NEW YEAR: ಮತ್ತೆ ಬಂತು ಹೊಸ ವರುಷ


Team Udayavani, Jan 6, 2024, 3:16 PM IST

13-uv-fusion

ಅರೆ!! ಮತ್ತೆ ಹೊಸ ವರ್ಷ ಬಂದೇಬಿಡ್ತಾ ! ಮೊನ್ನೆ ತಾನೇ ಹೊಸ ವರ್ಷಕ್ಕೆ ವಿಶ್‌ ಮಾಡಿದ್ದ ನೆನಪು. ಇಷ್ಟು ಬೇಗ 365 ದಿನಗಳು ಕಳೀತಾ!!. ಏಕೋ ಇತ್ತೀಚಿಗೆ ದಿನಗಳು ವೇಗವಾಗಿ ಸಾಗ್ತಾ ಇದೆ ಅನಿಸ್ತಿದೆ. ಗೋಡೆ ಮೇಲಿದ್ದ ಹಳೆ ಕ್ಯಾಲೆಂಡರ್‌ ಬದ ಕಿಸಿ ಹೊಸ ಕ್ಯಾಲೆಂಡರ್‌ ಹಾಕೆºàಕು. ಈ ವರ್ಷದ ರೆಸಲ್ಯೂಷನ್‌ ಏನು !. ಕಳೆದ ವರ್ಷ ಮಾಡಿದ ರೆಸಲ್ಯೂಶನೇ ಇನ್ನೂ ಪೂರ್ಣವಾಗ್ಲಿಲ್ಲ. ಈ ವರ್ಷ ಇನ್ನೇನು ಮಾಡೋದು ಎಂದು ಹೊಸ ವರ್ಷದ ಪ್ರಾರಂಭದಲ್ಲಿ ನಮಗೆಲ್ಲ ಅನಿಸೋದು ಸರ್ವೇಸಾಮಾನ್ಯ. ರೆಸಲ್ಯೂಶನ್‌ ಗಳೆÇÉಾ ಹೊಸ ವರ್ಷದ ಮೊದಲ ನಾಲ್ಕು ದಿನಗಳಿಗೆ ಮಾತ್ರ ಸೀಮಿತವಾಗಿಬಿಟ್ಟಿದೆ.

ವರ್ಷದ ಮೊದಲ ದಿನದಂದು ಈ ವರ್ಷ ಇದನ್ನು ಸಾಧಿಸಿಯೇ ತೀರುತ್ತೇನೆ ಎಂಬ ಸಂಕಲ್ಪ ಮಾಡುತ್ತೇವೆ. ಆದರೆ ಕೆಲಸದ ಜಂಜಾಟದ ನಡುವೆ ನಾವು ಸಾಧಿಸಬೇಕಾದ ವಿಷಯವನ್ನೇ ಮರೆತುಬಿಡುತ್ತಿದ್ದೇವೆ. ಆ ರೀತಿ ಮಾಡಿದಾಗ ಕಳೆದ ವರ್ಷಕ್ಕೂ ಈ ವರ್ಷಕ್ಕೂ ಏನಿದೆ ವ್ಯತ್ಯಾಸ. ದಿನಗಳು ಅಥವಾ ವರ್ಷ ನಮಗಾಗಿ ಕಾಯುವುದಿಲ್ಲ. ಅದರ ಪಾಡಿಗೆ ಅದು ಸಾಗುತ್ತಿರುತ್ತದೆ. ನಾವು ಅದರ ಜತೆ ಸಾಗುತ್ತಿರಬೇಕು ಅಷ್ಟೇ. ಆದರೆ ನಾವು ಸಮಯದ ಜತೆ ಎಷ್ಟು ಬಾರಿ ಸರಿಯಾಗಿ ಸಾಗಿದ್ದೇವೆ ಅನ್ನೋದನ್ನು ಮನನ ಮಾಡಿಕೊಳ್ಳಬೇಕು.

