UV Fusion: ಮಾನವೀಯತೆ ಮರೆಯದಿರೋಣ


Team Udayavani, Jan 12, 2024, 2:34 PM IST

7-uv-fusion

ಪ್ರಸ್ತುತ ಆಧುನಿಕ ಯುವ ಜನಾಂಗವು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ತನ್ನನ್ನು ದೂರಾಲೋಚನೆಗಳಿಗೆ ತೊಡಗಿಸಿ ಕೊಳ್ಳುವುದರಿಂದ ನೈತಿಕ ಮೌಲ್ಯಗಳು ಕಾಣೆಯಾಗಿದೆ.ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಕಾಲದಲ್ಲಿ ಪ್ರೀತಿ, ನಂಬಿಕೆ, ಕರುಣೆ ಮತ್ತು ವಿಶ್ವಾಸಕ್ಕೆ ಬೆಲೆ ಇಲ್ಲದಂತಾಗಿದೆ. ಮನುಷ್ಯ ಮಾನವೀಯತೆಯನ್ನು ಮರೆತು ಸ್ವಾರ್ಥ ಜೀವನವನ್ನು ನಡೆಸುತ್ತಿದ್ದಾನೆ. ನನ್ನವರು ತನ್ನವರು ಎನ್ನುವ ಭಾವನೆ ಮಾನವನ ಮನದಲ್ಲಿ ನಶಿಸಿಹೋಗುತ್ತಿರುವುದು ವಿಪರ್ಯಾಸ ಆಗಿದೆ. ಇಂಥ ಸ್ವಾರ್ಥ ಜಗತ್ತಿನಲ್ಲಿ ಮಾನವೀಯತೆಯ ಬೀಜವನ್ನು ಬಿತ್ತುವುದು ಕಷ್ಟಸಾಧ್ಯವಾಗಿದೆ.

ಹಿಂದಿನ ಕಾಲದಲ್ಲಿ ಹಿರಿಯರು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ನೀತಿಕತೆಗಳನ್ನು ಹೇಳುತ್ತಿದ್ದರು.ಆದರೆ ಇಂದು ಮಕ್ಕಳಲ್ಲಿ ನೈತಿಕ ಮೌಲ್ಯ ಕಾಣೆಯಾಗಿದೆ. ಆಧುನಿಕ ಕಾಲದಲ್ಲಿ ಗುರು – ಶಿಷ್ಯರ ಸಂಬಂಧ ಶಾಲೆ ಮತ್ತು ಪಠ್ಯಕ್ಕೆ ಮಾತ್ರ ಸೀಮಿತವಾಗಿದ್ದು, ಗುರುವಿಗೆ ನೀಡುವ ಗೌರವ ಕಡಿಮೆಯಾಗುತ್ತಿದೆಯೇನೋ ಎಂದೆನಿಸುತ್ತದೆ. ನಾವು ಎಷ್ಟೇ ಎತ್ತರಕ್ಕೆ ಹೋದರೂ ಗುರುಗಳನ್ನು , ಹಿರಿಯರನ್ನು ಎಂದೂ ಕಡೆಗಣಿಸಬಾರದು ಮತ್ತು ಮರೆಯಬಾರದು.

ಇಂದಿನ ಕಾಲದಲ್ಲಿ ಹಣಕ್ಕಿರುವ ಬೆಲೆ ಮಾನವೀಯ ಮೌಲ್ಯಗಳಿಗೆ ಇಲ್ಲ ಎಂಬ ಮಾತು ಸತ್ಯಕ್ಕೆ ಹತ್ತಿರವಾಗಿದೆ. ವ್ಯಕ್ತಿ ಎಷ್ಟೇ ದೊಡ್ಡವನಾದರೂ, ಸಿರಿವಂತನದರೂ ಅವನಲ್ಲಿ ಮಾನವೀಯ ಗುಣಗಳು ಇಲ್ಲದಿದ್ದರೆ ಏನು ಪ್ರಯೋಜನ..? ಎಲ್ಲ ಇದ್ದು ಏನು ಇಲ್ಲದಂತೆ .

