ಸ್ವಾತಂತ್ರ್ಯ ದಿನ ಪ್ರಜಾಪ್ರಭುತ್ವದ ಸುದಿನ; ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯೋಣ


Team Udayavani, Aug 16, 2020, 5:25 PM IST

voting

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತ ದೇಶ ಮತ್ತು ಭಾರತೀಯರನ್ನು ಬ್ರಿಟಿಷರ ಆಳ್ವಿಕೆ ದಾಸ್ಯ ಸಂಕೋಲೆಯಿಂದ ವಿಮುಕ್ತಿಗೊಳಿಸಲು ನಿರಂತರ ಚಳವಳಿ, ಸತ್ಯಾಗ್ರಹ ನಡೆಸಿದ ಚಾರಿತ್ರಿಕ ಘಟನೆಯೇ ಸ್ವಾತಂತ್ರ್ಯ ಹೋರಾಟ.

ಭಾರತ್‌ ಮಾತಾಕಿ ಜೈ ಎಂಬ ಸ್ವಾಭಿಮಾನದ ಘೋಷ ವಾಕ್ಯ ದೇಶದ ತುಂಬಾ ಮೊಳಗಿತ್ತು.

ದಣಿವರಿಯದೆ ಹೋರಾಟಕ್ಕೆ ಇಳಿದ ಕೆಚ್ಚೆದೆಯಿಂದ ಪ್ರಾಣ ಸಮರ್ಪಿಸಿದ ರಾಷ್ಟ್ರ ನಾಯಕರ ಸ್ವಾಭಿಮಾನದ ಹೋರಾಟವಾಗಿತ್ತು ಸ್ವಾತಂತ್ರ್ಯ ಸಂಗ್ರಾಮ.

ದೇಶಕ್ಕಾಗಿ ಹೋರಾಡಿ ಮಡಿದ ಭಾರತಾಂಬೆಯ ವೀರ ಪುತ್ರರನ್ನು ಸ್ಮರಿಸಿ ಹೆಮ್ಮೆಯಿಂದ ಪ್ರಜೆಗಳು ಗೌರವ ಸಲ್ಲಿಬೇಕು.

ಸ್ವಾತಂತ್ರ್ಯದ ವಿಜಯವನ್ನು ಸಂಭ್ರಮಿಸುವ ಉದ್ಗಾರದ ಕೂಗು ಎಲ್ಲೆಡೆ ಪಸರಬೇಕು.

ಬ್ರಿಟಿಷರ ದುರಾಡಳಿತವನ್ನು ತೊಲಗಿಸಿ ದೇಶಕ್ಕೆ ಸ್ವಾತಂತ್ರ್ಯ ಬಂದು ಇಂದಿಗೆ ಬರೋಬ್ಬರಿ 73 ವರ್ಷಗಳು ತುಂಬಿವೆ. ಇಂದು 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿ 1947ರ ಹೋರಾಟದ ಕ್ಷಣಗಳನ್ನು ಮೆಲುಕು ಹಾಕುವುದು ಅತ್ಯಂತ ಪ್ರಸ್ತುತ. ಆ ವಿಜಯೋತ್ಸವದ ಸಂಭ್ರಮದಲ್ಲಿ ಇಡೀ ನಾಡು ಮುಂದಡಿಯಿಟ್ಟಿದೆ.

ಪ್ಲಾಸೀ ಕದನದ ನೂರು ವರ್ಷಗಳ ಬಳಿಕ ಅಂದರೆ 1857ರಲ್ಲಿ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ( ಸಿಪಾಯಿ ದಂಗೆ) ಕಿಡಿ ಕಾರಿತು. ಆಂಗ್ಲರ ದಬ್ಟಾಳಿಕೆಯ ವಿರುದ್ಧ ಸಿಪಾಯಿಗಳು ಬ್ರಿಟಿಷ್‌ ಸಾಮ್ರಾಜ್ಯಶಾಹಿ ವಿರುದ್ಧ ತಿರುಗಿಬಿದ್ದು ಪ್ರತಿಭಟಿಸಿದರೂ ವ್ಯವಸ್ಥಿತವಾದ ಯೋಜನೆಯಿಲ್ಲದೆ ದಂಗೆ ಬ್ರಿಟಿಷರಿಂದ ಹತ್ತಿಕ್ಕಲ್ಪಟ್ಟಿತು. ಸಿಪಾಯಿ ದಂಗೆ ವಿಫ‌ಲವಾದ ಮೇಲೆ, ಭಾರತೀಯ ನಾಯಕರ ಸಂದೇಶಗಳನ್ನು ಗೌರವಿಸಿದ ದೇಶದ ವಿದ್ಯಾವಂತ, ಯುವಕರು, ಇಡೀ ಜನ ಸಮೂಹ ಎಚ್ಚೆತ್ತುಕೊಂಡು ಸಂಘಟಿತರಾಗಿ ಹೋರಾಟಕ್ಕಿಳಿದರು.

