ರೈತರ ಪರಿಶ್ರಮ ಅರಿಯಬೇಕಿದೆ


Team Udayavani, Aug 31, 2020, 12:45 PM IST

Agri

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದ ಬೆನ್ನೆಲುಬು ರೈತ. ಆತನ ಬೆವರು ಹನಿಯೂ ಶ್ರಮದ ಅನ್ವರ್ಥಕ.

ಜೀವನದಲ್ಲಿ ಕಷ್ಟಪಟ್ಟು ಬಿಸಿಲು, ಮಳೆ ಎನ್ನದೇ ಮೈ ಬಗ್ಗಿಸಿ ದುಡಿದು ಬೆಳೆ ಬೆಳೆಯುತ್ತಾನೆ.

ಫ‌ಸಲು ಬೆಳೆದು ಮಾರಾಟ ಮಾಡುತ್ತಾನೆ. ಲಾಭಕ್ಕಿಂತ ಹೆಚ್ಚು ಆತನ ಫ‌ಸಲಿನಿಂದ ನಾವೆಲ್ಲರೂ ಮೂರು ಹೊತ್ತು ಊಟ ಮಾಡುತ್ತೇವೆ.

ಆದರೆ ಆತನ ಜೀವನದ ಬಗ್ಗೆ ನಾವೇನೂ ಚಿಂತಿಸುವುದಿಲ್ಲ ಎಂಬುದು ಲೋಕರೂಢಿ.

ದೇಶದಲ್ಲಿ ಕೃಷಿಕರು ಇಲ್ಲದಿದ್ದರೇ ದೇಶವೇ ಉಪವಾಸದಿಂದ ಮಲಗಬೇಕಾಗುತ್ತದೆ ಎಂಬುದು ಗಾದೆಯಷ್ಟೇ ರೂಢಿಯಾಗಿದೆ.

ಆದರೆ ಆತನದು ಬೆಂಕಿಯಲ್ಲಿ ಬೆಂದ ಜೀವನ. ಇಡೀ ದಿನದ ಸಮಯ, ದೇಹ, ಮನಸ್ಸೆಲ್ಲ ಆತ ತನ್ನ ಫ‌ಸಲಿಗಾಗಿ ಇಡುತ್ತಾನೆ. ಇದರಲ್ಲಿ ತನ್ನ ಒಪ್ಪೊತ್ತಿನ ಊಟವನ್ನು ಕೂಡ ಮರೆತು ಬಿಡುತ್ತಾನೆ. ರಾಜಕಾರಣಿಗಳ ಭಾಷಣದಲ್ಲಿ ಬಂದೊಗುವ ರೈತನು ದೇಶದ ಬೆನ್ನೆಲುಬು ಎಂಬ ಮಾತು ಬಿಟ್ಟರೇ ಆತನ ಕಷ್ಟ, ಸುಖಕ್ಕೆ ನೆರವಾಗುವುದು ತುಂಬಾ ಕಡಿಮೆ. ಈ ನಡುವೆ ನಾವು ರೈತ ಮತ್ತು ಕೃಷಿ ಕ್ಷೇತ್ರದ ಬಗ್ಗೆ ಧನಾತ್ಮಕ ಚಿಂತನೆ ಮಾಡುವುದು ಅಗತ್ಯವಿದೆ.

ಉದ್ಯೋಗಕ್ಕಾಗಿ ಎಷ್ಟೋ ಜನರು ಊರು ತೊರೆದು ನಗರಕ್ಕೆ ಹೋದರೆ, ರೈತ ಮಾತ್ರ ತನಗೆ ಏನೇ ಕಷ್ಟ ಬಂದರೂ ಎದೆಗುಂದದೆ ಕೃಷಿ ಕಾಯಕದಲ್ಲಿ ಮುಂದಾಗುತ್ತಾನೆ. ಆದರೆ ದಿಢೀರನೆ ಅಪ್ಪಳಿಸಿದ ಕೊರೊನಾದಿಂದಾಗಿ ಆತನ ಬದುಕು ನಿಂತ ನೀರಾಗಿದೆ. ಜಮೀನಿನಲ್ಲಿ ಕಟಾವಿಗೆ ಬಂದ ಬೆಳೆಗೆ ಸರಿಯಾದ ಬೆಲೆ ಇಲ್ಲದೆ ಮಾರುಕಟ್ಟೆಯ ಸಮಸ್ಯೆ ಉಂಟಾಗುತ್ತದೆ. ಹೀಗೆ ರೈತನ ಬದುಕಿನ ಉದ್ದಕ್ಕೂ ಸೋಲಿನ ಸರಮಾಲೆಗಳು. ಈಗಲೂ ಅದೇ ಪರಿಸ್ಥಿತಿ ಎಲ್ಲಿಗೆ ಹೋಗಬೇಕು ಈ ರೈತ. ಸರಕಾರಗಳು ರೈತರ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ ಕೆಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಆದರೆ ಅವುಗಳ ಲಾಭ ರೈತರಿಗೆ ಎಷ್ಟರ ಮಟ್ಟಿಗೆ ತಲುಪುತ್ತಿದೆ ಎಂಬುದು ಮಾತ್ರ ಪ್ರಶ್ನೆಯಾಗಿ ಉಳಿದಿದೆ. ರೈತರ ಆತ್ಮಹತ್ಯೆ ಹೆಚ್ಚುತ್ತಲೇ ಇವೆ.

ಕೊರೊನಾ ಬಂತು ಎಂದು ನಗರಗಳನ್ನು ತೊರೆದು ಹಳ್ಳಿಗಳಿಗೆ ಮರಳಿದ ಘಟನೆಗಳು ಸಾಕಷ್ಟಿವೆ. ಅದೇ ರೀತಿ ರೈತನೂ ಜೀವನ ನಡೆಸುವುದು ಕಷ್ಟ ಎಂದು ಬೇಸಾಯ ಮಾಡುವುದನ್ನು ಬಿಟ್ಟು ಬೇರೆ ವೃತ್ತಿಗೆ ತಿರುಗಿದ್ದರೆ ನಮ್ಮೆಲ್ಲರ ಗತಿ ಏನಾಗುತ್ತಿತ್ತು ಎಂದು ಯೋಚನೆ ಮಾಡಬೇಕು. ರೈತ ಬೆಳೆದ ಆಹಾರ ಧಾನ್ಯಗಳು ಕಡಿಮೆ ಬೆಲೆಯಲ್ಲಿ ದೊರೆಯಬೇಕು. ಆದರೆ ರೈತನ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಬಾರದೇ? ಕೇವಲ ಸೆಲೆಬ್ರಿಟಿಗಳು ಮಾತ್ರ ಹೀರೋಗಳಲ್ಲ. ರೈತರು ನಿಜವಾದ ಹೀರೋಗಳು. ರೈತರಿಗೆ ಸರಿಯಾದ ಗೌರವವನ್ನು ನೀಡುವುದು ಪ್ರತಿಯೊಬ್ಬನ ಕರ್ತವ್ಯ.

 ರಂಜನ್‌ ಪಿ.ಎಸ್‌., ಸಂತ ಫಿಲೋಮಿನಾ  ಕಾಲೇಜು, ಮೈಸೂರು 

 

 

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.