Tourism: ಸಪ್ತ ಭಾಷಾ ಸಂಗಮ ಭೂಮಿ ಕಾಸರಗೋಡು


Team Udayavani, Dec 17, 2023, 7:30 AM IST

14-uv-fusion

ಕೇರಳಕ್ಕೆ ಕಿರೀಟವಿಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಚಿ ತಬ್ಬಿಕೊಂಡ ಹಾಗಿರುವ ಗಡಿನಾಡು ಎಂದರೆ ಕಾಸರಗೋಡು. ಬಹುಭಾಷಾ ಭೂಮಿ ಕಾಸರಗೋಡಿನಲ್ಲಿ ಕನ್ನಡ, ತುಳು, ಮಲಯಾಳಂ, ಕೊಂಕಣಿ, ಮರಾಠಿ, ಹವ್ಯಕ, ಕೋಟ, ಶಿವಳ್ಳಿ, ಬ್ಯಾರಿ ಹೀಗೇ ಹಲವು ಭಾಷೆಗಳ ಹಾಗೂ ಸಾಹಿತ್ಯದ ಕಂಪು ಹರಡಿದೆ. ಇದರಿಂದಲೇ ಕಾಸರಗೋಡು ಸಪ್ತಾಭಾಷಾ ಸಂಗಮ ಭೂಮಿ ಎಂದು ಎಲ್ಲೆಡೆ ಪ್ರಸಿದ್ದಿ ಪಡೆದಿದೆ.

ನೀರ್ಚಾಲಿನ ಮಹಾಜನ ವಿದ್ಯಾಸಂಸ್ಥೆಗಳು, ಮಂಜೇಶ್ವರ ಗೋವಿಂದ ಪೈಯವರ ಗಿಳಿವಿಂಡು ಮತ್ತು ಡಾ| ಕೈಯ್ನಾರ ಕಿಜ್ಞಣ್ಣ ರೈಗಳ ನಿವಾಸ ಕವಿತಾ ಕುಟೀರ ಅಮೂಲ್ಯ ಗ್ರಂಥಗಳ ಸಂಗ್ರಹವನ್ನು ಹೊಂದಿದೆ.

ಸಮುದ್ರದ ಅಲೆಗಳಿಗೆ ಸದಾ ಮೈಯೊಡ್ಡುವ ಬೇಕಲಕೋಟೆಯಲ್ಲಿ ಬೀಚ್‌,ಪಾರ್ಕ್‌, ಉತ್ಖನನದ ಮೂಲಕ ಕಂಡ ಗತವೈಭವದ ಅರಮನೆಯ ಅಡಿಪಾಯ, ಸುತ್ತಲಿನ ಉದ್ಯಾನ ಮತ್ತು ಐತಿಹಾಸಿಕ ಕೋಟೆಯ ಸೌಂದರ್ಯವನ್ನು ಜತೆಯಾಗಿ ಸವಿಯಬಹುದು. ಈ ಜಿಲ್ಲೆಯಲ್ಲಿರುವ ಮಾಯಿಪ್ಪಾಡಿ ಅರಮನೆ, ಚಂದ್ರಗಿರಿ ಕೋಟೆ, ಆರಿಕ್ಕಾಡಿ ಕೋಟೆಗಳಿಗೆ ಐತಿಹಾಸಿಕ ಪ್ರಾಧಾನ್ಯತೆಗಳೂ ಇದೆ.

ಕಾಸರಗೋಡಿನ ಸಮೀಪದ ಕ್ಷೇತ್ರ ಅನಂತಪುರ, ಪಕ್ಕದ ಮೂಜುಂಗಾವು ಪಾರ್ಥಸಾರಥಿ ದೇವಸ್ಥಾನದಲ್ಲಿರುವ ವಿಶಾಲ ಸರೋವರ ಪ್ರವಾಸಿಗರ ಆಕರ್ಷಕ ಚುಂಬಕಗಳು. ವಿನಾಯಕನ ದೇವಾಲಯ ಮಧೂರು, ಬೇಳ ಶೋಕಾಮಾತ ಇಗರ್ಜಿಯಲ್ಲಿರುವ ಗುಹೆ, ಮಂಜೇಶ್ವರ ಜೈನ ಬಸದಿ, ಕಾಜ್ಞಾಂಗಾಡಿನಲ್ಲಿರುವ ಆನಂದ ಆಶ್ರಮ ಮತ್ತು ನಿತ್ಯಾನಂದಾ ಶ್ರಮಗಳು ಕಾಸರಗೋಡಿನ ಪರಿಸರದ ಆಧ್ಯಾತ್ಮಕ ತಾಣಗಳು. ಪೊಸದಿಗುಂಪೆ ಮತ್ತು ರಾನಿಪುರಮ್‌ ಚಾರಣಕ್ಕೆ ಅನುಕೂಲಕರವಾದ ಉನ್ನತ ಬೆಟ್ಟಗಳು. ನೀಲೇಶ್ವರದ ಸನಿಹದಲ್ಲಿರುವ ಹಿನ್ನೀರ ಸರೋವರ ಮನಸ್ಸಿಗೆ ಮುದ ನೀಡುವ ಜಾಗ…

ತೆಂಗು ಕೃಷಿ ಕುರಿತಾದ ಸಂಶೋಧನಾ ಚಟುವಟಿಕೆಗಳಲ್ಲಿ ನಿರತವಾದ ಕಾಸರಗೋಡಿನ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರದಲ್ಲಿ ತಳಿವೈವಿಧ್ಯ, ಒಳಸುರಿಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಇಲ್ಲಿನ ಜನರ ಪ್ರಧಾನ ಆಹಾರ ಕ್ರಮ ಎಂದರೆ ಕುಚ್ಚಿcಲಕ್ಕಿ ಅನ್ನ ಮತ್ತು ಪರೋಟ ಮತ್ತು ಪುಟ್ಟು. ಕಡಲಿನ ಸನಿಹದಲ್ಲೇ ಸಾಗುವ ಡಬಲ್‌ ಲೈನ್‌ ರೈಲು ಮಾರ್ಗ ಮತ್ತು ಸಮಾನಾಂತರವಾಗಿ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಸರಗೋಡನ್ನು ಸಂಪರ್ಕಿಸುವ ಸಲೇಕರ್ಯವನ್ನು ಹೆಚ್ಚಿಸಿದೆ. ಒಟ್ಟಿನಲ್ಲಿ ಕಾಸರಗೋಡು ಎಂಬುವುದು ಸಂದರ್ಶಿಸುವ ಪ್ರವಾಸಿಗರಿಗೆ ಮನರಂಜನೆಯನ್ನು ನೀಡುತ್ತದೆ.

- ಶ್ರೇಯಾ

ಮಿಂಚಿನಡ್ಕ

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.