ಮಾನವೀಯತೆಯು ಸಂಬಂಧಗಳಿಗೆ ಅಂಟಿದ ಕಳಂಕವಾಗಿದೆ. ಮಾನವನ ನಡುವಿನ ಪ್ರೀತಿಯು ಕೊಡು- ಕೊಳ್ಳುವಿಕೆಯ ಸೂತ್ರವನ್ನು ಅವಲಂಬಿಸಿದೆ. ಮನುಷ್ಯನ ಆಧುನಿಕ ಬದುಕಿನ ಶೈಲಿ, ತಂತ್ರಜ್ಞಾನ , ವಿಜ್ಞಾನ , ಆಡಂಬರದ ಬದುಕು , ಮನುಷ್ಯನ ಅತೀ ಬುದ್ದಿವಂತಿಕೆಯು ಆತನನ್ನು ಮೌಲ್ಯಗಳಿಂದ ಸ್ವಾರ್ಥಪರ ಜೀವನದತ್ತ ಕೊಂಡೊಯ್ಯುತ್ತಿದೆ. ತಾನೊಬ್ಬನೇ ಬೆಳೆಯಬೇಕೆಂಬ ಭಾವನೆ ಪ್ರಸ್ತುತ ಜಗತ್ತಿನ ನಿಯಮವಾಗಿದೆ.

ಇಂದಿನ ಯುವಜನತೆ ಅಂದರೆ ನಾವುಗಳು ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಒಂದು ಸುಸ್ಥಿರ ಸಮಾಜದ ನಿರ್ಮಾಣಕ್ಕೆ ಅಗತ್ಯವಾದ ಮೌಲ್ಯ ನಮ್ಮಲ್ಲಿ ಕಾಣೆಯಾಗಿದೆ. ಜಾತಿ, ಸ್ವಾರ್ಥ ಎಂಬ ಪೀಡೆ ಶಾಪವಾಗಿ ಪರಿಣಮಿಸಿದೆ. ಪ್ರೀತಿ, ವಾತ್ಸಲ್ಯ, ಕರುಣೆ , ನಂಬಿಕೆ, ಸಹಬಾಳ್ವೆ ಇವುಗಳು ನಮ್ಮಲ್ಲಿ ಅಗತ್ಯವಾಗಿರಬೇಕಾದ ಮೌಲ್ಯಗಳು. ಈ ಮೌಲ್ಯಗಳು ಇಂದು ಕಲುಷಿತಗೊಳ್ಳುತ್ತಿದೆ.

ಬದುಕಿನ ಪ್ರತಿಯೊಂದು ಸಂದರ್ಭದಲ್ಲೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಉದಾಹರಣೆಗೆ ರಸ್ತೆಯಲ್ಲಿ ಅಪಘಾತವಾದಾಗ ಫೋಟೋ ತೆಗಿತಾರೆ ವಿನಃ ಅವರನ್ನು ಆಸ್ಪತ್ರೆಗೆ ಸೇರಿಸುವ ಯಾವುದೇ ಕಾರ್ಯವನ್ನು ಮಾಡಲು ಮುಂದಾಗುವುದಿಲ್ಲ . ಕಾರಣ ಎಲ್ಲಿ ಗಾಯಗೊಂಡ ವ್ಯಕ್ತಿ ನಮಗೆ ಹೊರೆಯಾಗುತ್ತಾನೋ ಎಂಬ ಸ್ವಾರ್ಥ ಪರ ಚಿಂತನೆ ನಮ್ಮದ್ದು. ಕಷ್ಟದಲ್ಲಿದ್ದಾಗ ಸಹಕರಿಸಿ ಬದಲಾಗಿ ಸ್ವಾರ್ಥಿಯಾಗಿ ಯೋಚಿಸದಿರಿ.

-ಆಯಿಶತುಲ್‌ ಬುಶ್ರ

ಎಂ.ಪಿ.ಎಂ. ಕಾಲೇಜು. ಕಾರ್ಕಳ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.