1885ರಲ್ಲಿ ಸ್ಥಾಪಿತವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಮೊದಲು ಬ್ರಿಟಿಷ್‌ ಸಾಮ್ರಾಜ್ಯದ ಅಧೀನದಲ್ಲಿಯೇ ಭಾರತೀಯರಿಗೆ ಹೆಚ್ಚು ಹಕ್ಕು-ಪ್ರಾತಿನಿಧ್ಯಗಳಿಗಾಗಿ ಹೋರಾಟ ಪ್ರಾರಂಭಿಸಿತು. 20ನೇ ಶತಮಾನದ ಆರಂಭದ ವೇಳೆಗೆ ನಾಗರಿಕ ಸ್ವಾತಂತ್ರ್ಯ, ರಾಜಕೀಯ ಹಕ್ಕು, ಸಂಸ್ಕೃತಿ ಹಾಗೂ ದಿನನಿತ್ಯದ ಜೀವನದ ಮೇಲೆ ಬ್ರಿಟಿಷ್‌ ದಬ್ಟಾಳಿಕೆಯ ಆಡಳಿತದ ವಿರುದ್ಧ ಜನರ ದನಿ ಜೋರಾಯಿತು. ಮಹಾತ್ಮಾ ಗಾಂಧೀಜಿ, ಬಾಲ ಗಂಗಾಂಧರ ತಿಲಕ, ಲಾಲಾ ಲಜಪತರಾಯ, ಆ್ಯನಿ ಬೆಸೆಂಟ್‌ ಮೊದಲಾದ ಕ್ರಾಂತಿಕಾರಿ ನೇತಾರರು ಸ್ವರಾಜ್ಯಕ್ಕೆ ಆಗ್ರಹಿಸಿದರು. 1818 ಹಾಗೂ 1922ರ ನಡುವಿನ ಅವಧಿಯಲ್ಲಿ ಮಹಾತ್ಮಾಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾತ್ಮಕವಾದ ಅಸಹಕಾರ ಚಳವಳಿಯ ಮೊದಲ ಸರಣಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪ್ರಾರಂಭಿಸಿದೊಡನೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹತ್ವದ ದಿಕ್ಕು ದೊರೆಯಿತು. ಭಾರತದ ಎಲ್ಲೆಡೆಯಿಂದ ಅನೇಕ ಜನ ಈ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

