ಪ್ರಕೃತಿಯೊಂದಿಗೆ ನನ್ನ ಆತ್ಮಸಂವಾದ


Team Udayavani, Sep 21, 2020, 2:59 PM IST

12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಹವ್ಯಾಸ ಇರುವಂತೆ ನನಗೆ ಪ್ರಕೃತಿಯ ಸೌಂದರ್ಯ ಸವಿಯುವುದು ಬಹಳ ಇಷ್ಟ.

ಮುಂಜಾನೆ, ಮುಸ್ಸಂಜೆಯಲ್ಲಿ ಪ್ರಕೃತಿಯು ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿರುವುದನ್ನು ನೋಡುವುದೇ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ.

ಇಂಪಾದ ಧ್ವನಿಯಿಂದ ಚಿಲಿಪಿಲಿಗುಟ್ಟುತ್ತಿರುವ ಹಕ್ಕಿಗಳು, ತಂಪಾಗಿ ಬೀಸುತ್ತಿರುವ ತಂಗಾಳಿ, ನಗು-ಮುಖದಿಂದ ಅರಳುತ್ತಿರುವ ಹೂಗಳು, ಮುಂಜಾನೆಯನ್ನು ಆವರಿಸಿರುವ ಮಂಜು, ಅದನ್ನು ಕರಗಿಸಲೆಂದೇ ಉದಯಿಸುತ್ತಿರುವ ಅರುಣ.

ಸೂರ್ಯನು ತನ್ನ ಕಿರಣದಿಂದ ಭೂಮಿಯನ್ನು ಸ್ಪರ್ಶಿಸಿದಾಗ ನಿಧನವಾಗಿ ಮೇಲೇಳಿ ಹೊಸ ಜೀವನ ಆರಂಭಿಸುವ, ಪ್ರಕೃತಿಗೆ ಇನ್ನಷ್ಟು ಮೆರುಗು ನೀಡುವ ಹುಲ್ಲುಗಳು ಆಹಾ! ಎಂತಹ ರಮ್ಯ ಮನೋಹರವಾದ ದೃಶ್ಯ . ಇದು ಮುಂಜಾನೆಯ ನೋಟ. ಇನ್ನು ಮುಸ್ಸಂಜೆ ಭಾಸ್ಕರನಿಗೆ ಬೈ ಹೇಳಿ ಚಂದ್ರನಿಗೆ ಹಾಯ್‌ ಹೇಳುವ ಸಮಯ.

ಕತ್ತಲಾಯಿತು ಅಂತ ಅವಸರದಲ್ಲಿ ಗೂಡು ಸೇರುತ್ತಿರುವ ಪಕ್ಷಿಗಳು, ತಮ್ಮ ಜೀವನ ಮುಗಿತು ಅನ್ನುವ ಬೇಜಾರು ಇದ್ದರೂ ಮುಗುಳ್ನಗುತ್ತಾ ಮುದುಡುತ್ತಿರುವ ಹೂ ಗಳು, ಶಾಂತವಾದ ವಾತವಾರಣ ಹೀಗೆ ಪ್ರಕೃತಿಯ ಸೌಂದರ್ಯವನ್ನು ನೋಡಲು ಎರಡು ಕಣ್ಣುಗಳು ಸಾಲದು. ಮಳೆಗಾಲದಲ್ಲಂತೂ ಪ್ರಕೃತಿಯ ಸೌಂದರ್ಯ ಇಮ್ಮಡಿಯಾಗುತ್ತದೆ.

ಹಸುರು ಬಣ್ಣದ ಉಡುಗೆ ತೊಟ್ಟಂತೆ ಕಾಣಿಸುವ ಭೂ ತಾಯಿ. ಅದರ ಮೇಲೆ ವರುಣನ ನರ್ತನ ಹೀಗೆ ಪ್ರಕೃತಿ ಸೌಂದರ್ಯವನ್ನು ವರ್ಣಿಸಲು ಸಾಧ್ಯವಿಲ್ಲ. ಅದನ್ನು ಸವಿಯಲು ಮಾತ್ರ ಸಾಧ್ಯ.

ಪ್ರಕೃತಿ ಸೌಂದರ್ಯದ ಮುಂದೆ ಉಳಿದೆಲ್ಲ ಸೌಂದರ್ಯಗಳು ಶೂನ್ಯ. ಪ್ರಕೃತಿಯ ಪ್ರತಿಯೊಂದು ಅಂಶಗಳು ಯಾವುದೇ ಸ್ವಾರ್ಥವಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತವೆ. ತಮ್ಮ ಭವಿಷ್ಯ ಒಂದೇ ದಿನ ಎಂದುತಿಳಿದಿದ್ದರೂ ಹೂವುಗಳು ಸದಾ ನಗುತ್ತಲೇ ಇರುತ್ತವೆ. ಹೀಗೆ ಪ್ರಕೃತಿಯಿಂದ ಖುಷಿಯನ್ನು ಪಡೆಯುವುದರ ಜತೆಗೆ ಅದರಿಂದ ಕಲಿಯ ಬೇಕಾದ ಪಾಠವು ಇದೆ. ಶಾಶ್ವತವಾದ ಪ್ರಕೃತಿಯೇ ಸ್ವಾರ್ಥವನ್ನು ಮರೆತಿರುವಾಗ ತಾತ್ಕಾಲಿಕವಾಗಿ ನಾವುಗಳು ಕೂಡ ನಿಸ್ವಾರ್ಥ ಮನೋಭಾವನೆ ಬೆಳೆಸಿಕೊಳ್ಳೋಣ.

 ವಿನಯ ಆಚಾರ್ಯ, ಎಂ.ಪಿ.ಎಂ. ಕಾಲೇಜು ಕಾರ್ಕಳ 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.