನ ನೀಲಿಯ ಬಾನನ್ನು ಮಾಸಿದಂತೆ ಮಾಡಿದೆ ಎಂಬ ಉತ್ತರ ಎಷ್ಟು ಸೊಗಸಾಗಿದೆ. ಆಗ ಕವಿಗೆ ಈಗಿನ ವಾಹನಗಳಿಂದ ಹೊರಬರುವ ಮಲಿನದ ಮುನ್ಸೂಚನೆ ಇಲ್ಲದಿರಬಹುದು.

ವಾಯುಮಂಡಲದಲ್ಲಿ ಆಮ್ಲಜನಕವು ಎಲ್ಲಿ?

ಜೀವ ಕುಲಕೆ ಯಾಕೆ ಬವಣೆ

ಸಸ್ಯಶ್ಯಾಮಲೆಯನ್ನು ಕೊಚ್ಚಿಕೊಂದರು ನಲ್ಲೆ

ಎಲ್ಲಿ ಬಂದಿತು ಸ್ವತ್ಛ ಗಾಳಿ ——

ಈ ಚರಣ ಭಾಗವಂತೂ ಈಗಿರುವ ಪರಿಸ್ಥಿತಿಗೆ ಹೇಳಿ ಬರೆಸಿರುವ ಹಾಗಿದೆ. ನಲ್ಲೆಯ ಪ್ರಶ್ನೆ “ಜೀವಕುಲಕ್ಕೆ ಆಮ್ಲಜನಕವಿಲ್ಲದೆ ಯಾಕೆ ಈ ರೀತಿಯಾದ ಕಷ್ಟ?’ ಎನ್ನುವುದಕ್ಕೆ ನಲ್ಲನ ಉತ್ತರ, ಗಿಡಮರಗಳನ್ನು ಕಡಿದುದೇ ಈ ಸಮಸ್ಯೆಗೆ ಮೂಲ ಕಾರಣವಾಯ್ತು. ಎಲ್ಲಿ ಬಂದೀತು ಸ್ವತ್ಛ ಗಾಳಿ? ಎಂದು.

ಆನೆ ಸಿಂಹಗಳೆಲ್ಲ ಎಲ್ಲಿ ಹೋದವು ನಲ್ಲ

ಯಾಕೆ ಕೋಗಿಲೆಗೆ ಮೂಕ ನೋವು

ನೆಟ್ಟ ಕಾಡುಗಳೆಲ್ಲಾ ಕೆಟ್ಟ ಕೈಗಳ ಬಲೆಗೆ

ಚಿವುಟಿ ಹೋಯಿತು ನನ್ನ ನಲ್ಲೆ ——

ಅರಣ್ಯಗಳಲ್ಲಿ ನಶಿಸಿ ಹೋಗುತ್ತಿರುವ ವನ್ಯಜೀವಿಗಳನ್ನು ಕುರಿತು ಕೇಳುತ್ತಾ ಕೋಗಿಲೆಯ ಕೂಗು ಸಹ ಮೂಕವಾಗುತ್ತಿದೆಯಲ್ಲ ಎಂದಾಗ ಕಾಡುಗಳು ಕ್ರೂರರ ಕೈಗೆ ಸಿಲುಕಿ ನಾಶವಾಗುತ್ತಾ ಹೋದಂತೆಲ್ಲ ವನ್ಯ ಮೃಗಗಳಿಗೂ ಆಸರೆ ಸಿಗದೆ ಅಳಿವಿನಂಚಿಗೆ ಬರುತ್ತಿದೆ ಎಂಬುದಾಗಿದೆ.

ಶ್ರೀಲಕ್ಷ್ಮೀ

ಬೆಂಗಳೂರು

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.