UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…


Team Udayavani, Dec 9, 2023, 7:15 AM IST

13-uv-fusion

ಇತ್ತೀಚಿನ ದಿನಗಳಲ್ಲಿ ಪ್ರವಾಸಿ ತಾಣಗಳು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿವೆ. ಇಂದಿನ ಜನಾಂಗ ಪ್ರವಾಸಿ ತಾಣಗಳ ಬಗೆಗೆ ಒಲವು ತೋರಿಸುತ್ತಿರುವುದು ಸಂತೋಷದಾಯಕ ವಿಚಾರ. ಆಧುನಿಕತೆಯ ಭರದಲ್ಲಿ ಜನರು ತಾವು ನೆಚ್ಚಿದ ಸ್ಥಳಗಳನ್ನು ಹಾಳುಗೆಡವಿ ಬರುತ್ತಿರುವುದು ನಿಜಕ್ಕೂ ನಾಚಿಕೆಗೇಡು.

ಸಾಮಾನ್ಯವಾಗಿ ಎಲ್ಲ ಪ್ರವಾಸಿ ತಾಣಗಳಲ್ಲೂ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಆ ಬಗೆಗೆ ಜಾಗೃತಿ ಮೂಡಿಸುವ ಸೂಚನಾಫಲಕಗಳಿದ್ದರೂ, ಯಾತ್ರಿಕರು ತಾವು ಬಳಸಿದ ಪ್ಲಾಸ್ಟಿಕ್‌ ಕಸಗಳನ್ನು ಎಲ್ಲೆಂದರಲ್ಲಿ ಎಸೆದು ಬಿಡುತ್ತಾರೆ. ತತ್ಪರಿಣಾಮವಾಗಿ ಪ್ರಯಾಣಿಗರು ಹೆಚ್ಚಾದಂತೆ ಪರಿಸರ ಮಾಲಿನ್ಯವೂ ಹೆಚ್ಚಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್‌ಗಳ ಚಿತ್ತಾರವೇ ಆಕರ್ಷಣೆಯಾಗಿ ಬಿಡುತ್ತಿವೆ!

ಏನೂ ಅರಿಯದ ಮೂಕ ಪ್ರಾಣಿಗಳಿಗೂ ಇದರಿಂದ ತೊಂದರೆಯಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆ ಬಗೆಗೆ ಕಾಳಜಿ ವಹಿಸದಿದ್ದರೆ ಮುಂದೊಂದು ದಿನ ನಮ್ಮ ನಡುವೆಯೇ ಪ್ಲಾಸ್ಟಿಕ್‌ ರಾಶಿ ನೋಡಿ ಬರಲು ಹೋಗೋಣ ಎನ್ನುವ ಮಾತು ಬಂದರೂ ಅಚ್ಚರಿಯಿಲ್ಲ!

ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾಸಿ ತಾಣಗಳ ಬಗೆಗೆ ಹೇಗೆ ಮಾಹಿತಿ ಹಂಚಿಕೆಯಾಗುತ್ತದೆಯೋ ಹಾಗೆಯೇ ದುರ್ಬಳಕೆಯಾಗುತ್ತಿರುವುದು ವಿಷಾದನೀಯ. ಮೊನ್ನೆ ಮೊನ್ನೆ ಸಾಮಾಜಿಕ ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ ಹಂಚುವ ಮಾಹಿತಿಯಿಂದಾಗಿ ಪ್ರವಾಸಿ ಸ್ಥಳಗಳ ಮೇಲೆ ಹೇಗೆ ಪರಿಣಾಮ ಉಂಟಾಗುತ್ತದೆ ಎನ್ನುವುದರ ಬಗೆಗೆ ವಿವರಿಸಿದ ಗೋವಾದ ದೂದ್‌ ಸಾಗರ್‌ಜಲಪಾತದ ವೀಡಿಯೋ ಉಲ್ಲೇಖನೀಯ.

ಈ ಜಲಪಾತದ ವೀಕ್ಷಕರು ಪರಿಸರದಲ್ಲಿ ಅಸಹ್ಯವಾಗಿ ನಡೆದುಕೊಂಡ ಬಗ್ಗೆ ನಮ್ಮ ಸುತ್ತಮುತ್ತಲಿರುವ ಭಾಗಗಳಲ್ಲೂ ನಡೆಯುತ್ತಲಿರುತ್ತದೆ. ಇಂದಿನ ಜನಾಂಗ ಪರಿಸರಕ್ಕೆ ಮಾರಕವಾಗಿ ಬದುಕದೆ ಪ್ರೇರಕವಾಗಿ ಬದುಕಲು ಕಲಿಯುವುದು ಅನಿರ್ವಾಯವಾಗಿದೆ.

ಸಮಾಜದಲ್ಲಿ ಜನರಿಗೆ ಪ್ರವಾಸಿ ತಾಣಗಳ ಬಗೆಗೆ ಎಂದು ಅತೀವ ಆಸಕ್ತಿಯುಂಟಾಯಿತೋ ಅಂದಿನಿಂದಲೇ  ಪ್ರಕೃತಿಯಲ್ಲಿ ಸ್ವಾಭಾವಿಕವಾದ ಸೌಂದರ್ಯ ಮಾಯವಾಗಿ ಬಿಟ್ಟಿವೆ. ಹೊಸ ಹೊಸ ಅನ್ವೇಷಣೆಗಳನ್ನು ಮಾಡಿ, ಪರಿಸರವನ್ನು ಪ್ರಯೋಗಾಲವನ್ನಾಗಿಸಿಬಿಟ್ಟಿದ್ದಾರೆ.

ಪ್ರವಾಸೋದ್ಯಮವು ದಂಧೆಯಾಗಿ ಬಿಟ್ಟಿದೆ. ಇದೆಲ್ಲವನ್ನು ಬದಿಗಿಟ್ಟು, ಪ್ರಕೃತಿಯ ಉಳಿವಿಗಾಗಿ ತುಡಿಯುವ ಅಂತಃಕರಣವನ್ನು ಅಳವಡಿಸಿಕೊಂಡರೆ,  ಮುಂದಿನ ಪೀಳಿಗೆಗೂ ಅತ್ಯುತ್ತಮ ಬಳುವಳಿಯನ್ನು ನೀಡಿದಂತಾಗುತ್ತದೆ ಅಲ್ಲವೇ?

ಪಂಚಮಿ ಬಾಕಿಲಪದವು

ಅಂಬಿಕಾ ಮಹಾವಿದ್ಯಾಲಯ, ಬಪ್ಪಳಿಗೆ, ಪುತ್ತೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.