NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ


Team Udayavani, Mar 22, 2024, 3:17 PM IST

6-nss-camp

ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌)ಯ ಧ್ಯೇಯ ವಾಕ್ಯವಾದ “ಶ್ರಮಯೇವ ಜಯತೇ’ ತಿಳಿಸುವಂತೆ ಜೀವನದಲ್ಲಿ ಕಾಯಕ ಮಾಡಿದರಷ್ಟೇ ಕೈಲಾಸ. ಬದುಕು, ಸರಳವಾದ ಜೀವನದ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟಿದೆ ಈ ಬಾರಿ ನಮ್ಮ ಕಾಲೇಜು ಆಯೋಜಿಸಿದ ಏಳು ದಿನಗಳ ಎನ್‌ಎಸ್‌ಎಸ್‌ ಶಿಬಿರ. ಈ ಏಳು ದಿನ ವಿಶೇಷ ಚೇತನ ಮಕ್ಕಳೊಡನೆ ಕಳೆದ ಸಮಯ ನನ್ನ ಜೀವನದ ಅತ್ಯಮೂಲ್ಯ ಕ್ಷಣಗಳೆಂದರೆ ತಪ್ಪಾಗಳಾರದು. ಮಕ್ಕಳ ನಿಷ್ಕಲ್ಮಶ ಮನಸ್ಸು, ತುಂಟ ನಗು ಮತ್ತು ಅವರು ತೋರಿಸಿದ ಪ್ರೀತಿ ಶಿಬಿರದಲ್ಲಿ ಭಾಗವಹಿಸಿದ ನಮ್ಮನ್ನು ಮಂತ್ರಮುಗ್ದಗೊಳಿಸಿರುವುದಂತು ಸತ್ಯ.

ಈ ವರ್ಷ ಕಾಲೇಜಿನಿಂದ ವಿಶೇಷ ಚೇತನ ಮಕ್ಕಳ ಸಂಸ್ಥೆಯೊಂದರಲ್ಲಿ ಶಿಬಿರ ನಡೆದಿದ್ದು, ಮಕ್ಕಳು ಉತ್ಸಾಹದಿಂದ ಮಾಡುವ ಕೆಲಸಗಳು, ಕ್ರಾಫ್ಟ್ ತಯಾರಿಕೆ, ಗ್ರೀಟಿಂಗ್‌ ತಯಾರಿಕೆ ಹಾಗೂ ಇನ್ನಿತರ ಕರಕೌಶಲ ಗಳನ್ನು ನೋಡಿ ನಾವೂ ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲವನ್ನು ತುಂಬಿದೆ. ಈ ಶಿಬಿರ ಮುಗಿಯುವ ವೇಳೆಗೆ ನಮಗೊಂದು ಸ್ಫೂರ್ತಿ ಲಭಿಸಿದೆ. ನನ್ನ ಬದುಕಿನ ಜವಾಬ್ದಾರಿಗಳನ್ನು ಮರೆತು ಏಳು ದಿನಗಳ ಕಾಲ ಸಂಪೂರ್ಣವಾಗಿ ಶಿಬಿರದಲ್ಲಿ ತೊಡಗಿಸಿಕೊಂಡಿದ್ದು ನಮ್ಮಲ್ಲಿರುವ ಭಾವನೆಗಳಿಗೆ ಹೊಸದೊಂದು ಸ್ಪರ್ಶ ನೀಡಿದೆ ಎನ್ನಬಹುದು.

ಪ್ರತಿ ದಿನ ಬೆಳಿಗ್ಗೆ ನಾಲ್ಕು ಗಂಟೆಗೆ ಶುರುವಾಗುತ್ತಿದ್ದ ನಮ್ಮ ದಿನಚರಿ ರಾತ್ರಿ 11 ಗಂಟೆಯ ವರೆಗೆ ಮುಂದುವರೆಯುತ್ತಿತ್ತು. ಈ ಅವಧಿಯಲ್ಲಿ ನಡೆಯುತ್ತಿದ್ದ ವಿವಿಧ ಸಾಮಾಜಿಕ ಕಾರ್ಯಕ್ರಮಗಳು, ಶ್ರಮದಾನ ಜತೆಗೆ ನಮ್ಮ ಒಂದಿಷ್ಟು ಹರಟೆ, ನೃತ್ಯ ಎಲ್ಲವೂ ನಮ್ಮ ಉತ್ಸಾಹವನ್ನು ಹೆಚ್ಚಿಸಿತ್ತು. ಒಟ್ಟಾರೆಯಾಗಿ ನಮ್ಮ ಜೀವನದಲ್ಲಿ ಈ ಶಿಬಿರ ರಾಷ್ಟ್ರೀಯತೆಯ ಬಗ್ಗೆ ಅರಿವು ಮೂಡಿಸಿದೆ. ಶಿಬಿರದಲ್ಲಿ ಶಿಬಿರಾರ್ಥಿಗಳೆಲ್ಲರೂ ಯಾವುದೇ ಭೇದಭಾವವಿಲ್ಲದೆ ಒಗ್ಗೂಡಿ, ಜನಿಸಿದ ಮಾತ್ರಭೂಮಿಯಲ್ಲಿ ನಮ್ಮ ಬದುಕನ್ನು ನಿರ್ವಹಿಸಿ, ಅಸ್ಮಿತೆಯನ್ನು ಕಾಪಾಡಿಕೊಂಡು, ಶ್ರಮವಹಿಸಬೇಕು ಎಂಬುದನ್ನು  ತಿಳಿಸಿತು.

ಶಿಬಿರದ ನಡುವೆ ನಡೆದ ಸಭೆಗಳಲ್ಲಿ ಗಣ್ಯರ ಸ್ಪೂರ್ತಿಯ ಮಾತುಗಳು ಮನಕ್ಕೆ ಮುಟ್ಟುವಂತಿತ್ತು. ವಾರ್ಷಿಕ ವಿಶೇಷ ಶಿಬಿರದಲ್ಲಿ ವಿಶೇಷ ಮಕ್ಕಳೊಡನೆ ಕಳೆದ ಆ ದಿನಗಳು ನನ್ನ ಬದುಕಿನಲ್ಲಿ ಎಂದೂ ಮರೆಯಲಾಗದ ವಿಶೇಷ ದಿನಗಳಾಗಿದೆ ಎಂದು ಹೆಮ್ಮೆಯಿಂದ ಹೇಳಬಹುದು.

ಅಕ್ಷಯ ಭಟ್‌

ಎಂಜಿಎಂ, ಉಡುಪಿ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.