ಪ್ರಕೃತಿ ಉಳಿದರೆ ಮಾತ್ರ ಕುವೆಂಪು ಹುಟ್ಟಲು ಸಾಧ್ಯ


Team Udayavani, Jun 5, 2020, 11:11 AM IST

ಪ್ರಕೃತಿ ಉಳಿದರೆ ಮಾತ್ರ ಕುವೆಂಪು ಹುಟ್ಟಲು ಸಾಧ್ಯ

ಸಾಂದರ್ಭಿಕ ಚಿತ್ರ

ಕೋವಿಡ್ ದಿಂದ ಜನರಿಗೆ ಆಗಿರುವ ಅನಾಹುತವೇ ಹೆಚ್ಚು. ಆದರೆ ಪರಿಸರಕ್ಕೆ ಆದ ಉಪಕಾರವನ್ನು ನಾವು ಮರೆಯುವಂತಿಲ್ಲ. ಕಾರಣ ಇಷ್ಟೇ ಕೋವಿಡ್ ಸಂಕಷ್ಟದಿಂದ ದೇಶವೇ ಲಾಕ್‌ಡೌನ್‌ನಿಂದ ಕೈಗಾರಿಕೆಗಳನ್ನೆಲ್ಲ ಮುಚ್ಚಲಾಯಿತು. ಜನರ ಸಂಚಾರಕ್ಕೆ, ವಾಹನ ಓಡಾಟಕ್ಕೂ ಬ್ರೇಕ್‌ಬಿತ್ತು. ಇದರಿಂದ ಸ್ವಾರ್ಥಿ ಮನುಷ್ಯ ಮನೆ ಬಿಟ್ಟು ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಿಂದ ಪರಿಸರ ಸ್ವಲ್ಪ ಮಟ್ಟಿಗೆ ಪ್ರಶಾಂತವಾಗಿರಲು ಸಾಧ್ಯವಾಗಿದೆ. ಪ್ರತಿ ವರ್ಷವೂ ಪರಿಸರ ದಿನವನ್ನು ಆಚರಿಸುತಿದ್ದೇವೆ. ಆದರೆ ಈ ವರ್ಷದ ಪರಿಸರ ದಿನಾಚರಣೆಗೆ ಕೋವಿಡ್ ಜೀವ ತುಂಬಿದೆ.  ಸರಕಾರ ಗಂಗಾ ನದಿಯ ಶುದ್ಧೀಕರಣಕ್ಕೆ ಸಾಕಷ್ಟು ಅನುದಾನ ಮೀಸಲಾಗಿರಿಸಿದ್ದರೂ ಶುದ್ಧವಾಗದ ನೀರು ಲಾಕ್ ಡೌನ್‌ ನಿಂದಾಗಿ ನದಿಯಲ್ಲಿ ಶುದ್ಧ ನೀರಿನ ಹರಿವು ಕಾಣಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಗಂಗಾ ನದಿಯನ್ನು ಹೀಗೆ ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ನದಿ ತಟದ ಜನರ ಮೇಲಿದೆ.

ಪರಿಸರವನ್ನು ರಕ್ಷಿಸಲು ಕೆಲವೊಂದು ವಿನೂತನ ಪ್ರಯತ್ನಗಳನ್ನು ಮಾಡಬೇಕಿದೆ. ಸಾವಯವ ಕೃಷಿ ಪ್ರಸ್ತುತ ದಿನಗಳಲ್ಲಿ ರೈತರಿಗೆ ಕಷ್ಟವಾಗಬಹುದಾದರೂ ಸರಕಾರ ರೈತರಿಗೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹ ನೀಡಬೇಕಿದೆ. ಮನುಷ್ಯನ ದುರಾ ಸೆ ಎಂಬ ಕೊಚ್ಚೆಯಲ್ಲಿ ಬಿದ್ದು ಹಣದ ಆಸೆಗೆ ಮರಗಿಡಗಳನ್ನು ನಾಶ ಮಾಡಿ ಮಾಲಿನ್ಯಗಳನ್ನು ಸೃಷ್ಟಿಸಿ ಇಡೀ ಮನುಷ್ಯ ಕುಲವನ್ನೇ ಅಳಿವಿನ ಅಂಚಿಗೆ ತಳ್ಳುತ್ತಿದ್ದಾನೆ. ಅಂತಹ ವ್ಯಕ್ತಿಗಳಿಗೆ ಸಾಮಾನ್ಯ ತಿಳಿವಳಿಕೆಯನ್ನು ನೀಡಬೇಕಿದೆ. ಗಿಡಮರಗಳಿಲ್ಲದೆ ಮನುಷ್ಯ ಸಂಕುಲವೇ ಇರುವುದಿಲ್ಲ ಎಂಬ ವಿಷಯವನ್ನು ಮನವರಿಕೆ ಮಾಡಿ ನಮ್ಮ ಸುತ್ತಮುತ್ತಲಿನ ಪರಿಸರದ ಜತೆ ಅವಿನಾಭಾವ ಸಂಬಂಧವನ್ನು ಇಟ್ಟುಕೊಳ್ಳುವಂತೆ ಪರಿವರ್ತಿಸಬೇಕು.

ಮಾಲಿನ್ಯದ ಕಾರಣದಿಂದ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ ಮಹಲ್‌ ಹಳದಿ ಮತ್ತು ಹಸುರು ಬಣ್ಣಕ್ಕೆ ತಿರುಗಿದೆ. ಅಂದರೆ ಮಾನವ ಕುಲ ಐತಿಹಾಸಿಕ ಸ್ಮಾರಕಗಳಿಗೂ ಕುತ್ತು ತಂದಿದೆ ಎಂದಾಯಿತು. ಪರಿಸರ ಮಾಲಿನ್ಯವಾಗದಂತೆ ಎಚ್ಚರಿಕೆ ವಹಿಸುವ ಮೂಲಕ ಇಂತಹ ಅನಾಹುತಗಳಾಗದಂತೆ ತಡೆಗಟ್ಟಬೇಕಿದೆ.

ನಮ್ಮ ದಿನನಿತ್ಯದ ಜೀವನದಲ್ಲಿ ಪ್ಲಾಸ್ಟಿಕ್‌ ಆವಶ್ಯಕ ವಸ್ತುವಾಗಿದೆ. ಪ್ಲಾಸ್ಟಿಕ್‌ ನಿಂದಲೂ ನಮಗೆ ಆಪತ್ತು ಕಾದಿದೆ. ಆದಷ್ಟು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಬ್ಯಾಗ್‌ಗಳನ್ನು ಬಳಸುವುದು ಅನಿವಾರ್ಯ. ಕುವೆಂಪು ಹುಟ್ಟಿದ ನಾಡಿನವರು ನಾವು ಪ್ರಕೃತಿ ಮಡಿಲಿನಲ್ಲಿ ಬರೆದ ಕಥೆ, ಕವನ, ಕಾದಂಬರಿಗಳನ್ನು ಓದುತ್ತಾ ಬೆಳೆದವರು. ಪ್ರಕೃತಿ ಉಳಿದರೆ ಮಾತ್ರ ಭವಿಷ್ಯದಲ್ಲಿ ಮತ್ತೂಮ್ಮೆ ಕುವೆಂಪು ಹುಟ್ಟಲು ಸಾಧ್ಯ.

-ಅನಿಲ್‌ ಗುಮ್ಮಘಟ್ಟ
ವಿಶ್ವವಿದ್ಯಾನಿಲಯ ಕಲಾ ಕಾಲೇಜು, ತುಮಕೂರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.