ನಾವು ಪ್ರತೀ ವರ್ಷ ಹೊಸ ವರ್ಷದಂದು ಸಂಕಲ್ಪಗಳನ್ನು ಮಾಡುತ್ತೇವೆ. ಆದರೆ ವರ್ಷವಿಡೀ ಅದನ್ನು ಅನುಸರಿಸುವುದು ಕಷ್ಟವಾಗುತ್ತದೆ. ನಾವು ಮಾಡಿಕೊಂಡ ಸಂಕಲ್ಪಗಳ ಪೈಕಿ ವಾಸ್ತವವಾಗಿ ಕಾರ್ಯರೂಪಕ್ಕೆ ಬರುವುದು ಕೆಲವು ಮಾತ್ರ ಎಂಬ ಸತ್ಯ ನಮಗೆÇÉಾ ತಿಳಿದಿದೆ. ಈ ನಿರ್ಣಯಗಳನ್ನು ಗಟ್ಟಿಯಾಗಿ ಅನುಸರಿಸುವುದು ನಮ್ಮ ಕೈಯ್ಯÇÉೇ ಇರುವುದರಿಂದ ಮೊದಲು ನಾವು ದೃಢ ಸಂಕಲ್ಪವನ್ನು ಮಾಡಬೇಕು. ಪ್ರತೀ ದಿನ, ಕ್ಷಣ ಅದನ್ನು ನೆನಪಿಸಿಕೊಳ್ಳುತ್ತಿರಬೇಕು. ಈ ವರ್ಷ ಇದನ್ನು ಮಾಡಬೇಕು ಎಂದುಕೊಂದಿದ್ದರೆ ಮಾರನೇ ದಿನವೇ ಮರೆತುಬಿಡುವುದಲ್ಲ. ಬದಲಾಗಿ ನಾವು ಅದನ್ನು ಸಂಪೂರ್ಣಗೊಳಿಸಲು ಎಡವಿದÇÉೆÇÉಾ ನಾವು ತಲುಪಬೇಕಾದ ಗುರಿಯನ್ನು ನೆನಪಿಸಿಕೊಳ್ಳುತ್ತಿರಬೇಕು. ನಮ್ಮ ಮನಸ್ಸು ನಾವು ಹೇಳಿದಂತೆಯೇ ಇರುತ್ತದೆ. ಈ ವರ್ಷ ಒಳ್ಳೆಯದನ್ನು ಮಾಡಬೇಕು ಎಂದು ಪ್ರತಿ ಕ್ಷಣ ನಮ್ಮ ಮನಸ್ಸಿಗೆ ಹೇಳುತ್ತಾ ಅದನ್ನೇ ಯೋಚಿಸುತ್ತಾ ಇದ್ದರೆ ಖಂಡಿತ ಬದಲಾವಣೆ ಸಾಧ್ಯವಿದೆ.

ಪ್ರತೀ ದಿನವನ್ನು ಹೊಸವರ್ಷವೆಂದು ಭಾವಿಸುವುದು ರೆಸಲ್ಯೂಷನ್‌ ಗಳನ್ನು ಪೂರ್ಣಗೊಳಿಸಲು ಇರುವ ಇನ್ನೊಂದು ಹಾದಿ. ನಮಗೆ ದಿನದಲ್ಲಿ 24 ಗಂಟೆ ಸಿಗುವುದರಿಂದ ಅಷ್ಟು ಗಂಟೆಯಲ್ಲಿ ಎಷ್ಟು ಸಮಯವನ್ನು ನಾವು ಒಳ್ಳೆಯ ಕೆಲಸಕ್ಕೆ ಸದುಪಯೋಗಪಡಿಸಿಕೊಳ್ಳುತ್ತೇವೆ ಎಂಬುವುದರ ಕಡೆ ಗಮನ ಹರಿಸಬೇಕು. ಹೊಸ ವರ್ಷ ಎಂಬುವುದು ಖಾಲಿ ಪುಸ್ತಕದಂತೆ. ಪೆನ್ನು ನಮ್ಮ ಕೈಯÇÉೇ ಇರುವುದರಿಂದ ಸುಂದರವಾದ ಕಥೆಯನ್ನು ಬರೆಯಲು ಇದು ನಮಗೆ ಉತ್ತಮ ಅವಕಾಶ.

ಹೊಸ ವರ್ಷವೂ ಎಲ್ಲ ದಿನದಂತೆಯೇ ಒಂದು ದಿನಾನೇ ಅಲ್ವಾ. ಇದು ವರ್ಷ ಪ್ರಾರಂಭದ ಮೊದಲ ದಿನ ಅನ್ನೋದಷ್ಟೆ ವಿಶೇಷ. ಅದ್ಯಾಕೆ ಹೊಸ ವರ್ಷಕ್ಕೆ ಪಾರ್ಟಿ ಗಮ್ಮತ್ತು ಮಾಡಿ ಈ ವರ್ಷದಲ್ಲಿ ಹೀಗೆ ಮಾಡಲೇಬೇಕು, ಇದನ್ನು ಸಾಧಿಸಲೇಬೇಕು ಎಂಬ ರೆಸಲ್ಯೂಶನ್‌. ನಾಲ್ಕೇ ದಿನಕ್ಕೆ ಅದನ್ನೆಲ್ಲ ಮರೆತು ಮುಂದಿನ ವರ್ಷ ಮಾಡಿದರಾಯ್ತು ಅನ್ನೋ ಬದಲಾವಣೆ. ಅದರ ಬದಲಾಗಿ ಪ್ರತೀ ದಿನವನ್ನು ಹೊಸ ವರ್ಷವೆಂದು ಭಾವಿಸಿ ಹೊಸತನವನ್ನು ಕಂಡುಕೊಳ್ಳುವುದು ಉತ್ತಮ ಅಲ್ವಾ?.

-ಲಾವಣ್ಯ ಎಸ್‌.

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.