1930ರಲ್ಲಿ ಪೂರ್ಣ ಸ್ವರಾಜ್ಯಕ್ಕೆ ಬದ್ಧವಾದ ಕಾಂಗ್ರೆಸ್‌ 1942ರಲ್ಲಿ ಬ್ರಿಟಿಷರೇ “ಭಾರತ ಬಿಟ್ಟು ತೊಲಗಿ’ ಎನ್ನುವ ಒತ್ತಾಯದ ಬೇಡಿಕೆಯನ್ನು ಮಾಡಿತು. ಬ್ರಿಟಿಷ್‌ ಆಡಳಿತವನ್ನು ಕೊನೆಗೊಳಿಸಲು 1942ರಲ್ಲಿ ಸುಭಾಷ್‌ ಚಂದ್ರ ಬೋಸ್‌ ಭಾರತೀಯ ರಾಷ್ಟ್ರೀಯ ಸೈನ್ಯವನ್ನು ಸಂಘಟಿಸಿದರೂ ಅವರ ಅಕಾಲ ಮರಣದಿಂದ ಈ ಪ್ರಯತ್ನ ವಿಫ‌ಲವಾಯಿತು. ಎರಡನೇ ಮಹಾಯುದ್ಧದ ಅನಂತರ ಈ ಎಲ್ಲ ಪ್ರಯತ್ನಗಳ ಪರಿಣಾಮವಾಗಿ ಭಾರತ ಹಾಗೂ ಪಾಕಿಸ್ಥಾನವೆಂದು ಇಬ್ಭಾಗಿಸುವ ದೇಶ ವಿಭಜನೆಯ ಬೆಲೆ ತೆತ್ತ ಭಾರತವು 1947ರ ಆಗಸ್ಟ್‌ 14ರ ಮಧ್ಯರಾತ್ರಿ ದಿಲ್ಲಿಯ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿ. ಬ್ರಿಟಿಷ್‌ ಆಡಳಿತ ತೊಲಗಿಸಿ ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯಿತು.

ಪ್ರಜಾಪ್ರಭುತ್ವ
ಸೃಜನಶೀಲ ವೈಚಾರಿಕತೆ ಬುದ್ಧಿ ಜೀವಿಗಳಾದ ಭಾರತೀಯ ಪ್ರಜೆಗಳ ಬದುಕಿಗೆ ಒಂದು ಅಗತ್ಯ ನೀತಿ ನಿಯಮಗಳು ರೂಪಿಸಲ್ಪಟ್ಟವು. ದೇಶದ ಭದ್ರಬುನಾದಿ ಜತೆಗೆ ರಾಷ್ಟ್ರ ಸರ್ವೋತೋಮುಖ ಬೆಳವಣೆಗಾಗಿ ವ್ಯವಸ್ಥಿತ ಆಡಳಿತ ನಿಯಮಗಳು ರೂಪಿಸಿದ ಕಾರಣದಿಂದ ಹುಟ್ಟಿಕೊಂಡ ವ್ಯವಸ್ಥಿತ ಪದವೇ ಪ್ರಜಾಪ್ರಭುತ್ವ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರವೇ ಜಾರಿಗೆ ಬಂದ ಸೂಕ್ತ ಆಡಳಿತ ರಂಗವೇ ಶ್ರೇಷ್ಠ ಪ್ರಜಾಪ್ರಭುತ್ವ ಪರಿಕಲ್ಪನೆ ಎನಿಸುತ್ತದೆ ಎಂದು ಅಬ್ರಹಾಂ ಲಿಂಕನ್‌ ವ್ಯಾಖ್ಯಾನಿಸಿದ್ದಾರೆ.

ನಮ್ಮ ದೇಶ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಜಾಪ್ರಭುತ್ವ ಮೂಲ ಅಂಶಗಳು ಎತ್ತಿಹಿಡಿಯುವುದು ಸಂವಿಧಾನದ ಆಶಯಗಳು ವಿಫ‌ಲವಾಗದಂತೆ ಎಚ್ಚರಿಕೆ ವಹಿಸುವುದು ಇಂದಿನ ನವ ಭಾರತದಲ್ಲಿ ಯುವಕರ ಕೈಯಲ್ಲಿದೆ. ಭಾರತಕ್ಕೆ ಸಿಕ್ಕ ಸ್ವಾತಂತ್ರ ಮತ್ತು ಪ್ರಜಾಪ್ರಭುತ್ವವವು ಕೇವಲ ಒಂದು ದಿನದ ಆಚರಣೆಯಾಗಬಾರದು ಅರ್ಥ ಪೂರ್ಣವಾಗಿ ಆಚರಿಸೋಣ. ಭಾರತವು ಪ್ರಪಂಚದ ಬಲಿಷ್ಠ ರಾಷ್ಟ್ರ ಮಾಡುವಲ್ಲಿ ಎಲ್ಲರೂ ಸಂಕಲ್ಪ ಮಾಡೋಣ.

ಲಕ್ಷ್ಮೀ ಬಿ., ಕಲಬುರಗಿ ವಿಶ್ವವಿದ್ಯಾಲಯ

 

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.