ಸ್ವಚ್ಛ ಸುಂದರ ಪರಿಸರದ ಅಗತ್ಯತೆ


Team Udayavani, Jun 5, 2020, 5:45 PM IST

ಸ್ವಚ್ಛ ಸುಂದರ ಪರಿಸರದ ಅಗತ್ಯತೆ

ಸಾಂದರ್ಭಿಕ ಚಿತ್ರ

ವಿಜ್ಞಾನ, ತಂತ್ರಜ್ಞಾನಗಳ ಮುಖಾಂತರ ದೇಶ ಅಭಿವೃದ್ಧಿ ಹೊಂದುತ್ತಿರುವಾಗ ಮಾನವನು ಆರೋಗ್ಯವಂತನಾಗಿ ಉಳಿಯಬೇಕಾದರೆ ಸ್ವಚ್ಛ ಸುಂದರ ಪರಿಸರವನ್ನು ಉಳಿಸಿ, ಬೆಳೆಸಬೇಕಾದದ್ದು ಅತ್ಯಗತ್ಯ. ಇದಕ್ಕೆ ಅನಿವಾರ್ಯವೋ ಎಂಬಂತೆ ಪ್ರತಿವರ್ಷವೂ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ನಾವು ಈ ಭೂಮಿಗೆ ಬಂದಾಗ ಈ ಭೂಮಿ ಹೇಗಿತ್ತೋ ಅದಕ್ಕಿಂತ ಒಳ್ಳೆಯ ಭೂಮಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಕೊಡಬೇಕಾದದ್ದು ನಮ್ಮ ಕರ್ತವ್ಯ. ಅದಕ್ಕಾಗಿ ವರ್ಷದಲ್ಲಿ ಒಂದು ದಿನವಾದರೂ ನಮ್ಮ ಮನೆ, ಶಾಲೆ, ಸಮಾಜದ ಸುತ್ತ ಮುತ್ತಲಿನ ಪರಿಸರದಲ್ಲಿ ನಾಲ್ಕಾರು ಗಿಡಗಳನ್ನು ನೆಟ್ಟು ಪೋಷಿಸಿದರೆ ಅದೇ ನಾವು ಪರಿಸರಕ್ಕೆ ಕೊಡುವ ದೊಡ್ಡ ಕೊಡುಗೆ ಎಂದೇ ಹೇಳಬಹುದು. ಅಭಿವೃದ್ಧಿ ಅತ್ಯಗತ್ಯ. ಆದರೆ ಅದು ನೈಸರ್ಗಿಕ ಸಂಪನ್ಮೂಲಗಳನ್ನು ಬರಿದು ಮಾಡುವ, ಜಾಗತಿಕ ಮಟ್ಟದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ರೀತಿಯಲ್ಲಿ ಆಗಬಾರದು. ತಜ್ಞರು ಹೇಳುವಂತೆ, ನಾವು ಈ ಭೂಮಿಯನ್ನು ನಮ್ಮ ಹಿರಿಯರಿಂದ ಬಳುವಳಿಯಾಗಿ ಪಡೆದಿಲ್ಲ. ನಮ್ಮ ಮುಂದಿನ ಪೀಳಿಗೆಯಿಂದ ಎರವಲಾಗಿ ಪಡೆದಿದ್ದೇವೆ. ಈ ಮಾತನ್ನು ಜ್ಞಾಪಕದಲ್ಲಿ ಇಟ್ಟುಕೊಂಡು ನಾವು ಸಂಪನ್ಮೂಲಗಳನ್ನು ಬಳಸಬೇಕು.

ಪ್ರಕೃತಿಗೆ ಮಾನವನ ಎಲ್ಲಾ ಆಸೆಗಳನ್ನು ಪೂರೈಸುವ ಶಕ್ತಿ ಇದೆ. ಆದರೆ ಅವನ ದುರಾಸೆಯನ್ನಲ್ಲ . ಇಂದು ಜನರು ಪ್ರಕೃತಿಯ ಮೇಲೆ ದೌರ್ಜನ್ಯವನ್ನೆಸಗುತ್ತಿದ್ದಾರೆ. ಪರಿಸರವನ್ನು ಹಾಳುಗೆಡವುತ್ತಿದ್ದಾರೆ. ಆದರೆ ಪ್ರಕೃತಿಯು ಸುನಾಮಿ, ನೈಸರ್ಗಿಕ ವಿಕೋಪಗಳಂತಹ ತಿರುಗೇಟನ್ನು ಕೊಟ್ಟರೆ ಎಷ್ಟೇ ಶಕ್ತಿವಂತ, ಸಿರಿವಂತ ಮಾನವರಾದರೂ ಅವರು ಪ್ರಕೃತಿಯ ಶಕ್ತಿಯ ಎದುರು ಕುಬ್ಜರೇ ಸರಿ. ಇದನ್ನರಿತು ನಡೆಯಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ.
ಪರಿಸರ ನಾಶ ಮಾಡಿದರೆ ತಾನು ತನಗೇ ಹಾನಿ ಮಾಡಿಕೊಂಡಂತೆ ಎಂಬುದನ್ನು ನಾವು ಅರಿಯಬೇಕು. ಪರಿಸರ ನಾಶರಹಿತ ಅಭಿವೃದ್ದಿಯನ್ನು ಸಾಧಿಸುವ ಪಥದಲ್ಲಿ ಸಾಗಬೇಕು. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯವನ್ನು ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಶಪಥಕ್ಕೆ ಕಟಿಬದ್ಧರಾಗೋಣ.

ಪ್ರಿಯಾಂಕ ತೀರ್ಥರಾಮ ಕೊಚ್ಚಿ, ಮರ್ಕಂಜ, ಸುಳ್ಯ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.