ಸ್ವಾತಂತ್ರ್ಯೋತ್ಸವದ ಮೆಲುಕು…


Team Udayavani, Aug 15, 2020, 9:00 AM IST

71st Independence Day in Jammu

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

1947ರಿಂದ ಆಗಸ್ಟ್‌ 15 ಅನ್ನು ನಾವು ಸ್ವಾತಂತ್ರ್ಯ ದಿನವಾಗಿ ಬಹಳ ಅದ್ಧೂರಿಯಿಂದ ಆಚರಿಸುತ್ತೇವೆ.

ಆದರೆ ಈ ವರ್ಷ ಅಂತಹ ಸಂಭ್ರಮ ಸಡಗರವಿಲ್ಲ. ಕಾರಣ ಕೊರೊನಾ ವೈರಸ್‌ನ ಹಾವಳಿ. ಕೊರೊನಾ ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಇನ್ನೂ ನಿಯಂತ್ರಣಕ್ಕೆ ಸಿಗದ ಕಾರಣ ಶಾಲಾ ಕಾಲೇಜುಗಳು ಇನ್ನೂ ಆರಂಭವಾಗಿಲ್ಲ.

ಹೀಗಾಗಿ ಈ ವರ್ಷ ಶಾಲೆಗಳಲ್ಲಿ “ವಂದೇ ಮಾತರಂ’ ಕೇಳಲಾಗುವುದಿಲ್ಲ ಎಂಬುದು ಬೇಸರದ ಸಂಗತಿ. ಸ್ವಾತಂತ್ರ್ಯೋತ್ಸವದ ಸಮಯದಲ್ಲೂ ಸ್ವತಂತ್ರವಾಗಿರಲು ಯಾಕೋ ಈ ಕೊರೊನಾ ಬಿಡುವಂತೆ ಕಾಣುತ್ತಿಲ್ಲ.

ಈ ದಿನ ನನ್ನ ಬಾಲ್ಯದ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವಕ್ಕೆ ಒಂದು ವಾರವಿದೆ ಎನ್ನುವಾಗ ನಮ್ಮ ತಯಾರಿ ಆರಂಭವಾಗುತ್ತದೆ. ಹೊಸ ಶೂ, ಸಮವಸ್ತ್ರ, ಕೈಗೊಂದು ಬಾವುಟ…  ಹೀಗೆ ಹೊಸತನ್ನು ಕೊಳ್ಳುವ ಪಟ್ಟಿ ಸಿದ್ಧವಾಗುತ್ತಿತ್ತು. ಪೇಟೆಗೆ ನಮ್ಮನ್ನು ಕರೆದುಕೊಂಡು ಹೋದರಂತೂ ಮುಗೀತು. ಸಿದ್ಧಪಡಿಸಿದ ಪಟ್ಟಿಗೆ ಇನ್ನೂ ಕೆಲವು ವಸ್ತುಗಳು ಸೇರ್ಪಡೆಯಾಗುತ್ತಿದ್ದವು.

ಸ್ವಾತಂತ್ರ್ಯೋತ್ಸವದ ದಿನ ಬೇಗನೆ ಎದ್ದು ಶಾಲೆಗೆ ತಯಾರಾಗಿ ಹೋಗೋದೇ ಒಂದು ಖುಷಿ. ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿ ಶಾಲಾ ಆವರಣವನ್ನು ಸ್ವತ್ಛಗೊಳಿಸುವ ಕೆಲಸ ನಮಗಿರುತ್ತಿತ್ತು. ಎಲ್ಲ ಕೆಲಸ ಮುಗಿದ ಬಳಿಕ ಸರತಿ ಸಾಲಿನಲ್ಲಿ ನಿಂತು ಅತಿಥಿಗಳಿಗೆ ಗೌರವ ಸಲ್ಲಿಸಿ, ಅವರಿಂದ ಧ್ವಜಾರೋಹಣ ಮಾಡಿಸಿ ಧ್ವಜಗೀತೆ, ವಂದೇ ಮಾತರಂ, ರಾಷ್ಟ್ರೀಯ ಗೀತೆಗಳನ್ನು ಹಾಡುತ್ತಿದ್ದೆವು. ಅನಂತರ ನನ್ನ ಇಷ್ಟದ ಘೋಷಣೆಗಳನ್ನು ಕೂಗುತ್ತ ಸಾಗುವ ಮೆರವಣಿಗೆಗೆ ನಾವು ಸಜ್ಜಾಗುತ್ತಿದ್ದೆವು. ಕೈಯಲ್ಲಿ ಧ್ವಜವನ್ನು ಹಿಡಿದು ಠೀವಿಯಿಂದ ನಡೆದುಕೊಂಡು ಹೋಗುವುದೇ ಒಂದು ಸಂತಸ. ಮೆರವಣಿಗೆ ಮುಗಿದ ಬಳಿಕ ನಮಗೆ ನೀಡುತ್ತಿದ್ದ ಚಾಕಲೇಟು, ಸಿಹಿಯನ್ನು ಮನೆಯವರೆಗೂ ತಿನ್ನುತ್ತಾ ಹೋಗುತ್ತಿದ್ದೆವು.

ಆ ದಿನದಂದು ನಮ್ಮಲ್ಲಿ ದೇಶಪ್ರೇಮ ಹೆಚ್ಚಾಗುತ್ತಿದ್ದುದ್ದೇನೋ ನಿಜ. ಆದರೆ ಆ ದಿನ ನಮ್ಮ ಕೈಯಲ್ಲಿ ಹಾರಾಡುತ್ತಿದ್ದ ಪ್ಲಾಸ್ಟಿಕ್‌ನ ಧ್ವಜ ಮುಂದಿನ ದಿನಗಳಲ್ಲಿ ರಸ್ತೆ ಬದಿಗಳಲ್ಲಿ ಅಥವಾ ಶಾಲಾ ಆವರಣದಲ್ಲಿ ಬಿದ್ದಿರುತ್ತಿತ್ತು. ಆಗ ನಮಗೇನೂ ತಿಳಿಯುತ್ತಿರಲಿಲ್ಲ ಮತ್ತು ಹಿರಿಯರು ಈ ಬಗ್ಗೆ ನಮಗೆ ಎಚ್ಚರಿಸಿಯೂ ಇರಲಿಲ್ಲ. ಆದರೆ ನಾವು ದೊಡ್ಡವರಾಗುತ್ತಲೇ ಶಾಲಾ ದಿನಗಳಲ್ಲಿ ನಾವು ಮಾಡುತ್ತಿದ್ದ ಈ ತಪ್ಪಿನ ಅರಿವಾಯಿತು.

ದೇಶಪ್ರೇಮವು ನಾವು ಮಾಡುವ ಕೆಲಸದಲ್ಲಿ ಹಾಗೂ ದೇಶದ ಕಾನೂನನ್ನು ಪಾಲಿಸುವುದರಲ್ಲಿ ಇರಬೇಕೇ ಹೊರತು ಸ್ವಾತಂತ್ರ್ಯೋತ್ಸವದ ಒಂದು ದಿನ ಮಾತ್ರ ಅಲ್ಲ. ದೇಶದ ಸ್ವತ್ಛತೆಯನ್ನು ಕಾಪಾಡುವುದು, ಸಾರ್ವಜನಿಕ ಆಸ್ತಿ ರಕ್ಷಿಸುವುದು ಕೂಡ ದೇಶಪ್ರೇಮವೇ ಆಗಿದೆ.

ಜೈ ಹಿಂದ್‌ ಜೈ ಕರ್ನಾಟಕ…

ವೀಕ್ಷಿತಾ, ಬೆಸೆಂಟ್‌ ಮಹಿಳಾ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.